Homeಮುಖಪುಟಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಪೂರೈಕೆ ಅಸ್ತವ್ಯಸ್ತಗೊಂಡಿದ್ದರಿಂದ ಐಸಿಯುನಲ್ಲಿದ್ದ 11 ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಆಂಧ್ರಪ್ರದೇಶದ ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದ್‌ಊ, ದೇಶವೇ ಇದರ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ, ವೈದ್ಯಕೀಯ ಆಮ್ಲಜನಕದ ಕೊರತೆಯು ಪ್ರಮುಖ ಸವಾಲಾಗಿ ಹೊರಹೊಮ್ಮಿದೆ.

ಎಸ್‌ವಿಆರ್ ರುಯಾ ಆಸ್ಪತ್ರೆಯಲ್ಲಿ ಐಸಿಯು ವಾರ್ಡ್‌ ಒಳಗೆ ವೈದ್ಯಕೀಯ ಸಿಬ್ಬಂದಿ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸುಮಾರು 25 ರಿಂದ 45 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ ಎಂದು ಮೃತ ರೋಗಿಗಳ ಕುಟುಂಬಸ್ಥರು ಆರೋಪಿಸುತ್ತಿದ್ದರೂ, ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡಿದ ಆರೋಪ: ಪ್ರಕಾಶ್ ಬೆಳವಾಡಿ ವಿರುದ್ಧ ದೂರು ಸಲ್ಲಿಸಿದ ವಕೀಲ

“ಆಮ್ಲಜನಕ ಸಿಲಿಂಡರ್ ಮರು ಜೋಡಿಸುವಲ್ಲಿ ಐದು ನಿಮಿಷಗಳು ವಿಳಂಬವಾಗಿದೆ, ಇದರಿಂದ ರ್ದುಘಟನೆ ನಡೆದಿದೆ” ಎಂದು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಹೇಳಿದ್ದಾರೆ.

“ಐದು ನಿಮಿಷಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಪುನಃಸ್ಥಾಪಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಾವು ಬೃಹತ್ ಸಿಲಿಂಡರ್‌ಗಳನ್ನು ಸಂಪರ್ಕಿಸಿದ್ದೇವೆ, ಚಿಂತೆ ಮಾಡಲು ಯಾವುದೇ ಕಾರಣವಿಲ್ಲ. ವೈದ್ಯಕೀಯ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಒಂದು ದೊಡ್ಡ ಅನಾಹುತ ತಪ್ಪಿದೆ. ಘಟನೆ ನಡೆದ ತಕ್ಷಣ ಸುಮಾರು 30 ವೈದ್ಯರು ತಕ್ಷಣ ಐಸಿಯುಗೆ ಹೋಗಿ ರೋಗಿಗಳನ್ನು ಉಪಚರಿಸಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಆಮ್ಲಜನಕ ಟ್ಯಾಂಕರ್ ಬರುವುದು ವಿಳಂಬವಾಗಿದ್ದರಿಂದ ತೊಂದರೆಯಾಗಿದೆ ಎಂದರು. ರುಯಾ ಆಸ್ಪತ್ರೆಯು 1,100 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದ್ದು, ಐಸಿಯುನಲ್ಲಿ 100 ಕ್ಕೂ ಹೆಚ್ಚು ರೋಗಿಗಳು ಮತ್ತು 400 ಆಮ್ಲಜನಕ ಸಂಪರ್ಕಿತ ಹಾಸಿಗೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 77 ಜನ ಎಮ್ ಎಲ್ ಎ ಗಳಿಗೆ ಕೇಂದ್ರ ಬದ್ರತೆ ಕೊಡಲು ಕಾರಣವೇನು ಅಷ್ಟೆಲ್ಲಾ ರಿಸ್ಕ್ ಇದ್ದರೆ ಎಲ್ಲರೂ ರಾಜಿನಾಮೆ ಕೊಟ್ಟು ಮನೆಗೆ ಹೋಗಿ. ಅದನ್ನ ಬಿಟ್ಟು ಇವರಿಗೆ ಅದರ ಖರ್ಚು ಕೊಡೋರು ಜನರೇ ಮೋದಿಗೆ ಗೊತ್ತಿರಬೇಕು.

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...