Homeಮುಖಪುಟಲಾಕ್‌ಡೌನ್ - ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

ಲಾಕ್‌ಡೌನ್ – ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

- Advertisement -
- Advertisement -

ಮಸ್ಕಿ ಉಪ ಚುನಾವಣೆಯಲ್ಲಿ ಆಡಳಿರೂಢ ಪಕ್ಷದ ಅಭ್ಯರ್ಥಿ ಸೋಲುವಂತೆ ಮಾಡಿದ್ದರಲ್ಲಿ ಎನ್‌ಆರ್‌ಬಿಸಿ 5ಎ ನೀರಾವರಿ ಕಾಲುವೆ ಹೋರಾಟದ ಪ್ರಧಾನ ಪಾತ್ರವಿದೆ. ಅದಕ್ಕೂ ಮುಖ್ಯವಾಗಿ ದೆಹಲಿಯ ಗಡಿಗಳಲ್ಲಿನ ರೈತರ ಹೋರಾಟವನ್ನು ಬಗ್ಗುಬಡಿಯಲು ಸಾಂಕ್ರಾಮಿಕ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಪ್ರಭುತ್ವಗಳು, ಮುಖ್ಯವಾಗಿ ಮೋದಿ ಸರ್ಕಾರವು ಯತ್ನಿಸುತ್ತಿರುವುದರ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ನೀರಾವರಿ ಹೋರಾಟವೊಂದು ಅಡೆತಡೆಗಳನ್ನು ಮೀರಿ ಮುಂದುವರೆದಿದೆ.

ದೆಹಲಿ ಗಡಿಗಳಲ್ಲಿ ಕಂಡು ಬರುತ್ತಿರುವ ಹೋರಾಟದ ದೃಢತೆ ಮಸ್ಕಿಯಲ್ಲೂ ವ್ಯಕ್ತವಾಗುತ್ತಿದೆ.
ಇವತ್ತು 5-ಎ ನೀರಾವರಿ ಹೋರಾಟ 173ನೇ ದಿನಕ್ಕೆ ತಲುಪಿದೆ. ಚುನಾವಣೆ ನಂತರವೂ ದೃಢವಾಗಿ ಮುನ್ನುಗ್ಗುತ್ತಿದೆ.

ನಿನ್ನೆಯಿಂದ ಲಾಕ್‌ಡೌನ್ ಶುರುವಾದ ನಂತರ ಈ ಪ್ರತಿಭಟನೆ ನಿಲ್ಲಿಸಬೇಕು ಎಂದು ಪೊಲೀಸರು, ಅಂದರೆ ಸರ್ಕಾರ ಒತ್ತಡ ಹೇರುತ್ತಿದೆ. ನಾವು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡೇ ಹೋರಾಟ ಮುಂದುವರೆಸುತ್ತೇವೆ ಎಂದು ರೈತರು ಸ್ಪಷ್ಟವಾಗಿ ಹೇಳುತ್ತಿದ್ದಾರೆ.
ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ರೈತರ ಮತ್ತು ಶ್ರಮಿಕರ ಹೋರಾಟಗಳನ್ನು ಮುರಿಯಲು ಹಲವು ಕುತಂತ್ರಗಳನ್ನು ಮಾಡುತ್ತ ಬರಲಾಗಿದೆ. ಈಗ ಕೊರೋನಾ ಬಿಕ್ಕಟ್ಟು, ಲಾಕ್‌ಡೌನ್‌ಗಳ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪರ ಮತ್ತು ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ, ‘ನಾವು ಯಾವುದೇ ನಿಯಮ ಉಲ್ಲಂಘಿಸುತ್ತಿಲ್ಲ. ಪ್ರತಿಭಟನೆಯಲ್ಲಿ ಇರುವವರು ಮಾಸ್ಕ್ ಧರಿಸುತ್ತಿದ್ದಾರೆ, ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಜಾಸ್ತಿ ಜನರನ್ನು ಸೇರಿಸದೇ ಇದನ್ನು ಸಾಂಕೇತಿಕ ಪ್ರತಿಭಟನೆಯನ್ನಾಗಿ ಮುಂದುವರೆಸಿದ್ದೇವೆ. ಇದು ಈಗ ಒಂದೇ ಊರಿಗೆ ಸಮೀತವಾಗಿಲ್ಲ. ಪ್ರತಿದಿನ ಬೇರೆಬೇರೆ ಹಳ್ಳಿಗಳಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ’ ಎಂದರು.

ಪ್ರತಿಭಟನೆಯಲ್ಲಿರುವ ಕೆಲವು ಯುವಕರು, ‘ಎಫ್‌ಐಆರ್ ದಾಖಲಿಸತ್ತೇವೆ ಎಂದೆಲ್ಲ ಪೊಲೀಸರು ಹೆದರಿಸುತ್ತಿದ್ದಾರೆ. ನಾವು ಮನೆಮನೆಗೂ ಈ ಹೋರಾಟ ಒಯ್ಯತ್ತೇವೆ. ಜನರು ಮನೆ ಮುಂದೆ ಬ್ಯಾನರ್ ಕಟ್ಟಿ ಅವರ ಮನೆ ಕಟ್ಟೆಗಳ ಮೇಲೆಯೇ ಸಾಂಕೇತಿಕ ಹೋರಾಟ ನಡೆಯುವಂತೆ ಮಾಡುತ್ತೇವೆ’ ಎಂದು ದೃಢನಿರ್ಧಾರ ಮಾಡಿದ್ದಾರೆ.

ಮಸ್ಕಿ ತಾಲೂಕಿನ 58 ಗ್ರಾಮಗಳ ಜಮೀನುಗಳಿಗೆ ಕೃಷ್ಣಾ ನದಿಯ ನೀರು ಒದಗಿಸುವ 5-ಎ ನೀರಾವರಿ ಯೋಜನೆ ಜಾರಿ ಆಗಬೇಕೆಂದು 173 ದಿನಗಳಿಂದ ಸತತ ಹೋರಾಟ ನಡೆದಿದೆ. ಇದು ಈ ಸಲದ ಉಪ ಉನಾವಣೆ ಫಲಿತಾಶದಲ್ಲೂ ಪ್ರಮುಖ ಪರಿಣಾಮ ಬೀರಿದ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋಲು ಉಂಡಿದ್ದಾರೆ.

 * ಪಿ.ಕೆ ಮಲ್ಲನಗೌಡರ್


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...