Homeಕರೋನಾ ತಲ್ಲಣಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಈ ಮೃತದೇಹಗಳು ಉತ್ತರ ಪ್ರದೇಶದಲ್ಲಿ ಅಧಿಕಾರಿಗಳು ಮುಚ್ಚಿಡುತ್ತಿರುವ ಕೊರೊನಾ ಸಾವುಗಳಿಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -
- Advertisement -

ಸೋಮವಾರ ಬಿಹಾರದ ಬಕ್ಸಾರ್‌ನ ಗಂಗಾ ನದಿ ತಟದಲ್ಲಿ ನೂರಕ್ಕೂ ಹೆಚ್ಚು ಮೃತದೇಹಗಳು ಕಂಡು ಬಂದಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಈಗ ಬಕ್ಸಾರ್‌ನಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಘಾಜಿಪುರದಲ್ಲಿಯೂ ಗಂಗೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಸತತ ಎರಡನೇ ದಿನವೂ ಗಂಗಾ ನದಿ ದಂಡೆಯಲ್ಲಿ ಮೃತದೇಹಗಳು ಕಂಡು ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಮೃತ ದೇಹಗಳು ಉತ್ತರ ಪ್ರದೇಶದಿಂದ ಹರಿಯ ಬಿಡಲಾಗಿದೆ ಎಂದು ಬಿಹಾರದ ಅಧಿಕಾರಿಗಳು ಆರೋಪಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಮೃತದೇಹಗಳನ್ನು ನೀರಿಗೆ ಬಿಡುವ ಸಂಪ್ರದಾಯವಿಲ್ಲ ಎಂದು ವಾದಿಸಿದ್ದಾರೆ.

ಉತ್ತರ ಭಾರತದ ಗ್ರಾಮೀಣ ಭಾಗಗಳಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವುದರಿಂದ, ನದಿಯಲ್ಲಿ ತೇಲುತ್ತಿರುವ ಶವಗಳು ಕೋವಿಡ್ ಸೋಂಕಿತ ರೋಗಿಗಳ ಮೃತದೇಹಗಳೆಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಗ್ರಾಮೀಣ ಶವಾಗಾರಗಳಲ್ಲಿ ಯಾವುದೇ ಕೊರೊನಾ ನಿಯಮಾವಳಿಗಳನ್ನು ಪಾಲಿಸದಿರುವ ಕಾರಣ, ಈ ಮೃತದೇಹಗಳಿಂದ ಮತ್ತಷ್ಟು ಸೋಂಕು ಹರಡಬಹುದೆಂಬ ಭಯದಲ್ಲಿದ್ದಾರೆ ಸ್ಥಳೀಯರು. ನದಿಯಲ್ಲಿ ತೇಲುತ್ತಿರುವ ಶವಗಳನ್ನು ಆದಷ್ಟು ಬೇಗನೆ ರವಾನಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ನೀರಿನಲ್ಲಿ ಉಂಟಾಗುವ ಮಾಲಿನ್ಯವು ರೋಗದ ತ್ವರಿತ ಹರಡುವಿಕೆಗೆ ಕಾರಣವಾಗಬಹುದು ಎಂದು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದು, ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

“ನಮಗೆ ಮೃತದೇಹಗಳು ತೇಲುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ನಮ್ಮ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಇವುಗಳು ಎಲ್ಲಿಂದ ಬಂದಿವೆ ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಘಾಜಿಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂಪಿ ಸಿಂಗ್ ಹೇಳಿದ್ದಾರೆ.

ಬಕ್ಸಾರ್ ಘಟನೆಯನ್ನು ಉಲ್ಲೇಖಿಸಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ರಾಜ್ಯಗಳನ್ನು ಕೇಳಿಕೊಂಡಿದ್ದಾರೆ.

“ಬಿಹಾರದ ಬಕ್ಸಾರ್ ಪ್ರದೇಶದ ಗಂಗಾ ನದಿಯಲ್ಲಿ ಶವಗಳು ತೇಲುತ್ತಿರುವ ಘಟನೆ ದುರದೃಷ್ಟಕರ. ಇದರ ಕುರಿತು ಖಂಡಿತವಾಗಿಯೂ ತನಿಖೆ ನಡೆಯಬೇಕಾಗಿದೆ” ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ಉತ್ತರ ಪ್ರದೇಶದ ಮತ್ತು ಬಿಹಾರದ ಗಡಿಯಲ್ಲಿರುವ ಚೌಸಾ ಪಟ್ಟಣದಲ್ಲಿ ಸೋಮವಾರ 100 ಕ್ಕೂ ಹೆಚ್ಚು ಮೃತ ದೇಹಗಳು ಗಂಗಾ ನದಿಯಲ್ಲಿ ತೇಲುತ್ತಾ ನದಿ ದಡಗಳಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದವು. ಈ ದೃಶ್ಯಗಳನ್ನು ಕಂಡ  ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದರು.

ಗಂಗಾ ನದಿ ದಂಡೆಯಲ್ಲಿ ತೇಲುತ್ತಿರುವ ಈ ಮೃತ ದೇಹಗಳು ಉತ್ತರ ಪ್ರದೇಶ ಮತ್ತು ಬಿಹಾರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿವೆ. ಜೊತೆಗೆ ಈ ಮೃತದೇಹಗಳು ಉತ್ತರ ಪ್ರದೇಶದಲ್ಲಿ ಅಧಿಕಾರಿಗಳು ಮುಚ್ಚಿಡುತ್ತಿರುವ ಕೊರೊನಾ ಸಾವುಗಳಿಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...