Homeಕರೋನಾ ತಲ್ಲಣತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಈ ಪಟ್ಟಿ "ಅಧಿಕೃತ ಮೂಲಗಳಿಂದ" ಬಂದಿಲ್ಲ ಎಂದು ಬಿಬಿಎಂಪಿಯ ಮೂವರು ಅಧಿಕಾರಿಗಳು ದಿ ಕ್ವಿಂಟ್‌ಗೆ ದೃಢಪಡಿಸಿದ್ದಾರೆ

- Advertisement -
- Advertisement -

ಮೇ 4 ರಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಗಳೂರು ದಕ್ಷಿಣ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕೋವಿಡ್ ವಾರ್‌ರೂಮಿಗೆ ಎಂಟ್ರಿ ನೀಡಿದರು. (ಮಾಧ್ಯಮಗಳ ಪ್ರಕಾರ ಇದು ದಾಳಿ). ನಂತರ ಅವರು 16 ಮುಸ್ಲಿಂ ಹೆಸರುಗಳನ್ನು ಓದಿದರು, “ಇವರೆಲ್ಲಾ ಯಾರು? ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು?” ಎಂದು ಪ್ರಶ್ನಿಸಿದ್ದರು ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 16 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತೇಜಸ್ವಿ ಸೂರ್ಯ ನಂತರ ಪತ್ರಿಕಾಗೋಷ್ಠಿ ಕರೆದು , ಬಿಬಿಎಂಪಿಯಲ್ಲಿ ಹಾಸಿಗೆ ಹಂಚಿಕೆ ಹಗರಣವನ್ನು ಬಹಿರಂಗಪಡಿಸಿದರು, ಹೆಚ್ಚಿನ ದರವನ್ನು ಪಾವತಿಸುವವರಿಗೆ ಹಾಸಿಗೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಸ್ವಲ್ಪ ಸಮಯದ ನಂತರ, 16 ಮುಸ್ಲಿಂ ಗುತ್ತಿಗೆ ನೌಕರರನ್ನು ಬಿಬಿಎಂಪಿ ವಾರ್‌ ರೂಂನಿಂದ ಯಾವುದೇ ಕಾರಣವಿಲ್ಲದೆ ತೆಗೆದುಹಾಕಲಾಯಿತು. ಆದರೆ ನಂತರ ಅವರೆಲ್ಲರೂ ಅಮಾಯಕರೆಂದು ಬೆಡ್ ಬ್ಲಾಕಿಂಕ್ ದಂಧೆಯಲ್ಲಿ ಬಿಜೆಪಿ ಶಾಸಕರೇ ಭಾಗಿಯಾಗಿರುವುದು ಮಾಧ್ಯಮಗಳಿಂದ ಬಹಿರಂಗವಾಯಿತು. ಆಗಿನಿಂದ ತೇಜಸ್ವಿ ಸೂರ್ಯ ನನಗೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಲಿಸ್ಟ್ ಕೊಟ್ಟರು. ನಾನು ಓದಿದೆ ಅಷ್ಟೇ ಎಂದು ಹೇಳುತ್ತಿದ್ದಾರೆ.

ಆದರೆ ಬಿಬಿಎಂಪಿ ಅಂತಹ ಪಟ್ಟಿ ನೀಡಿಯೇ ಇಲ್ಲ ಎಂದು ಆಂಗ್ಲ ವೆಬ್ ಪೋರ್ಟಲ್ ದಿ ಕ್ವಿಂಟ್ ಕಂಡುಕೊಂಡಿದೆ. ಆ ತರಹದ ಕೋಮುವಾದಿ ಮನಸ್ಸಿನ ಪಟ್ಟಿ ತಯಾರಿಸಿದ್ದು ಯಾರು? ಹಾಗಿದ್ದರೆ, ಯಾರ ಮೂಲಕ ಸಂಸದರಿಗೆ ಅದು ತಲುಪಿತು?

ಬೆಂಗಳೂರು ಮಹಾನಗರ ಪಾಲಿಕೆ ಈ ಪಟ್ಟಿಯನ್ನು ತಯಾರಿಸಿಲ್ಲ ಅಥವಾ ತೇಜಸ್ವಿ ಸೂರ್ಯರಿಗೆ ತನ್ನ ಗುತ್ತಿಗೆ ನೌಕರರ ಹೆಸರನ್ನು ತಿಳಿಸಿಲ್ಲ ಎಂದು ಮೂವರು ಬಿಬಿಎಂಪಿ ಅಧಿಕಾರಿಗಳು ದಿ ಕ್ವಿಂಟ್‌ಗೆ ಖಚಿತಪಡಿಸಿದ್ದಾರೆ.

ಮೇ 10 ರಂದು, ಬಿಬಿಎಂಪಿಯು ಎಲ್ಲಾ 16 ಜನರನ್ನು ಪುನಃ ಕೆಲಸಕ್ಕೆ ನೇಮಿಸಿತು. ಬೆಂಗಳೂರು ಪೊಲೀಸರ ಪ್ರಕಾರ, ಆಪಾದಿತ ‘ಬೆಡ್-ಹಗರಣ’ದೊಂದಿಗೆ ಅವರಿಗೆ ಯಾವುದೇ ಯಾವುದೇ ಸಂಬಂಧವಿಲ್ಲ,

ಸೂರ್ಯ ಹೆಸರಿಸಿದ ಪಟ್ಟಿ ಅಧಿಕೃತವಲ್ಲ!

ಮೇ 10 ರಂದು ತೇಜಸ್ವಿ ಸೂರ್ಯ ಬೆಂಗಳೂರು ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸಿದರು. ಹಾಗೆ ಹೆಸರುಗಳನ್ನು ಏಕೆ ಓದಿರಿ? ಯಾರೋ ಕೊಟ್ಟ ಹೆಸರುಗಳನ್ನು ಪರಿಶೀಲನೆ ಮಾಡದೇ ಒಂದು ಕೋಮಿನ ಯುವ ಉದ್ಯೋಗಿಗಳನ್ನು ಏಕೆ ಬಲಿಪಶು ಮಾಡಲು, ಆ ಮೂಲಕ ಕೋಮು ಸೌಹಾರ್ದ ಕದಡಲು ಯತ್ನಿಸಿದಿರಲ್ಲವೇ? ಎಂದು ಪತ್ರಕರ್ತರು ಕೇಳಿದರು. ಆದರೆ ಆಗಲೂ ಸಂಸದ ಸೂರ್ಯ ಅವರು ತಮ್ಮ ಹಿಂದಿನ ಉತ್ತರವನ್ನು ಪುನರಾವರ್ತಿಸಿದರು, ಅಂದರೆ “ನನಗೆ ಅಧಿಕಾರಿಗಳು ನೀಡಲಾದ” ಪಟ್ಟಿಯಿಂದ ಓದಿದ್ದೇನೆ ಎಂಬ ಉತ್ತರ!

ರಾಜಕೀಯ ಒತ್ತಡದ ಕಾರಣಕ್ಕೆ ತಮ್ಮ ಹೆಸರು ಗುರುತಿಸಿಕೊಳ್ಳಲು ಇಷ್ಟಪಡದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ದಿ ಕ್ವಿಂಟ್ ಪತ್ರಿಕೆಗೆ ಹೀಗೆ ಹೇಳಿದ್ದಾರೆ, “ಬಿಬಿಎಂಪಿಯು ವಾರ್‌ರೂಮಿನಲ್ಲಿ ಉದ್ಯೋಗದಲ್ಲಿದ್ದ ಎಲ್ಲಾ 214 ಜನರ ಪಟ್ಟಿಯನ್ನು ಹೊಂದಿದೆ. ನಿರ್ದಿಷ್ಟ ನಂಬಿಕೆಗೆ, ಧರ್ಮಕ್ಕೆ ಸೇರಿದವರ ಪ್ರತ್ಯೇಕ ಪಟ್ಟಿಯನ್ನು ನಾವು ಮಾಡಿಲ್ಲ. ಈ ಪಟ್ಟಿಯನ್ನು ನಮ್ಮ ಅಧಿಕಾರಿಗಳು ತಯಾರಿಸಿಲ್ಲ. ಅದರ ಅಗತ್ಯವೂ ಇಲ್ಲ….”

ಬಿಬಿಎಂಪಿ ವಿಷಯಗಳ ಬಗ್ಗೆ ತಿಳಿದಿರುವ ಇನ್ನೊಬ್ಬ ಅಧಿಕಾರಿ, “ಇದು ಕೋಮುವಾದಿ ನೆಲೆಯಲ್ಲಿ ನೌಕರರನ್ನು ವರ್ಗಿಕರಿಸಿದ ಪಟ್ಟಿ. ಅಂತಹ ಪಟ್ಟಿಯನ್ನು ಬಿಬಿಎಂಪಿ ಎಂದೂ ತಯಾರು ಮಾಡಿಲ್ಲ” ಎಂದಿದ್ದಾರೆ.

ಒಮ್ಮೆ ಪಟ್ಟಿಯಲ್ಲಿರುವ ಹೆಸರುಗಳನ್ನು ಸೂರ್ಯ ಓದಿದ ನಂತರ, ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಯಿತು. ಇದರಿಂದಾಗಿ ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಬಿಬಿಎಂಪಿ ಅಧಿಕಾರಿಗಳನ್ನು “ಹಿಂದೂ ಜೀವಗಳನ್ನು” ತೆಗೆದುಕೊಂಡ “ಭಯೋತ್ಪಾದಕರು” ಎಂದು ಗುರಿಯಾಗಿಸಲಾಯಿತು.

ಸೂರ್ಯ ಭೇಟಿ ನೀಡಿದಾಗ ವಾರ್‌ರೂಮಿನಲ್ಲಿದ್ದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮಿಗೆ ಕಾಲಿಟ್ಟಾಗ ಕಾಗದದ ತುಂಡೊಂದನ್ನು ತಂದಿದ್ದರು. ಅವರು ಯಾವುದೇ ಬಿಬಿಎಂಪಿ ಅಧಿಕಾರಿಯೊಂದಿಗೆ ಪಟ್ಟಿ ಅಧಿಕೃತವಾಗಿದೆಯೇ ಅಥವಾ ಯಾವುದೇ ಉದ್ದೇಶಕ್ಕಾಗಿ ಅದನ್ನು ತಯಾರಿಸಿದ್ದಾರೆ ಎಂದು ಪರಿಶೀಲಿಸಲಿಲ್ಲ” ಎಂದು ಬಿಬಿಎಂಪಿ ಅಧಿಕಾರಿಗಳು ಕ್ವಿಂಟ್‌ಗೆ ತಿಳಿಸಿದ್ದಾರೆ.  ಘಟನೆ ಕುರಿತು ಬಿಬಿಎಂಪಿ ಅಧಿಕೃತ ಹೇಳಿಕೆ ನೀಡಿಲ್ಲ.

ಪಟ್ಟಿ ಎಲ್ಲಿಂದ ಬಂತು?

ಕ್ವಿಂಟ್ ಪೋರ್ಟಲ್ ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಅನ್ನು ಸಂಪರ್ಕಿಸಿದೆ. ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಬಿಬಿಎಂಪಿ ವಾರ್‌ರೂಮಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಕಾರ್ಯವಿಧಾನದ ಪ್ರಕಾರ ಅವರು ತಮ್ಮ ನೌಕರರ ಹೆಸರನ್ನು ಬಿಬಿಎಂಪಿಗೆ ನೀಡಿದ್ದಾರೆ ಎಂದು ಸಂಸ್ಥೆ ದೃಢ ಪಡಿಸಿದೆ. “ನಮ್ಮ ಪಟ್ಟಿಯಲ್ಲಿ ಹೆಚ್ಚಿನ ಹೆಸರುಗಳಿವೆ. ಕಳೆದ 10-15 ದಿನಗಳಲ್ಲಿ ನೇಮಕಗೊಂಡವರ ಹೆಸರನ್ನು ಮಾತ್ರ ಸಂಸದರು ಓದಿದ್ದಾರೆ”ಎಂದು ಕ್ರಿಸ್ಟಲ್ ಇನ್ಫೋಸಿಸ್ಟಮ್‌ನಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಪನಿಯು ಪಟ್ಟಿಯನ್ನು ಸಂಸದರಿಗೆ ಒದಗಿಸಿದೆಯೇ? ಎಂಬ ಪ್ರಶ್ನೆಗೆ, “ಸಂಸದರು ಈ ಹೆಸರುಗಳನ್ನು ಹೇಗೆ ಗುರುತಿಸಿದ್ದಾರೆಂದು ನಮಗೆ ತಿಳಿದಿಲ್ಲ. ಇದು ನಮ್ಮಿಂದ ಪಡೆದ ಪಟ್ಟಿಯಲ್ಲ” ಎಂದು ಕ್ರಿಸ್ಟಲ್ ಉದ್ಯೋಗಿ ಹೇಳಿದರು.

ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮ್ ಮೇಲೆ ನಿಯಂತ್ರಣವನ್ನು ಬಯಸಿದ್ದರು ಮತ್ತು ನೇಮಕಾತಿ ಮತ್ತು ನಿರ್ವಹಣೆಯಲ್ಲಿ ನಿಯಂತ್ರಣ ಬಯಸಿದ್ದರು. ಅವರು ಇಲ್ಲಿಗೆ ಕಾಲಿಟ್ಟಾಗ ಅವರು ನೌಕರರನ್ನು ಭಯಭೀತರಾಗಿಸಲು ಕೋಮು ಉದ್ವೇಗವನ್ನು ಸೃಷ್ಟಿಸಲು ಪ್ರಯತ್ನಿಸಿದರು. ಇದು ಅವರ ರಾಜಕೀಯ ಶೈಲಿಗೆ ಹೊಂದುವಂತೆಯೇ ಇತ್ತು. ಈ ಪಟ್ಟಿಯನ್ನು ಸಂಸದರ ತಂಡವೇ ತಯಾರಿಸಿದಂತೆ ಕಾಣುತ್ತದೆ’ ಎಂದು ಅಧಿಕಾರಿ ಆರೋಪಿಸಿದ್ದಾರೆ. “ಸಂಸದರ ತಂಡದ ಹಲವಾರು ಸದಸ್ಯರು ಇತ್ತೀಚಿನ ದಿನಗಳಲ್ಲಿ ವಾರ್‌ರೂಮಿಗೆ ಭೇಟಿ ನೀಡಿದ್ದರು. ಅವರಲ್ಲಿ ಯಾರಾದರೂ ಪಟ್ಟಿಯನ್ನು ತಯರಿಸಬಹುದಿತ್ತು. ಈ ಪಟ್ಟಿಯು ಅಧಿಕೃತವಲ್ಲ… ಕೋಮು ವಿಭಜನೆಗಾಗಿ ರಚಿಸಲಾದ ಉದ್ದೇಶವನ್ನು ಮಾತ್ರ ಪೂರೈಸುತ್ತದೆ” ಎಂದು ಅಧಿಕಾರಿ ಹೇಳಿದರು.

ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಮೂವರು ಬಿಜೆಪಿ ಶಾಸಕರೊಂದಿಗೆ ಸಂಸದರು ಬಿಬಿಎಂಪಿ ಬಾರ್‌ರೂಮಿಗೆ ಭೇಟಿ ನೀಡಿದ್ದರು.

ಪಟ್ಟಿಯನ್ನು ಏಕೆ ತಯಾರಿಸಲಾಯಿತು?

ತೇಜಸ್ವಿ ಸೂರ್ಯ ಪ್ರವೇಶಿಸುವ ಮೊದಲು, ಅವರ ದಕ್ಷಿಣ ಬೆಂಗಳೂರು ಕಚೇರಿಯ ಮೂವರು ಸದಸ್ಯರು ವಾರ್‌ರೂಮಿಗೆ ಭೇಟಿ ನೀಡಿದ್ದರು ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಂಸದರ ತಂಡವು, ಹಾಸಿಗೆಗಳನ್ನು ಹೇಗೆ ಹಂಚಲಾಗುತ್ತದೆ ಮತ್ತು ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದೆಲ್ಲ ಪ್ರಶ್ನೆ ಮಾಡಿತು. ತಾವು ಕೊರೊನಾ ವಾರ್‌ರೂಮಿನ ಭಾಗವಾಗಬಹುದೇ ಎಂಬ ಪ್ರಶ್ನೆಗಳನ್ನು ಅವರು ಎತ್ತಿದ್ದರು. ಸರಿಯಾದ ಪ್ರಕ್ರಿಯೆಯ ಪ್ರಕಾರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರಿಗೆ ತಿಳಿಸಲಾಯಿತು. ಅದರ ಮರುದಿನವೇ, ಸಂಸದರು ಕಚೇರಿಗೆ ಭೇಟಿ (ದಾಳಿ) ನೀಡಿದರು” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಎಂ.ಪಿ ತಂಡವು ವಿನಾಶಕಾರಿ ಉದ್ದೇಶ ಹೊಂದಿದ್ದರಿಂದ ಈ ಪಟ್ಟಿಯನ್ನು ಸಂಗ್ರಹಿಸಲಾಗಿದೆ. “ಬಿಬಿಎಂಪಿ ಸಂಸದರ ಹಸ್ತಕ್ಷೇಪವನ್ನು ಬಯಸಲಿಲ್ಲ ಮತ್ತು ಇದು ಉದ್ವಿಗ್ನತೆಗೆ ಕಾರಣವಾಯಿತು. ಬಿಬಿಎಂಪಿ ಕೇವಲ ಮುಸ್ಲಿಂ ಸದಸ್ಯರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದೆ ಎಂಬ ಅಭಿಪ್ರಾಯವನ್ನು ಸೃಷ್ಟಿಸಲು ಸಂಸದರು ಬಯಸಿದ್ದರು” ಎಂದು ಅಧಿಕಾರಿಯೊಬ್ಬರು ಕ್ವಿಂಟ್‌ಗೆ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಅವರ ಕಚೇರಿ ದಿ ಕ್ವಿಂಟ್‌ನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. “ಸಂಸದರು ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೇ ಮುಗೀತು. ಮತ್ತೆ ಇನ್ನೇನನ್ನೂ ಹೇಳುವ ಅಗತ್ಯವಿಲ್ಲ” ಎಂದು ತೇಜಸ್ವಿ ಸೂರ್ಯ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ..

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...