Homeಕರೋನಾ ತಲ್ಲಣಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

- Advertisement -
- Advertisement -

ಈ ಕೊರೋನ ಭಾರತವನ್ನು ಯಾಕೆ ಇಷ್ಟು ದೀಢೀರನೆ ಇಷ್ಟೊಂದು ಭೀಕರವಾಗಿ ಆವರಿಸಿಕೊಂಡು ಬಿಟ್ಟಿತು ಅನ್ನುವುದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುವುದಕ್ಕೆ ಸ್ವಲ್ಪ ಸಮಯ ಹಿಡಿಯಬಹುದು. ಆದರೆ ಒಂದಂಶ ಮಾತ್ರ ನಿಜ. ಭಾರತದ ಈ ಸಮಸ್ಯೆ ಇಂದು ವಿಶ್ವದ ಸಮಸ್ಯೆಯಾಗಿದೆ.

ವೈರಾಣು ಮೊದಲು ಪ್ರವೇಶಿಸಿದಾಗ ಭಾರತ ತೀರಾ ದಿಢೀರನೆ ಎಲ್ಲವನ್ನೂ ಮುಚ್ಚಿ ಲಾಕ್‌ಡೌನ್ ಮಾಡಿತು. ಆದರೆ, ಅಷ್ಟೇ ಬೇಗ ಮತ್ತೆ ಅದನ್ನು ತೆರವುಗೊಳಿಸಿತು. ಮಾರ್ಚ್ 2020ರಲ್ಲಿ ಕೊರೋನ ಪ್ರಕರಣಗಳು ಅಷ್ಟೊಂದು ಇಲ್ಲದಿದ್ದಾಗ, ಕೇವಲ ನಾಲ್ಕು ಗಂಟೆಯ ಸೂಚನೆ ನೀಡಿ ಲಾಕ್‌ಡೌನ್ ಘೋಷಿಸಿಬಿಟ್ಟಿತು. ಲಕ್ಷಗಟ್ಟಲೆ ಜನ ತಿನ್ನಲು ಆಹಾರವಿಲ್ಲದೆ, ಇರಲು ನೆಲೆಯಿಲ್ಲದೆ ತತ್ತರಿಸಿಹೋದರು. ಅವರಲ್ಲಿ ಬಹುತೇಕ ಜನ ವಲಸೆ ಕಾರ್ಮಿಕರು. ಆ ಸಂದರ್ಭದಲ್ಲಿ ಆರ್ಥಿಕ ವಿಪತ್ತು ಎದುರಾದಾಗ, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ಮೊದಲೇ ಲಾಕ್‌ಡೌನ್ ತೆರವುಗೊಳಿಸಿದರು.

ಈಗ ಭಾರತದಲ್ಲಿ ಏನಾಗುತ್ತಿದೆಯೋ ಅದೇ ಅಮೇರಿಕೆಯಲ್ಲಿ ಕೊರೊನಾ ವೈರಾಣು ತೀವ್ರವಾಗಿದ್ದಾಗ ಆಗಿದ್ದು. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಸಾವುಗಳು ಹೆಚ್ಚಾಗತೊಡಗಿದಾಗ, ರಾಜ್ಯಗಳು ಸುಮ್ಮನೆ ಕಣ್ಣಮುಚ್ಚಿಕೊಂಡು, ಪಿಡುಗು ತನ್ನಷ್ಟಕ್ಕೆ ಮಾಯವಾಗಿ ಬಿಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದವು. ಭಾರತದ ಮೊದಲ ಕೊರೋನಾ ಅಲೆ ಕಮ್ಮಿಯಾಯಿತು. ಅದಕ್ಕೆ ಕಾರಣವೇನು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಭಾರತದಲ್ಲಿನ ರಾಜ್ಯಗಳಿಗೆ ಸಂಪನ್ಮೂಲಗಳ ಕೊರತೆಯಿದೆ. ಹಾಗಾಗಿ ರಾಜ್ಯಗಳ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಲಾಕ್‌ಡೌನ್ ಅಂದರೆ ತುಂಬಾ ಹಣ ಖರ್ಚು ಮಾಡಬೇಕಾಗುತ್ತದೆ. ಅದರಲ್ಲೂ ಬಡವರಿಗೆ ಆಗುವ ಅಪಾರ ಯಾತನೆಯನ್ನು ಕಡಮೆ ಮಾಡಬೇಕು ಅಂದುಕೊಂಡರಂತೂ ಖರ್ಚು ಹೆಚ್ಚೇ ಆಗುತ್ತದೆ. ಜೊತೆಗೆ ಕೇಂದ್ರ ಸರ್ಕಾರ ಆ ಖರ್ಚಿನ ಜವಾಬ್ದಾರಿಯನ್ನು ಹೊರುತ್ತಿಲ್ಲ. (ಭಾರತಕ್ಕೆ ಹೋಲಿಸಿದರೆ ಕಳೆದ ವರ್ಷ ಅಮೇರಿಕೆಯಲ್ಲಿ ಟ್ರಂಪ್ ಆಡಳಿತ ಹೆಚ್ಚು ಉದಾರಿಯಾಗಿತ್ತು.)

ಸ್ವಾಭಾವಿಕವಾಗಿಯೇ ರಾಜ್ಯ ಸರ್ಕಾರಗಳು ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಸಾಧ್ಯವಾದಷ್ಟು ಮುಂದೂಡುತ್ತಾ ಬಂದವು. ಈ ಮಧ್ಯೆ ಪಿಡುಗು ದೇಶವಿಡೀ ವ್ಯಾಪಿಸಿಕೊಂಡಿತು. ವೈರಾಣುವಿನಲ್ಲಿ ಹಲವು ಬದಲಾವಣೆಗಳೂ ಕಾಣಿಸಿಕೊಂಡವು. ಕೇಂದ್ರ ಸರ್ಕಾರ ಯಾವುದೇ ಜವಾಬ್ದಾರಿಯನ್ನೂ ತೆಗೆದುಕೊಳ್ಳದೇ ಹೋಗಿರುವುದರಿಂದ ಹೊಸ ವೈರಾಣು ಹೇಗೆ ನಡೆದುಕೊಳ್ಳುತ್ತಿದೆ ಅನ್ನುವುದನ್ನು ಅರ್ಥಮಾಡಿಕೊಳ್ಳಲು ಯಾರೂ ಪ್ರಯತ್ನಿಸುತ್ತಿಲ್ಲ. “ತುಂಬಾ ತಡ ಹಾಗೂ ತುಂಬಾ ಕಡಿಮೆ” ಅನ್ನುವುದು ಪ್ರಸ್ತುತ ಪಿಡುಗಿನ ಕಥೆಯಾಗಿಬಿಟ್ಟಿದೆ.

ಸರ್ಕಾರ ಈಗ ಕ್ರಮತೆಗೆದುಕೊಳ್ಳಲು ಪ್ರಾರಂಭಿಸುತ್ತಿದೆ. ಆದರೆ ಒಂದು ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಲು ಇನ್ನೂ ಹಿಂಜರಿಯುತ್ತಿರುವಂತೆ ತೋರುತ್ತಿದೆ.
ಭಾರತಕ್ಕೆ ಇಂದು ಕೇಂದ್ರ ಸಂಯೋಜಿತ ಲಾಕ್‌ಡೌನಿನ ಅವಶ್ಯಕತೆಯಿದೆ. ಸೋಂಕು ಈಗಾಗಲೇ ಹೆಚ್ಚಿರುವ ಪ್ರದೇಶಗಳಿಗೆ (ಸೋಂಕು ಸಧ್ಯಕ್ಕೆ ಇನ್ನೂ ದೇಶದ ಶೇಕಡ 25ರಷ್ಟು ಜಿಲ್ಲೆಗಳಲ್ಲಿ ಮಾತ್ರ ಕೇಂದ್ರೀಕೃತವಾಗಿದೆ) ಮೊದಲು ಗಮನಕೊಡಬೇಕು. ನಂತರದಲ್ಲಿ ನಿಧಾನವಾಗಿ ಅವಶ್ಯಕತೆಯಿರುವ ಕಡೆಗಳಲೆಲ್ಲಾ ಕ್ರಮತೆಗೆದುಕೊಳ್ಳುತ್ತಾ ಹೋಗಬೇಕು.

ಸರ್ಕಾರ ತುಂಬಾ ನಿಧಾನವಾಗಿ ಕಾರ್ಯಪ್ರವೃತ್ತವಾಗಿದೆ. ಮತ್ತೆ ಲಾಕ್‌ಡೌನ್ ಜಾರಿಗೊಳಿಸಿದರೆ ಆರ್ಥಿಕತೆಗೆ ಏನಾಗಬಹುದು ಅದರಲ್ಲೂ ವಿಶೇಷವಾಗಿ ಬಡವರಿಗೆ ಏನಾಗಬಹುದು ಅನ್ನುವ ಆತಂಕ ಈ ನಿಧಾನಕ್ಕೆ ಒಂದು ಕಾರಣವಿರುಬಹುದು. ಲಾಕ್‌ಡೌನ್ ಘೋಷಿಸಿದ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವವರಿಗೆ ಜೀವನಕ್ಕೆ ಬೇಕಾದ ಹಣವನ್ನು ಸರ್ಕಾರ ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತದೆ ಎನ್ನುವ ಭರವಸೆ ನೀಡಬೇಕು. ಸರ್ಕಾರದ ಯಾವುದೇ ಗುರುತು ಚೀಟಿ ಇದ್ದವರಿಗೂ ಈ ಸೌಲಭ್ಯ ಸಿಗಬೇಕು. ಈ ಭರವಸೆಯೊಂದಿಗೆ ಲಾಕ್‌ಡೌನ್ ಪ್ರಕ್ರಿಯೆಯನ್ನು ತ್ವರಿತಗೊಳಿಸಬಹುದು. ಜೊತೆಗೆ ಈಗ ಜಿಲ್ಲೆಗಳ ನಡುವಿನ ಸಂಚಾರದ ಮೇಲೆ ಮಿತಿಯನ್ನು ಹೇರಬೇಕು.

ಲಸಿಕೆಯ ವಿಷಯದಲ್ಲೂ ಇದನ್ನೇ ಮಾಡಬೇಕು. ಕೇಂದ್ರ ಸರ್ಕಾರದ ಪ್ರಕಾರ ಯಾರೂ ಬೇಕಾದರೂ ಲಸಿಕೆ ಹಾಕಿಸಿಕೊಳ್ಳಬಹುದು (ನಿಮಗೆ ಲಸಿಕೆ ಸಿಕ್ಕರೆ). ಆದರೆ ಅದರ ಹಣವನ್ನು ಆಯಾ ವ್ಯಕ್ತಿಗಳು ಅಥವಾ ರಾಜ್ಯ ಸರ್ಕಾರ ಭರಿಸಬೇಕು. ಇದರ ಪರಿಣಾಮ ಆಂದರೆ ಯಾರಿಗೆ ಹಣ ತೆರಲು ಸಾಧ್ಯವೋ ಅವರಿಗೆ ಲಸಿಕೆ ಸಿಗುತ್ತದೆ. ಕೆಲವು ರಾಜ್ಯಗಳಲ್ಲಿ ಸರ್ಕಾರವೇ ಉಳಿದವರ ಲಸಿಕೆಯ ಖರ್ಚನ್ನು ಭರಿಸಬಹುದು. ಆದರೆ ಉಳಿದ ಕಡೆ ಜನ ತಮ್ಮ ಪಾಡನ್ನು ತಾವೇ ನೋಡಿಕೊಳ್ಳಬೇಕಾಗುತ್ತದೆ. ಲಸಿಕೆಗಳು ಉಚಿತವಾಗಿ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಬೇಕು. ಮತ್ತು ಅದನ್ನು ಆಗುಮಾಡುವುದಕ್ಕೆ ಬೇಕಾದ ಆಡಳಿತಾತ್ಮಕ ವ್ಯವಸ್ಥೆಯನ್ನು ಮತ್ತು ಮಾನವ ಸಂಪನ್ಮೂಲವನ್ನು ಮೀಸಲಿಡಬೇಕು. ಆಗ ಆತಂಕದಲ್ಲಿರುವ ದೇಶಕ್ಕೆ ಭರವಸೆ ನೀಡಿದಂತಾಗುತ್ತದೆ. ಮತ್ತು ಜಗತ್ತನ್ನು ರಕ್ಷಿಸುವುದಕ್ಕೂ ಸಾಧ್ಯವಾಗುತ್ತದೆ.

ಅಷ್ಟೇ ಅಲ್ಲ ಭಾರತದಲ್ಲಿ ಹೆಚ್ಚುತ್ತಿರುವ ದುರಂತಕ್ಕೆ ಜಗತ್ತು ತುಂಬಾ ನಿಧಾನವಾಗಿ ಪ್ರತಿಕ್ರಿಯಿಸುತ್ತಿದೆ. ಲಸಿಕೆಗಳನ್ನು ಹಾಗೂ ತುರ್ತು ನೆರವನ್ನು ನೀಡುವುದಾಗಿ ಬೈಡೆನ್ ಆಡಳಿತ ಏಪ್ರಿಲ್ ಕೊನೆಯಲ್ಲಿ ಘೋಷಿಸಿತು. ಆ ವೇಳೆಗೆ ಪ್ರತಿದಿನದ ಸೋಂಕಿತರ ಸಂಖ್ಯೆ ಮೂರು ಲಕ್ಷ ದಾಟಿ ಒಂದು ವಾರ ಕಳೆದಿತ್ತು. ಸಮಸ್ಯೆ ಎಷ್ಟು ಅಗಾಧವಾಗಿದೆ ಅಂದರೆ ಹೊರಗಡೆಯ ನೆರವಿನಿಂದ ಮಾಡಬಹುದಾದದ್ದು ಸಾಪೇಕ್ಷವಾಗಿ ತುಂಬಾ ಕಡಿಮೆ. ಅಂದ ಮಾತ್ರಕ್ಕೆ ಅಮೆರಿಕೆ ಹಾಗೂ ಯುರೋಪ್ ಕಳುಹಿಸುತ್ತಿರುವ ಲಸಿಕೆಗಳು, ಆಮ್ಲಜನಕ, ಹಾಗೂ ಹಣ ನಿಲ್ಲಬಾರದು. ಹಾಗೆಯೇ ಲಸಿಕೆಗಳನ್ನು ತಯಾರಿಸಲು ಬೇಕಾದ ಸಾಮಗ್ರಿಗಳ ರಫ್ತಿನ ಮೇಲಿರುವ ನಿರ್ಬಂಧವೂ ತೆರವಾಗಬೇಕು. ಪ್ರತಿಯೊಂದು ಜೀವವೂ ಮುಖ್ಯ.

ಆದರೆ ಜಗತ್ತು ಭಾರತದ ಆಚೆಗೆ ನೋಡಬೇಕು. ಸಕಾಲದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಮತ್ತೊಮ್ಮೆ ಆ ನಿಟ್ಟಿನಲ್ಲಿ ತಪ್ಪಾಗಬಾರದು. ಮೊದಲ ಅಲೆ ಬಂದಾಗ ವೈರಾಣು ಅಷ್ಟೊಂದು ಬೇಗ ಹರಡುತ್ತದೆ ಅನ್ನುವುದನ್ನು ನಾವು ಅರ್ಥಮಾಡಿಕೊಂಡಿರಲಿಲ್ಲ. ಅದನ್ನು ಈಗ ಮರೆಯಬಾರದು. ಅಮೆರಿಕೆ ಹಾಗೂ ಐರೋಪ್ಯ ದೇಶಗಳಲ್ಲಿ ಲಸಿಕೆಯ ಪ್ರಚಾರದಲ್ಲಿ ಒಳ್ಳೆಯ ಪ್ರಗತಿಯಾಗುತ್ತಿದೆ. ಆದರೆ ಉಳಿದ ದೇಶಗಳು ಅದರಿಂದ ತಮಗೆ ರಕ್ಷಣೆ ದೊರಕಿಬಿಡುತ್ತದೆ ಎನ್ನುವ ಸುಳ್ಳು ಭ್ರಮೆಯಲ್ಲಿ ನಿದ್ದೆ ಹೋಗಬಾರದು.

ಭಾರತದಲ್ಲಿ ಮೊದಲಿಗೆ ಕಾಣಿಸಿಕೊಂಡು ಬಿ.1.617 ಮಾದರಿ, ಈಗ ದೇಶದ ಸರಹದ್ದನ್ನು ದಾಟಿ ಹರಡುತ್ತಿದೆ. ಭಾರತದಲ್ಲಿ ಲಸಿಕೆ ತೆಗೆದುಕೊಂಡ ಕೆಲವರೂ ಸೋಂಕಿಗೆ ತುತ್ತಾದಂತೆ ಕಾಣುತ್ತಿದೆ. ಪಶ್ಚಿಮದಲ್ಲಿ ಸಿಗುವ “ಉತ್ತಮ” ಲಸಿಕೆಗಳು ನಮ್ಮ ಜೀವವನ್ನು ರಕ್ಷಿಸಿಬಿಡುತ್ತದೆ ಎಂದು ಭಾವಿಸುವುದು ಮೂರ್ಖತನವಾಗುತ್ತದೆ. ಮುಖಂಡರುಗಳು ಹಾಗೂ ವಿಜ್ಞಾನಿಗಳು ವಿಭಿನ್ನ ವೈರಾಣುಗಳನ್ನು ಎದುರಿಸಲು ಏನು ಮಾಡಬೇಕು ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ಬೂಸ್ಟರ್ ಡೋಸ್, ಹೊಸ ವ್ಯಾಕ್ಸಿನ್, ಮಾಸ್ಕ್‌ ಗಳು, ಅನ್‌ಲಾಕ್ ಪ್ರಕ್ರಿಯೆಯನ್ನು ನಿಧಾನಗೊಳಿಸುವುದು ಇತ್ಯಾದಿ ನಿಟ್ಟಿನಲ್ಲಿ ಯೋಚಿಸಬೇಕು.

ವೈರಾಣು ಆಫ್ರಿಕಾ ಮೂಲಕ ಹರಡುವ ಸಾಧ್ಯತೆಯಿದೆ. ಈ ಬಗ್ಗೆ ಎಚ್ಚರಿಕೆ ಬೇಕು. ಅಲ್ಲಿ ಲಸಿಕೆಗಳ ಕಾರ್ಯಕ್ರಮ ಇನ್ನೂ ಸರಿಯಾಗಿ ಪ್ರಾರಂಭವೇ ಆಗಿಲ್ಲ. ಭಾರತದ ಸಧ್ಯದ ಪರಿಸ್ಥಿತಿಯಿಂದ ಅವರ ಕಷ್ಟ ಮತ್ತಷ್ಟು ಬಿಗಡಾಯಿಸಿದೆ. ಭಾರತ ತನ್ನನ್ನು ನೆಚ್ಚಿಕೊಂಡು ಬಹತೇಕ ದೇಶಗಳಿಗೆ ಲಸಿಕೆಗಳನ್ನು ರಫ್ತು ಮಾಡುವುದನ್ನು ನಿಲ್ಲಿಸಿಬಿಟ್ಟಿದೆ.

ಇದು ಆಮ್ಲಜನಕ ಪೂರೈಕೆ ಹಾಗೂ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ತೀವ್ರವಾಗಿರುವ ದೇಶಗಳಲ್ಲಿ ದುರಂತವನ್ನು ಸೃಷ್ಟಿಸುತ್ತದೆ. ಅಮೇರಿಕಾ ಹಾಗೂ ಐರೋಪ್ಯ ದೇಶಗಳು ಅವಶ್ಯಕತೆ ಬಂದಾಗ ತ್ವರಿತವಾಗಿ ಕ್ರಮತೆಗೆದುಕೊಳ್ಳಲು ಸಿದ್ಧರಿರಬೇಕು. ಅಂದರೆ ಲಸಿಕೆಗಳನ್ನು ಆದಷ್ಟು ಬೇಗ ತಯಾರಿಸಿ ಸಾಗಿಸಲು ತಯಾರಿರಬೇಕು. ಅದಕ್ಕಿಂತ ಮುಖ್ಯವಾಗಿ ಜಾಗತಿಕ ಮಟ್ಟದಲ್ಲಿ ನಿಗಾ ಹಾಗು ಪರೀಕ್ಷೆಗೆ ಕ್ರಮ ತೆಗೆದುಕೊಳ್ಳಬೇಕು. ಸಮಯಕ್ಕೆ ಆಮ್ಲಜನಕ ಮತ್ತು ಸಾಮಗ್ರಿಗಳನ್ನು ರವಾನಿಸಲು ತಯಾರಿರಬೇಕು. ಲಾಕ್‌ಡೌನಿನಲ್ಲಿ ಸಂಕಟದಲ್ಲಿರುವ ಜನರಿಗೆ ಹಣಕಾಸಿನ ನೆರವನ್ನು ನೀಡಬೇಕು.

ಅನುವಾದ: ಟಿ ಎಸ್ ವೇಣುಗೋಪಾಲ್ ಹಾಗೂ ಶೈಲಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...