Homeಮುಖಪುಟಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್...

ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಮೀರತ್‌ನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

- Advertisement -
- Advertisement -

ಒಂದೇ ಒಂದು ಹಳ್ಳಿಯಲ್ಲಿ ಕಳೆದ ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಳ್ಳಿಯ ಯಾರಿಗೂ ಕೊರೊನಾ ಟೆಸ್ಟ್ ಆಗಲಿ, ಹಳ್ಳಿಯನ್ನು ಸ್ಯಾನಿಟೈಜ್ ಮಾಡುವ ಕೆಲಸವಾಗಲಿ ಸರ್ಕಾರದ ಕಡೆಯಿಂದ ನಡೆದಿಲ್ಲ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗೋಗಿಲ್ ಗೋತ್ರಾ ಹಳ್ಳಿಯ ಕಥೆಯಿದು. ಗ್ರಾಮದ ನಿವಾಸಿಗಳು ಈ ಸಾವುಗಳಿಂದ ಆತಂಕಕ್ಕೆ ಒಳಗಾಗಿದ್ದರೂ ಯಾವುದೇ ಅಧಿಕಾರಿಗಳು ಅಲ್ಲಿಗೆ ಕಾಲಿಟ್ಟಿಲ್ಲ. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಾಗಿ ಮೀರತ್ ಗುರುತಿಸಿಕೊಂಡಿದೆ.

“ಕಳೆದ ಒಂದು ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಕಂಡುಬಂದಿಲ್ಲ. ಯಾವುದೇ ಸಹಾಯ ದೊರೆತಿಲ್ಲ. ನಮ್ಮ ಹಳ್ಳಿಯಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಿ, ವೈದ್ಯಕೀಯ ಸೌಲಭ್ಯ ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಮೀರತ್ ಜಿಲ್ಲೆಯು ಉತ್ತರ ಪ್ರದೇಶದ ಕೊರೊನಾ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 1,368 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಸಂಖ್ಯೆಯನ್ನು 13,941 ಕ್ಕೆ ಏರಿಕೆಯಾಗಿವೆ. ಮೀರತ್‌ನ ಅತಿದೊಡ್ಡ ಸರ್ಕಾರಿ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

ಇಡೀ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಸೋರಿಕೆಯಾಗುತ್ತಿರುವ ಮೇಲ್ಛಾಣಿ ಮತ್ತು ಶೌಚಾಲಯದ ದುರ್ವಾಸನೆಯಿಂದ ಕೊರೊನಾ ಸೋಂಕಿತರು ಮತ್ತಷ್ಟು ರೋಗಗಳಿಗೆ ಒಳಗಾಗುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಶಿಷ್ಠ ಶರ್ಮಾ, ಮನೆಯಿಂದ ಬೆಡ್‌ ತಂದು ಆಸ್ಪತ್ರೆಯ ತುರ್ತು ವಾರ್ಡ್‌ನ ಎರಡು ಕೋಣೆಗಳ ನಡುವಿನ ಕಾರಿಡಾರ್‌ನಲ್ಲಿ ತನ್ನ ತಂದೆಯನ್ನು ಮಲಗಿಸಿದ್ದಾರೆ. “ನಾವು ಮನೆಯಿಂದ ಸ್ವಂತ ಹಾಸಿಗೆಯನ್ನು ತಂದಿದ್ದೇವೆ. ಇಲ್ಲಿ ಮೂಲಸೌಲಭ್ಯಗಳು ತುಂಬಾ ಕೆಟ್ಟದಾಗಿವೆ, ರೋಗಿಗಳು ಆಸ್ಪತ್ರೆಯ ನೆಲದ ಮೇಲೆ ಬೆಡ್‌ಶೀಟ್‌ಗಳ ಮೇಲೆ ಮಲಗಿದ್ದಾರೆ” ಎಂದಿದ್ದಾರೆ.

ಕಳೆದ ಏಪ್ರಿಲ್ 28 ರಿಂದ ಅವರ ತಂದೆಯನ್ನು ಈ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. “ನನ್ನ ತಂದೆಗೆ ಕೊರೊನಾ ಜೊತೆಗೆ ಎದೆಯ ಸಮಸ್ಯೆಗಳಿವೆ ಎಂದು ತೋರುತ್ತದೆ. ತುಂಬಾ ಜನ ರೋಗಿಗಳು ಇರುವುದರಿಂದ, ವೈದ್ಯರು ಸಾಕಷ್ಟು ಗಮನ ಕೊಡಲು ಸಾಧ್ಯವಾಗುತ್ತಿಲ್ಲ” ಎಂದು ಶರ್ಮಾ ಹೇಳಿದ್ದಾರೆ.

ಮೀರತ್‌ನ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೊರೊನಾ ಪ್ರಕರಣಗಳನ್ನು ವೇಗವಾಗಿ ತುಂಬುತ್ತಿವೆ. ಹೆಸರಿಸಲು ಇಷ್ಟಪಡದ ಕೆಎಂಸಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಯೊಬ್ಬರು, “ಈ ಸಮಯದಲ್ಲಿ ರೋಗಿಗಳಿಗೆ ಯಾವುದೇ ಹಾಸಿಗೆಗಳು ಲಭ್ಯವಿಲ್ಲ.  ರೋಗಿಗಳನ್ನು ಬೇರೆಡೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ, ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇಷ್ಟು ಅವ್ಯವಸ್ಥೆಗಳ ನಡುವೆಯೂ, ಪರಿಸ್ಥಿತಿ ಸುಧಾರಿಸುತ್ತಿವೆ ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳುತ್ತಾರೆ.

“ಈ ಸಮಯದಲ್ಲಿ ಪ್ರಕರಣಗಳನ್ನು ನಿರ್ದಿಷ್ಟವಾಗಿ ಸೂಚಿಸುವುದು ಕಷ್ಟ. ಅನೇಕ ಹಳೆಯ ಪ್ರಕರಣಗಳನ್ನು ಅಪ್‌ಲೋಡ್ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರಕರಣಗಳನ್ನು ತೋರಿಸಲಾಗುತ್ತಿದೆ. ಆದರೆ ಮುಂಬರುವ ವಾರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆಸ್ಪತ್ರೆಯ ಹೊರೆ ಕೂಡ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕ ಹಾಸಿಗೆಗಳ ಲಭ್ಯತೆ ಹೆಚ್ಚುತ್ತಿದೆ” ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...