Homeಮುಖಪುಟಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್...

ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಮೀರತ್‌ನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

- Advertisement -
- Advertisement -

ಒಂದೇ ಒಂದು ಹಳ್ಳಿಯಲ್ಲಿ ಕಳೆದ ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಳ್ಳಿಯ ಯಾರಿಗೂ ಕೊರೊನಾ ಟೆಸ್ಟ್ ಆಗಲಿ, ಹಳ್ಳಿಯನ್ನು ಸ್ಯಾನಿಟೈಜ್ ಮಾಡುವ ಕೆಲಸವಾಗಲಿ ಸರ್ಕಾರದ ಕಡೆಯಿಂದ ನಡೆದಿಲ್ಲ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗೋಗಿಲ್ ಗೋತ್ರಾ ಹಳ್ಳಿಯ ಕಥೆಯಿದು. ಗ್ರಾಮದ ನಿವಾಸಿಗಳು ಈ ಸಾವುಗಳಿಂದ ಆತಂಕಕ್ಕೆ ಒಳಗಾಗಿದ್ದರೂ ಯಾವುದೇ ಅಧಿಕಾರಿಗಳು ಅಲ್ಲಿಗೆ ಕಾಲಿಟ್ಟಿಲ್ಲ. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಾಗಿ ಮೀರತ್ ಗುರುತಿಸಿಕೊಂಡಿದೆ.

“ಕಳೆದ ಒಂದು ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಕಂಡುಬಂದಿಲ್ಲ. ಯಾವುದೇ ಸಹಾಯ ದೊರೆತಿಲ್ಲ. ನಮ್ಮ ಹಳ್ಳಿಯಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಿ, ವೈದ್ಯಕೀಯ ಸೌಲಭ್ಯ ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಮೀರತ್ ಜಿಲ್ಲೆಯು ಉತ್ತರ ಪ್ರದೇಶದ ಕೊರೊನಾ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 1,368 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಸಂಖ್ಯೆಯನ್ನು 13,941 ಕ್ಕೆ ಏರಿಕೆಯಾಗಿವೆ. ಮೀರತ್‌ನ ಅತಿದೊಡ್ಡ ಸರ್ಕಾರಿ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

ಇಡೀ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಸೋರಿಕೆಯಾಗುತ್ತಿರುವ ಮೇಲ್ಛಾಣಿ ಮತ್ತು ಶೌಚಾಲಯದ ದುರ್ವಾಸನೆಯಿಂದ ಕೊರೊನಾ ಸೋಂಕಿತರು ಮತ್ತಷ್ಟು ರೋಗಗಳಿಗೆ ಒಳಗಾಗುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಶಿಷ್ಠ ಶರ್ಮಾ, ಮನೆಯಿಂದ ಬೆಡ್‌ ತಂದು ಆಸ್ಪತ್ರೆಯ ತುರ್ತು ವಾರ್ಡ್‌ನ ಎರಡು ಕೋಣೆಗಳ ನಡುವಿನ ಕಾರಿಡಾರ್‌ನಲ್ಲಿ ತನ್ನ ತಂದೆಯನ್ನು ಮಲಗಿಸಿದ್ದಾರೆ. “ನಾವು ಮನೆಯಿಂದ ಸ್ವಂತ ಹಾಸಿಗೆಯನ್ನು ತಂದಿದ್ದೇವೆ. ಇಲ್ಲಿ ಮೂಲಸೌಲಭ್ಯಗಳು ತುಂಬಾ ಕೆಟ್ಟದಾಗಿವೆ, ರೋಗಿಗಳು ಆಸ್ಪತ್ರೆಯ ನೆಲದ ಮೇಲೆ ಬೆಡ್‌ಶೀಟ್‌ಗಳ ಮೇಲೆ ಮಲಗಿದ್ದಾರೆ” ಎಂದಿದ್ದಾರೆ.

ಕಳೆದ ಏಪ್ರಿಲ್ 28 ರಿಂದ ಅವರ ತಂದೆಯನ್ನು ಈ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. “ನನ್ನ ತಂದೆಗೆ ಕೊರೊನಾ ಜೊತೆಗೆ ಎದೆಯ ಸಮಸ್ಯೆಗಳಿವೆ ಎಂದು ತೋರುತ್ತದೆ. ತುಂಬಾ ಜನ ರೋಗಿಗಳು ಇರುವುದರಿಂದ, ವೈದ್ಯರು ಸಾಕಷ್ಟು ಗಮನ ಕೊಡಲು ಸಾಧ್ಯವಾಗುತ್ತಿಲ್ಲ” ಎಂದು ಶರ್ಮಾ ಹೇಳಿದ್ದಾರೆ.

ಮೀರತ್‌ನ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೊರೊನಾ ಪ್ರಕರಣಗಳನ್ನು ವೇಗವಾಗಿ ತುಂಬುತ್ತಿವೆ. ಹೆಸರಿಸಲು ಇಷ್ಟಪಡದ ಕೆಎಂಸಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಯೊಬ್ಬರು, “ಈ ಸಮಯದಲ್ಲಿ ರೋಗಿಗಳಿಗೆ ಯಾವುದೇ ಹಾಸಿಗೆಗಳು ಲಭ್ಯವಿಲ್ಲ.  ರೋಗಿಗಳನ್ನು ಬೇರೆಡೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ, ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇಷ್ಟು ಅವ್ಯವಸ್ಥೆಗಳ ನಡುವೆಯೂ, ಪರಿಸ್ಥಿತಿ ಸುಧಾರಿಸುತ್ತಿವೆ ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳುತ್ತಾರೆ.

“ಈ ಸಮಯದಲ್ಲಿ ಪ್ರಕರಣಗಳನ್ನು ನಿರ್ದಿಷ್ಟವಾಗಿ ಸೂಚಿಸುವುದು ಕಷ್ಟ. ಅನೇಕ ಹಳೆಯ ಪ್ರಕರಣಗಳನ್ನು ಅಪ್‌ಲೋಡ್ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರಕರಣಗಳನ್ನು ತೋರಿಸಲಾಗುತ್ತಿದೆ. ಆದರೆ ಮುಂಬರುವ ವಾರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆಸ್ಪತ್ರೆಯ ಹೊರೆ ಕೂಡ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕ ಹಾಸಿಗೆಗಳ ಲಭ್ಯತೆ ಹೆಚ್ಚುತ್ತಿದೆ” ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...