Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...