Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...