Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...