HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...