Homeಮುಖಪುಟರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

ರಸ ಗೊಬ್ಬರ ದರ ಏರಿಕೆ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ರೈತರು

- Advertisement -
- Advertisement -

ನೆಲ ಹದ ಮಾಡುವ ಮಳೆಯ ನಿರಿಕ್ಷೆಯಲ್ಲಿರುವ ರೈತರಿಗೆ ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ. ರಸ ಗೊಬ್ಬರ ದರಗಳನ್ನು ಏರಿಸುವ ಮೂಲಕ ಅದು ರೈತರನ್ನು ‘ಕೊಲ್ಲಲು’ ಹೊರಟಿದೆಯಾ ಎಂಬ ಪ್ರಶ್ನೆ ಕೇಳಿ ಬರುತ್ತಿವೆ.

ಶೇ. 45-58 ರವೆರೆಗೆ ಇಫ್ಕೋ ಗೊಬ್ಬರದ ದರಗಳನ್ನು ಏರಿಸಿದೆ. ಅಂದರೆ 50 ಕೆಜಿ ಡಿಎಪಿ ಬೆಲೆ 1200 ಇದ್ದುದ್ದು ಏಕಾಏಕಿ 1900 ರೂ ಆಗಿದೆ. ಇದು ದೇಶದ ಕೃಷಿ ವ್ಯವಸ್ಥೆಯನ್ನು ಜರ್ಜರಿತಗೊಳಿಸಲಿದೆ. ಈ ಕುರಿತು ರಾಜ್ಯದ ವಿವಿಧ ಭಾಗಗಳ ರೈತರು, ಕೃಷಿತಜ್ಞರನ್ನು  ನಾನುಗೌರಿ.ಕಾಂ ಮಾತನಾಡಿಸಿತು.

‘ಈ ಸಲ ಗೊಬ್ಬರ ತೆಗೆದುಕೊಳ್ಳಾಕೂ ಮೊದ್ಲು, ಎಣ್ಣಿ (ಕ್ರಿಮಿನಾಶಕ) ತಗೋಳ್ಳೊದೇ ವಾಸಿ’ ಎಂದರು ಸಿಂಧನೂರು ತಾಲೂಕಿನ ಮಾಟೂರಿನ ಯುವ ರೈತ ಬಸನಗೌಡ ಸಂಜಿ.
‘ಅಲ್ರಿ, ಡಿಎಪಿ ಗೊಬ್ಬರದ 50 ಕೆಜಿ ಚಿಲಕ್ಕ 1,900 ರೂ ಅಂತೆ. ಅಂದ್ರ ಈ ಸಲ ಎರಡು ಎಕರೆ ಭತ್ತದ ಬೆಳಗೆ 5-6 ಸಾವಿರ ಹೆಚ್ಚುವರಿ ರೊಕ್ಕ ಹಾಕ್ಬೇಕು. ಅದ್ಯಾವುದೋ ತಾಂತ್ರಿಕ ನೆಪದಲ್ಲಿ ನಮ್ಮ ಕಡೆ ಬೆಳೆದ ಭತ್ತಕ್ಕೆ ಸರಿಯಾದ ಎಂಎಸ್‌ಪಿನೂ ಕೊಡ್ತಾ ಇಲ್ಲ. ಪಂಜಾಬಿನ ರೈತರಂತೆ ನಾವು ಕೂಡ ಸಂಘಟಿತರಾಗುವ ಸಂದರ್ಭವಿದು’ ಎಂದು ಬಸನಗೌಡ ಹೇಳಿದರು.

‘ಈಗೀಗ ನಮಗೆ ಗೊತ್ತಾಗುತ್ತಿದೆ, ಯೋಗೇಂದ್ರ ಯಾದವ್, ದೇವಿಂದರ್ ಸಿಂಗ್ ಹೇಳುವ ಸತ್ಯಗಳು. ಇವೆಲ್ಲ ನಮ್ಮ ರೈತರಿಗೆ ತಲುಪಲು ನಿಮ್ಮಂತಹ ಮೀಡಿಯಾ ಕನ್ನಡದಲ್ಲಿ ಇನ್ನಷ್ಟು ವಿವರ ಕೊಡಬೇಕು’ ಎಂದರಲ್ಲದೇ, ‘ಭೂರಹಿತರು ಲೀಸ್‌ನಲ್ಲಿ ಒಂದೋ-ಎರಡು ಎಕರೆ ಜಮೀನಿನಿನಲ್ಲಿ ಬೆಳೆದು ಬದುಕು ಕಟ್ಟಕೊಳ್ತಾ ಇದ್ದರು. ಈ ಸಲ ಅವರು ಈ ಅಪಾಯದ ಕೃಷಿ ಮಾಡಂಗಿಲ್ಲ. ಮತ್ತೆ ಗುಳೆ ಹೋಗ್ತಾರೆ ಅಷ್ಟೇ’ ಎಂದು ಆ ಭಾಗದ ವಾಸ್ತವ ಚಿತ್ರಣವನ್ನು ನಮ್ಮ ಮುಂದೆ ಇಟ್ಟರು.

‘ಕಳೆದ ವರ್ಷ ಎಲ್ಲ ಕ್ಷೇತ್ರಗಳೂ ಮುಗ್ಗಟ್ಟಿನಲ್ಲಿದ್ದಾಗ, ಈ ದೇಶದ ಜಿಡಿಪಿಗೆ ಹೆಚ್ಚಿನ ನೆರವು ನಿಡಿದ್ದು ಕೃಷಿ. ಅದು ಎಲ್ಲಾ ಸಂಕಷ್ಟಗಳ ನಡುವೆಯೂ ಈ ದೇಶಕ್ಕೆ ಅನ್ನ ನಿಡಿದೆ. ಈಗ ಗೊಬ್ಬರದ ದರ ಹೆಚ್ಚಿಸಿ ಕೃಷಿ ಕ್ಷೇತ್ರವನ್ನೆ ನಾಶ ಮಾಡಲು ಹೊರಟಿದೆ ಮೋದಿ ಸರ್ಕಾರ’ ಎಂದು ಹಿಂದೆ ಹಲವು ದಶಕಗಳ ಕಾಲ ಕೃಷಿ ಮಾಡಿದ ಲೇಖಕ ಕೆ.ಪಿ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಇದೇ ತರಹದ ಅಭಿಪ್ರಾಯ ವ್ಯಕ್ತಪಡಿಸಿದ ಕೃಷಿ ತಜ್ಞ ಪ್ರಕಾಶ ಕಮ್ಮರಡಿ, ‘ನಾಟಿ, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ಇವರು ಗೊಬ್ಬರದ ದರ ಜಾಸ್ತಿ ಮಾಡಿ ರೈತರನ್ನು ಕೊಲ್ಲಲು ಹೊರಟಿದ್ದಾರೆ. ಈ ಸಂದರ್ಭದಲ್ಲಿ ರೈತರು ಹೇಗೋ ಬೀಜದ ತಯಾರಿ ಮಾಡಿಕೊಂಡಿದ್ದಾರೆ. ಆದರೆ 1,900 ರೂಪಾಯಿ ಕೊಟ್ಟು 50ಕೆಜಿಯ ಡಿಎಪಿ ಪಡೆಯಲು ಆಗುತ್ತದಾ? ನಮ್ಮ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಕಳೆದ ಸಾಲಿನ ಶೇ.30ರಷ್ಟು ಕೃಷಿ ಉತ್ಪನ್ನ ಮಾರಾಟವಾಗಿಯೇ ಇಲ್ಲ. ಅದರಲ್ಲಿ ಶೇ. 18ರಷ್ಟು ಹಾಳಾಗಿ ಹೋಗಿದೆ. ರೈತರ ಬಳಿ ಹಣವಿಲ್ಲ. ಚುನಾವಣೆಗಳ ನಂತರ ಈ ಸರ್ಕಾರ ಕ್ರೂರವಾಗಿ ರೈತರ ಮೇಲೆ ಆಕ್ರಮಣ ಮಾಡಿದೆ’ ಎಂದರು.

ಮಂಡ್ಯದ ಎಲೆಚಾಕನಹಳ್ಳಿಯ ಸಣ್ಣ ರೈತ ವೈ.ಜೆ. ಸ್ವಾಮಿ ಮಾತನಾಡಿ, ‘ಮುಕ್ಕಾಲು ಎಕರೆಯಲ್ಲಿ ಚೊಟ್ ಪೈರು (ಬೀನ್ಸ್ ತರಹದ ತರಕಾರಿ) ಹಾಕಿದ್ದೇವೆ. ಈಗ ಕೆಜಿಗೆ 15 ರೂ ದರ ಇದೆ. ಆದರೆ ಡಿಎಪಿ ದರ ಹೆಚಾಗಿದ್ದರಿಂದ ಮತ್ತೆ ಗೊಬ್ಬರ ಹಾಕಿದರೆ ನಾವು ಮಾಡಿದ ಖರ್ಚು ಸಹ ನಮ್ಮ ಕೈಗೆ ಸಿಗಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಒಣ ಬೇಸಾಯದವರ ಕಷ್ಟ ಕೇಳುವಂತಿಲ್ಲ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಣ್ಣ ರೈತ ಮಲ್ಲಪ್ಪ ಅವರು, ನಮ್ಮ ಎದುರು ಕೃಷಿ ಸಂಕಷ್ಟದ ಇನ್ನೊಂದು ಆಯಾಮವನ್ನು ಮುಂದೆ ಇಟ್ಟರು. ‘ಹಳ್ಳಿಕಡೆ ಜಮೀನ್ದಾರರು ಬೀಜ, ಗೊಬ್ಬರ ಅಂಗಡಿ ಇಟ್ಟಾರು. ಮೊದ್ಲ ಅಪರಾತಪರಾ ರೇಟು ಹಾಕಿ, ಬಡ್ಡಿ ವಸೂಲಿ ಮಾಡ್ತಾ ಇದ್ದರು. ಈಗ ಗೊಬ್ಬರ ರೇಟು ಜಾಸ್ತಿ ಆದ ಮ್ಯಾಗ ಅವರ ಕಂತ್ರಿಗಿರಿ ಇನ್ನಾಕಿಷ್ಟ ಹೆಚ್ಚಾಗುತ್ತ. ಇಲ್ಲಿ ನಾವು ಮಳಿ ನಂಬಿ ಹೊಲ ಮಾಡೋ ಮಂದಿ. ಎರಡೆಕೆಗೆ ಗೊಬ್ಬರ ಖರ್ಚು 5-6 ಸಾವಿರ ಹೆಚಾದ್ರ, ಸಣ್ಣಪುಟ್ಟ ಹೊಲ ಹೊಂದಿರೋ ಮಂದಿ ಹೊಲ ಲಾವಣಿ ಹಾಕಿ ಎಲ್ಲೇರ ದುಡಿಯಾಕ್ ಹೋಗಬೇಕಾಗುತ್ತದೆ’ ಎಂದು ಮಲ್ಲಪ್ಪ ತಿಳಿಸಿದರು.

‘ಒಂದು ಕೈಗಾರಿಕೆಗೆ ಮೊದಲ ವರ್ಷ ಉಚಿತ ಅಥವಾ ರಿಯಾಯತಿ ದರದಲ್ಲಿ ನೀರು, ವಿದ್ಯುತ್ ಕೊಡುವ ಸರ್ಕಾರ, ಈಗ ರೈತರಿಗೆ ಸಬ್ಸಿಡಿಯಲ್ಲಿ ಗೊಬ್ಬರ ನೀಡಬೇಕು. ನಾಲ್ಕು ತಿಂಗಳಷ್ಟೇ, ಅವರು ಅದರ ಹತ್ತು ಪಟ್ಟು ವಾಪಾಸ್ ನೀಡುತ್ತಾರೆ. ಕಳೆದ ಆರ್ಥಿಕ ವರ್ಷದಲ್ಲಿ ದೇಶದ ಗ್ರಾಮೀಣ ಭಾಗ ಉಳಿದಿದ್ದೇ ರೈತರ ಉತ್ಪನ್ನಗಳಿಂದ. ಹಾಗೆಯೇ ನಗರದವರಿಗೂ ಆಹಾರಧಾನ್ಯ ಸಹಜ ಬೆಲೆಯಲ್ಲಿ ಸಿಕ್ಕಿದ್ದು ರೈತರ ಪರಿಶ್ರಮದಿಂದ. ಸರ್ಕಾರ ಕೃಷಿಯನ್ನೇ ನಾಶ ಮಾಡಲು ಹೊರಟಂತಿದೆ’ ಎಂದು ಕೆ.ಪಿ. ಸುರೇಶ್ ಹೇಳುತ್ತಾರೆ.

ಗೊಬ್ಬರದ ಬೆಲೆ ಏರಿಕೆಗೆ ಕಾರಣವೇನು?: ಶಿವಸುಂದರ್

ಈ ಗೊಬ್ಬರದ ರಾಜಕೀಯ ಕುರಿತು ರಾಜಕೀಯ ಚಿಂತಕ ಶಿವಸುಂದರ್ ಅಭಿಪ್ರಾಯಗಳು ಹೀಗಿವೆ:

ಇದು ಗೊಬ್ಬರ ಕಂಪನಿಗಳು ದಿಢೀರನೆ ತೆಗೆದುಕೊಂಡ ತೀರ್ಮಾನವಲ್ಲ. ಬದಲಿಗೆ ಗೊಬ್ಬರ ಸಬ್ಸಿಡಿಯನ್ನು ಹಂತ ಹಂತವಾಗಿ ಹಿಂತೆಗೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ರೈತವಿರೋಧಿ ನೀತಿಗಳ ತಾರ್ಕಿಕ ಪರಿಣಾಮವೇ ಆಗಿದೆ. ಈ ಗೊಬ್ಬರ ಸಬ್ಸಿಡಿ ಹಿಂತೆಗೆತ ಯೋಜನೆ 1992ರ ಭೋಸ್ಲೆ ಸಮಿತಿಯ ಪರಿಣಾಮವಾಗಿ ಪ್ರಾರಂಭವಾಗಿದ್ದು, ಈಗಿನ ಮೋದಿ ಸರ್ಕಾರದಲ್ಲಿ ತೀವ್ರ ಆಕ್ರಮಣಕಾರಿ ಸ್ವರೂಪವನ್ನು ಪಡೆಯುತ್ತಿದೆ….

1991ರ ತನಕ ಭಾರತ ಸರ್ಕಾರದ ಗೊಬ್ಬರ ನೀತಿಗಳು ಪ್ರಧಾನವಾಗಿ ಗೊಬ್ಬರ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ಅದನ್ನು ಅಗ್ಗದ ದರದಲ್ಲಿ ರೈತಾಪಿಗೆ ತಲುಪಿಸುವ ಬಗ್ಗೆ ಗಮನ ಕೇಂದ್ರೀಕರಿಸಿದ್ದವು. ಹೀಗಾಗಿಯೇ 1977ರಲ್ಲಿ ರಸಗೊಬ್ಬರ ಬೆಲೆ ನಿಯಂತ್ರಣ ಮತ್ತು ಸರಬರಾಜು ನಿಯಮಗಳು ಜಾರಿಗೆ ಬಂದವು. ಅದರಡಿಯಲ್ಲಿ ಸರ್ಕಾರವೇ ಮೊದಲು ಯೂರಿಯಾ ಮತ್ತು ಆ ನಂತರ ಎಲ್ಲಾ ಬಗೆಯ ರಸಗೊಬ್ಬರಗಳಿಗೂ ಮಾರಾಟ ಬೆಲೆಯನ್ನು ನಿಗದಿ ಮಾಡಿತು. ಅದಕ್ಕೇ ಮೀರಿ ಆಗುತ್ತಿದ್ದ ಉತ್ಪಾದನಾ ವಚ್ಚವನ್ನು ನೇರವಾಗಿ ಗೊಬ್ಬರ ಕಂಪನಿಗಳಿಗೆ ಪಾವತಿ ಮಾಡುತ್ತಿತ್ತು. ಹೀಗಾಗಿ 1990ರ ದಶಕದವರೆಗೂ ಎಲ್ಲಾ ಗೊಬ್ಬರಗಳೂ ಯೂರಿಯಾದಷ್ಟೇ ಬೆಲೆಗೆ ಮಾರಾಟವಾಗುತ್ತಿದ್ದವು.

ಆದರೆ 1991ರಲ್ಲಿ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳು ಜಾರಿಗೆ ಬಂದ ನಂತರ ಜನರ ಕಲ್ಯಾಣಕ್ಕಾಗಿ ಮಾಡುತ್ತಿದ್ದ ವೆಚ್ಚಗಳನ್ನು ಕಡಿಮೆ ಮಾಡಿ ಆ ಸಂಪನ್ಮೂಲವನ್ನು ಉದ್ದಿಮೆಗಳ ಲಾಭವನ್ನು ಹೆಚ್ಚಿಸಲು ಬೇಕಾದ ಮೂಲಭೂತ ಸೌಕರ್ಯವನ್ನು ಹೆಚ್ಚಿಸುವುದು ಆರ್ಥಿಕ ತತ್ವವಾಯಿತು.

ಅದರ ಭಾಗವಾಗಿಯೇ ಗೊಬ್ಬರ ನೀತಿಯೂ ಬದಲಾಗಿ, ಗೊಬ್ಬರಕ್ಕೆ ಕೊಡುತ್ತಿದ್ದ ಸಬ್ಸಿಡಿ ಹೊರೆಯನ್ನು ಹಾಗೂ ಆಮದು ಮಾಡಿಕೊಳ್ಳುತ್ತಿರುವುದರಿಂದ ಹೆಚ್ಚುತ್ತಿರುವ ವಿದೇಶಿ ವಿನಿಮಯ ಹೊರೆಯನ್ನು ತಪ್ಪಿಸಿಕೊಳ್ಳುವುದು ಹೇಗೆ ಎಂಬುದೇ 1991ರ ನಂತರದ ಎಲ್ಲಾ ಸರ್ಕಾರಗಳ ಪ್ರಮುಖ ಲಕ್ಷ್ಯವಾಯಿತು. ಅದರ ಭಾಗವಾಗಿ 1992ರಲ್ಲಿ ಯೂರಿಯಾವನ್ನು ಹೊರತುಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳಿಗೆ ಕೊಡುತ್ತಿದ್ದ ಸಬ್ಸಿಡಿಯನ್ನು ಪಾಕ್ಷಿಕವಾಗಿ ಹಿಂತೆಗೆದುಕೊಳ್ಳಲಾಯಿತು. ಹೀಗಾಗಿ ಯೂರಿಯವನ್ನು ಹೊರತು ಪಡಿಸಿ ಮಿಕ್ಕೆಲ್ಲಾ ಗೊಬ್ಬರಗಳ ಬೆಲೆ ಹಲವು ಪಟ್ಟು ಏರಿಕೆಯಾಯಿತು. ಸಹಜವಾಗಿಯೇ ಇದರಿಂದ ಯೂರಿಯೇತರ ಗೊಬ್ಬರಗಳ ಬಳಕೆ ಹಾಗೂ ಉತ್ಪಾದನೆಯೂ ಕುಂಠಿತವಾಯಿತು.


ಇದನ್ನೂ ಓದಿ; ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...