Homeಕರ್ನಾಟಕ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಪೌರಾಡಳಿತ ಇಲಾಖೆ ಇಂದಿರಾ ಕ್ಯಾಟೀನ್‌ಗಳಲ್ಲಿ ಉಚಿತ ಆಹಾರ ಒದಗಿಸಲು ನಿರ್ಧಾರ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಈಗ ರಾಜ್ಯ ಕಾಂಗ್ರೆಸ್ ಮತ್ತು ರಾಜ್ಯ ಬಿಜೆಪಿ ನಡುವೆ ಕೆಸರೆರಚಾರಕ್ಕೆ ಕಾರಣವಾಗಿದೆ.

ಟ್ವಿಟ್ಟರ್ ವಾರ್‌ ನಡೆಸುತ್ತಿರುವ ಎರಡು ಪಕ್ಷಗಳು, ನಾನು ಅಕ್ಕಿ ಕೊಟ್ಟೆ, ಇಂದಿರಾ ಕ್ಯಾಂಟೀನ್ ಕೊಟ್ಟೆ ಎನ್ನುವ ಕಾಂಗ್ರೆಸ್, ಪಿತ್ರಾರ್ಜಿತ ಆಸ್ತಿಯಲ್ಲಿ ಕೊಟ್ಟಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್,  “ಹೃದಯ ಹೀನ ರಾಜ್ಯ ಬಿಜೆಪಿ ಸರ್ಕಾರ, ಸಂಕಷ್ಟದಲ್ಲಿರುವ ಜನತೆಗೆ ರೇಷನ್ ಕಿಟ್ ಕೊಡಿ, ಪ್ಯಾಕೇಜ್ ನೀಡಿ ಎಂದರೆ ನೋಟ್ ಪ್ರಿಂಟ್ ಮಾಡ್ತಿಲ್ಲ ಎನ್ನುವ ನೀವು ಕಾಂಗ್ರೆಸ್‌ನ ಜನಪರ ನೆರವಿನ ಬಗ್ಗೆ ಕೊಂಕು ತೆಗೆಯುವ ಯೋಗ್ಯತೆ ನಿಮಗಿದೆಯೇ..? ಎಂದು ಪ್ರಶ್ನಿಸಿದೆ.

ಜೊತೆಗೆ “ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು, ಅಕ್ಕಿ ಕೇಳಿದ ಜನತೆಗೆ ಹೋಗಿ ಸಾಯ್ರಿ ಎಂದವರು ನೀವು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

 

ಲಸಿಕಾ ಅಭಿಯಾನ ಹೇಗೆ ನಡೆಯಲಿದೆ ಎಂಬ ಬಗ್ಗೆ ಬ್ಲೂ ಪ್ರಿಂಟ್ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಸುಧಾಕರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದರು. ಇದಕ್ಕೂ ಬಿಜೆಪಿ ಘಟಕ ಆಕ್ಷೇಪ ವ್ಯಕ್ತಪಡಿಸಿತ್ತು.

ಬಿಜೆಪಿಗೆ ತಿರುಗೇಟು ನೀಡಿರುವ ಕಾಂಗ್ರೆಸ್, “ಆಕ್ಸಿಜನ್, ICU, ರೆಮಿಡಿಸಿವಿರ್, ಬೆಡ್, ಚಿಕಿತ್ಸೆ ಕೊಡಲಾಗದೆ ಜನರನ್ನು ಹಾದಿ ಬೀದಿಯಲ್ಲಿ ಕೊಲ್ಲುತ್ತಿರುವ ರಾಜ್ಯ ಬಿಜೆಪಿ, ಲಸಿಕೆ ವೈಫಲ್ಯದ ಬಗ್ಗೆ ಹೈಕೋರ್ಟ್ ತಪರಾಕಿ ಕೊಟ್ಟಿದ್ದು ಸಾಲಲಿಲ್ಲವೇ? ಬ್ಲೂ ಪ್ರಿಂಟ್ ಕೊಡಿ ಎಂದ ಹೈಕೋರ್ಟಿಗೂ ಇದೇ ಮಾತು ಹೇಳಬಲ್ಲಿರಾ?” ಲಜ್ಜೆ ಬಿಟ್ಟರುವ ನಿಮ್ಮ ವಿರುದ್ಧ ಜನ ಏಳುವ ಕಾಲ ದೂರವಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

ನಾವು ಅನ್ನಭಾಗ್ಯ ನೀಡಿದ್ದೇವೆ. ನೀವು ಸಾವಿನ ಭಾಗ್ಯ, ಸ್ಮಶಾನ ಭಾಗ್ಯ ನೀಡಿದ್ದೀರಾ ಎಂದು ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸಿದೆ.

“ಹೌದು ನಾವು ಅನ್ನ ಭಾಗ್ಯದಲ್ಲಿ ಅಕ್ಕಿ ಕೊಟ್ಟೆವು, ಇಂದಿರಾ ಕ್ಯಾಂಟೀನ್‌ನಲ್ಲಿ ಅನ್ನ ಕೊಟ್ಟೆವು. ನೀವು ಕೊಟ್ಟಿದ್ದು ಸಾವಿನ ಭಾಗ್ಯ, ಸ್ಮಶಾನ ಭಾಗ್ಯ. ನಿಮ್ಮ ಆಡಳಿತದಲ್ಲಿ ಜನರ ಬದುಕು ಹಸನಾಗುವುದಿರಲಿ ಸತ್ತರೂ ಸಂಸ್ಕಾರವಿಲ್ಲದಂತಾಗಿದೆ. ಜನ ಕ್ಯಾಕರಿಸಿ ಉಗಿಯುತ್ತಿದ್ದಾರೆ ಸ್ವಲ್ಪ ಆಚೆ ನೋಡಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇಂದಿರಾ ಕ್ಯಾಂಟೀನ್ ವಿಷಯವಾಗಿ ಹಲವು ಬಾರಿ ಕಿತ್ತಾಟ ನಡೆದಿದೆ. ಇಂದಿರಾ ಕ್ಯಾಂಟೀನ್‌ಗೆ ಅನುದಾನ ಕಡಿತ ಮಾಡಲಾಗಿದೆ. ಅವುಗಳನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಈಗ ಲಾಕ್‌ಡೌನ್ ಸಮಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ವಿಚಾರ ಮುನ್ನಲೆಗೆ ಬಂದಿದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...