Homeಮುಖಪುಟದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

- Advertisement -
- Advertisement -

ಕೊರೊನಾ ಪ್ರಕರಣಗಳ ಏರಿಕೆ, ಸಾವುಗಳು, ಆರೋಗ್ಯ ಸೌಕರ್ಯಗಳ ಅಲಭ್ಯತೆ ನಡುವೆ ದೇಶವೇ ಜರ್ಜರಿತವಾಗಿದೆ. ಇದರ ನಡುವೆ ಬ್ಲಾಕ್ ಫಂಗಸ್ ಸೋಂಕು ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡುತ್ತಿದೆ. ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು ಇದ್ದಾರೆ ಎಂದು ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ಸೋಂಕಿನಿಂದ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದ್ದು, ರಾಜ್ಯದಲ್ಲಿ 2,000 ಪ್ರಕರಣಗಳು ಇರಬಹುದು. ಕೊರೊನಾ ಪ್ರಕರಣಗಳ ಏರಿಕೆ ಜೊತೆಗೆ ಬ್ಲಾಕ್ ಫಂಗಸ್ ಸೋಂಕಿತರು ಏರಿಕೆಯಾಗಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ವೈದ್ಯಕೀಯ ಕಾಲೇಜುಗಳೊಂದಿಗಿರುವ ಆಸ್ಪತ್ರೆಗಳನ್ನು ಬ್ಲಾಕ್ ಫಂಗಸ್ ಸೋಂಕು ಚಿಕಿತ್ಸಾ ಕೇಂದ್ರಗಳಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಬುಧವಾರ (ಮೇ 12) ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಥಾಣೆಯಲ್ಲಿ ಇತರ ಆರು ರೋಗಿಗಳು ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಎರಡು ದಿನಗಳ ಹಿಂದೆ ಒಡಿಶಾ ರಾಜ್ಯದಲ್ಲಿ ಮೊದಲ ಬ್ಲಾಕ್ ಫಂಗಸ್ ಪ್ರಕರಣವನ್ನು ವರದಿಯಾಗಿದೆ. ಒಡಿಶಾದ ಜಜ್ಪುರ್ ಜಿಲ್ಲೆಯ 71 ವರ್ಷದ ಕೊರೊನಾ ರೋಗಿಯಲ್ಲಿ ಸೋಂಕು ಕಂಡು ಬಂದಿದ್ದು, ಅವರು ಅನಿಯಂತ್ರಿತ ಮಧುಮೇಹವನ್ನು ಸಹ ಹೊಂದಿದ್ದಾರೆ.

ಇತ್ತ ದೆಹಲಿ, ಗುಜರಾತ್ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಈ ಸೋಂಕಿನ ಈಗಾಗಲೇ ಆತಂಕ ಉಂಟುಮಾಡುತ್ತಿದೆ.

ಕಳೆದ 12 ಗಂಟೆಗಳಲ್ಲಿ ಜೈಪುರದಲ್ಲಿ ಬ್ಲಾಕ್ ಫಂಗಸ್ ಸೋಂಕಿನ 14 ರೋಗಿಗಳು ಕಂಡು ಬಂದಿದ್ದಾರೆ.  ರಾಂಚಿಯಿಂದ ಇಬ್ಬರು, ರಾಜಸ್ಥಾನದಿಂದ ನಾಲ್ಕು ಮಂದಿ, ಉತ್ತರ ಪ್ರದೇಶದ ಐವರು ಮತ್ತು ದೆಹಲಿ-ಎನ್‌ಸಿಆರ್‌ನಿಂದ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಈ ಸೋಂಕಿತರಲ್ಲಿ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಗುಜರಾತ್‌ನಲ್ಲಿ ಅತಿ ಹೆಚ್ಚು ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. ಗುಜರಾತ್ ಸರ್ಕಾರವು ಅಂತಹ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಲು ಪ್ರಾರಂಭಿಸಿದೆ ಮತ್ತು ಅದರ ಚಿಕಿತ್ಸೆಯಲ್ಲಿ ಬಳಸುವ 5,000 ಔಷಧದ ಬಾಟಲುಗಳನ್ನು ಸಂಗ್ರಹಿಸಿದೆ. ಗುಜರಾತ್ ಇದುವರೆಗೆ 100 ಕ್ಕೂ ಹೆಚ್ಚು  ಪ್ರಕರಣಗಳನ್ನು ವರದಿ ಮಾಡಿದ್ದು, ಇದು ಅನೇಕ ರೋಗಿಗಳನ್ನು ಕುರುಡನನ್ನಾಗಿ ಮಾಡಿದೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಈ ಸೋಂಕಿನಿಂದ ಬಳಲುತ್ತಿರುವ ರೋಗಿಗಳ ಮೇಲೆ ಬಳಸಲಾಗುತ್ತಿರುವ ಆಂಫೊಟೆರಿಸಿನ್ ಬಿ (Amphotericin B) ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೆಚ್ಚುವರಿ ಆಮದು ಮತ್ತು ದೇಶೀಯ ಉತ್ಪಾದನೆಯಲ್ಲಿ ಹೆಚ್ಚಳದೊಂದಿಗೆ ಔಷಧಿ ಪೂರೈಕೆ ಸುಧಾರಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ತಿಳಿಸಿದೆ.

ಬ್ಲಾಕ್ ಫಂಗಸ್ ಸೋಂಕಿನ ಲಕ್ಷಣಗಳು ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ಮೂಗಿನ ಅಥವಾ ಸೈನಸ್ ದಟ್ಟಣೆ ಮತ್ತು ದೃಷ್ಟಿ ಭಾಗಶಃ ನಷ್ಟ. ಕೆಲವರು ಕೆಮ್ಮು, ಉಸಿರಾಟದ ತೊಂದರೆ, ರಕ್ತಸಿಕ್ತ ವಾಂತಿ ಮತ್ತು ಬದಲಾದ ಮಾನಸಿಕ ಸ್ಥಿತಿ ಕಂಡುಬರುತ್ತದೆ.

ಕೊರೊನಾ ರೋಗಿಗಳಲ್ಲಿ ಅನಿಯಂತ್ರಿತ ಮಧುಮೇಹ ಮತ್ತು ದೀರ್ಘಕಾಲದ ತೀವ್ರ ನಿಗಾ ಘಟಕ (ಐಸಿಯು) ವಾಸ್ತವ್ಯದಲ್ಲಿ ಈ ಸೋಂಕು ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬ್ಲಾಕ್ ಫಂಗಸ್ ಸೋಂಕು ಹೊಸದಲ್ಲ ಆದರೆ ಕೊರೊನಾ ಸೋಂಕಿತ ರೋಗಿಗಳಲ್ಲಿ ಹೆಚ್ಚುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಏಕೆಂದರೆ ಸ್ಟೀರಾಯಡ್‌ಗಳ ಬಳಕೆಯು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಕೆಲವು ಔಷಧಿಗಳು ರೋಗಿಗಳ ರೋಗನಿರೋಧಕ ಶಕ್ತಿಯನ್ನು ಕಡಿಮೆಗೊಳಿಸುತ್ತವೆ ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...