Homeಕರೋನಾ ತಲ್ಲಣಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

ಗಂಗಾ ನದಿಯಲ್ಲಿ ಮೃತದೇಹಗಳ ಹರಿವು: ನದಿಗೆ ಅಡ್ಡಲಾಗಿ ಬಲೆ ಹಾಕಿದ ಅಧಿಕಾರಿಗಳು

- Advertisement -
- Advertisement -

ಬಿಹಾರ ಮತ್ತು ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿ ಮೃತದೇಹಗಳು ಹರಿದು ಬಂದು ಆತಂಕಕ್ಕೆ ಕಾರಣವಾಗಿದ್ದವು. ಇವುಗಳನ್ನು ಹೊರ ತೆಗೆಯಲಾಗುತ್ತಿದ್ದು, ಉತ್ತರ ಪ್ರದೇಶ ಮತ್ತು ಬಿಹಾರದ ಗಡಿಯಲ್ಲಿರುವ ರಾಣಿಘಾಟ್ ಬಳಿ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೃತದೇಹಗಳು ಕೊರೊನಾ ಸೋಂಕಿತರದ್ದು ಎಂದು ಸ್ಥಳೀಯರು ಮತ್ತು ಅಧಿಕಾರಿಗಳು ಶಂಕಿಸಿ ಆತಂಕಕ್ಕೆ ಒಳಗಾಗಿದ್ದರು. ನೂರಕ್ಕೂ ಹೆಚ್ಚು ಮೃತದೇಹಗಳು ತೇಲುತ್ತಾ ಬಂದಿವೆ ಎಂದು ಬಿಹಾರದ ಅಧಿಕಾರಿಗಳು ತಿಳಿಸಿದ್ದರು. ಸದ್ಯ 73 ಕ್ಕೂ ಅಧಿಕ ಶವಗಳನ್ನು ನದಿಯಿಂದ ತೆಗೆಯಲಾಗಿದ್ದು, ನಂತರ ಗಂಗಾ ನದಿಗೆ ಅಡ್ಡಲಾಗಿ ಬಲೆಯನ್ನು ಸ್ಥಾಪಿಸಲಾಗಿದೆ ಎಂದು ಉತ್ತರ ಭಾರತದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬಿಹಾರದ ಬಕ್ಸಾರ್‌ನ ಗಂಗಾ ನದಿ ತಟದಲ್ಲಿ ನೂರಕ್ಕೂ ಹೆಚ್ಚು ಮೃತದೇಹಗಳು ಕಂಡು ಬಂದಿದ್ದು, ಜನರ ಆತಂಕಕ್ಕೆ ಕಾರಣವಾಗಿತ್ತು. ಮಂಗಳವಾರ ಬಕ್ಸಾರ್‌ನಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಘಾಜಿಪುರದಲ್ಲಿಯೂ ಗಂಗೆಯಲ್ಲಿ ಮೃತದೇಹಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಉತ್ತರ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾಂಪ್ರದಾಯಿಕ ಹಿಂದೂ ಶವಸಂಸ್ಕಾರಗಳಿಗೆ ಕಟ್ಟಿಗೆ ಸಿಗದ ಕಾರಣ ಅಥವಾ ಅಂತ್ಯಕ್ರಿಯೆಗಳಿಂದ ಚಿತಾಗಾರಗಳು ತುಂಬಿರುವ ಕಾರಣ ಮೃತರ ಸಂಬಂಧಿಕರು ಶವಗಳನ್ನು ನದಿಯಲ್ಲಿ ತೇಲಿಬಿಟ್ಟಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.

ಅಂತಿಮ ವಿಧಿ-ವಿಧಾನಗಳನ್ನು ನಡೆಸದೆಯೇ ಈ ಶವಗಳನ್ನು ಗಂಗಾ ನದಿಗೆ ಎಸೆದಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಬಿಹಾರದ ಬಕ್ಸಾರ್‌ನ  ಚೌಸಾ ಗ್ರಾಮದ ಮಹಾದೇವ್ ಘಾಟ್‌ನಲ್ಲಿ ನದಿಯಿಂದ ಹೊರ ತೆಗೆಯಲಾದ ಮೃತದೇಹಗಳನ್ನು ಜೆಸಿಬಿ ಬಳಸಿ ಹೂಳಲಾಗುತ್ತಿದೆ.

ಬಿಹಾರ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಜಾ, ಟ್ವೀಟ್ ಮಾಡಿ ಬಕ್ಸಾರ್ ಜಿಲ್ಲೆಯ ಚೌಸಾ ಗ್ರಾಮದ ಬಳಿಯ ಗಂಗಾ ನದಿಯಲ್ಲಿ ಪತ್ತೆಯಾದ ಮೃತದೇಹಗಳು, 4 ರಿಂದ 5 ದಿನಗಳ ಹಿಂದೆ ಮರಣ ಹೊಂದಿರುವವರ ದೇಹಗಳು ಎಂದು ಮರಣೋತ್ತರ ಪರೀಕ್ಷೆಗಳು ದೃಢಪಡಿಸಿವೆ ಎಂದಿದ್ದಾರೆ.

ಕೊಳೆತಿರುವ ಈ  ದೇಹಗಳು ನೆರೆಯ ರಾಜ್ಯವಾದ ಉತ್ತರ ಪ್ರದೇಶದಿಂದ ಕೊಚ್ಚಿಕೊಂಡು ಬಂದಿವೆ. ಉತ್ತರ ಪ್ರದೇಶದ ಗಡಿಯಲ್ಲಿ ನದಿಯಲ್ಲಿ ಬಲೆಯನ್ನು ಇರಿಸಲಾಗಿದೆ ಮತ್ತು ಗಸ್ತು ಹೆಚ್ಚಿಸಲಾಗಿದೆ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಮೃತ ಪಟ್ಟಿರುವವರಲ್ಲಿ ಯಾರೊಬ್ಬರೂ ಬಕ್ಸಾರ್ ಜಿಲ್ಲೆಯ ನಿವಾಸಿಗಳಲ್ಲ ಎಂದು ಚೌಸಾದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರವೂ ಕೂಡ ಉತ್ತರ ಪ್ರದೇಶದ ಗಹ್ಮರ್ ಜಿಲ್ಲೆಯಲ್ಲಿಯೂ 25 ಮೃತದೇಹಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...