Homeಮುಖಪುಟಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

ಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

- Advertisement -
- Advertisement -

ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸಾಂಕ್ರಾಮಿಕ ವೈರಸ್‌ಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊರೊನಾ ಮೂರನೇ ಅಲೆ ತಡೆಯಲು ಯಜ್ಞ ನಡೆಸುವಂತೆ ಸಲಹೆ ನೀಡಿದ್ದಾರೆ.

ಕೊರೊನಾ ಹಬ್ಬುತ್ತಿರುವ ಈ ಸಮಯದಲ್ಲಿ ಪರಿಸರವನ್ನು ಶುದ್ಧೀಕರಿಸಲು ಮತ್ತು ಮೂರನೇ ತರಂಗವನ್ನು ದೂರವಿಡಲು ಪ್ರತಿಯೊಬ್ಬರೂ ನಾಲ್ಕು ದಿನಗಳ ಕಾಲ ‘ಯಜ್ಞ ಚಿಕಿತ್ಸೆ’ ನಡೆಸುವಂತೆ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿಕೆ ನೀಡಿದ್ದಾರೆ.

ಇಂದೋರ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪರಿಸರ ಶುದ್ಧೀಕರಣಕ್ಕಾಗಿ, ನಾಲ್ಕು ದಿನಗಳ ಕಾಲ ಯಜ್ಞವನ್ನು ಮಾಡಿ. ಇದು “ಯಜ್ಞ ಚಿಕಿತ್ಸಾ”. ಹಿಂದಿನ ಕಾಲದಲ್ಲಿ, ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದು ಪರಿಸರವನ್ನು ಶುದ್ಧೀಕರಿಸುತ್ತದೆ ಇದರಿಂದ ಕೊರೊನಾ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಭಾರತವು ಪ್ರಸ್ತುತ ವಿನಾಶಕಾರಿ ಎರಡನೇ ಕೋವಿಡ್ ಅಲೆಯನ್ನು ಎದುರಿಸುತ್ತಿದೆ, ಅದು ರಾಷ್ಟ್ರದಾದ್ಯಂತ ವ್ಯಾಪಿಸಿದೆ. ದೇಶದ ಆರೋಗ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನೇ ಅಲುಗಾಡಿಸಿದ್ದು, ಕೊರೊನಾ ವಾರಿಯರ್ಸ್ ಆಗಿರುವ ವೈದ್ಯಕೀಯ ಕಾರ್ಯಕರ್ತರ ಮೇಲೆ ಹೊರೆಯಾಗಿದೆ. ನಾಲ್ಕು ದಿನಗಳ ಕಾಲ ಯಜ್ಞ ಚಿಕಿತ್ಸೆ ನಡೆಸಿದರೆ ಕೊರೊನಾ ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಉಷಾ ಠಾಕೂರ್‌ ಹೇಳಿದ್ದಾರೆ.

“ತಜ್ಞರ ಪ್ರಕಾರ, ಈ ಮೂರನೇ ಅಲೆ ಮಕ್ಕಳಿಗೆ ಮಾರಕವಾಗಿದೆ. ಇದಕ್ಕಾಗಿ ಮಧ್ಯಪ್ರದೇಶ ಸರ್ಕಾರವು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಾಂಕ್ರಾಮಿಕ ರೋಗವನ್ನು ನಾವು ಯಶಸ್ವಿಯಾಗಿ ನಿವಾರಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಹಿಂದೆ, ಉಷಾ ಠಾಕೂರ್ ಇತ್ತೀಚೆಗೆ ಕೊರೊನಾ ನಿರ್ಮೂಲನೆ ಮಾಡಲು ಇಂದೋರ್ ವಿಮಾನ ನಿಲ್ದಾಣದಲ್ಲಿ ಪ್ರತಿಮೆಯ ಮುಂದೆ ಪೂಜೆ, ಹೋಮ ಆಚರಣೆಗಳನ್ನು ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಕೊರೊನಾ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದಾಗ ಮಾಸ್ಕ್ ಕೂಡ ಧರಿಸಲಿಲ್ಲ ಎಂದು ಟೀಕಿಸಲಾಗಿತ್ತು.

ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣುವ ಉಷಾ ಠಾಕೂರ್, ತಾವು ನಿಯಮಿತವಾಗಿ ಹನುಮಾನ್ ಚಾಲಿಸಾವನ್ನು ಪಠಿಸುವುದರಿಂದ ಮತ್ತು ಕಷಾಯ ಕುಡಿಯುವುದರಿಂದ ತನ್ನ ವೈದಿಕ ಜೀವನಶೈಲಿಯಿಂದಾಗಿ ತಮ್ಮ ಮೇಲೆ ಕೊರೊನಾ ಆಕ್ರಮಣ ಮಾಡುವುದಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. 1, 2 ನೇ ಅಲೆಗೆ ಯಾಕೆ ಮಾಡಲಿಲ್ಲ…ಈ ಯಾಹಾಗ (ಯಾಗ)
    ಯಗ್ಗಣ (ಯಜ್ಞ) ಗಳೂ ..

  2. ಕೊರೋನಾ ಓಡಿಸ‌ಲಿಕ್ಕೆ ಪ್ರ‌ಧಾನಿಗ‌ಳು ದೀಪ‌ಹ‌ಚ್ಚಿ ತ‌ಟ್ಟೇ ಬಾರಿಸ‌ಲು ಹೇಳಿದ‌ರು. ಈ ಮೆಡ‌ಮ್ ಯ‌ಗ್ನ‌ ಮಾಡಿ ಅ0ತಾ ಹೇಳ್ತಾರೆ. ಮು0ದಿನ‌ವ‌ರು ಬ್ರಾಹ್ಮ‌ಣ‌ರಿಗೆ ಹ‌ಸುಗ‌ಳ‌ನ್ನು ದಾನ‌ಮಾಡಿ ಅ0ತಾ ಹೇಳ‌ಬ‌ಹುದು. ಒಟ್ಟಾರೆ ಜ‌ನ‌ ಸ‌ತ್ರೂ ಪ‌ರ‌ವಾಗಿಲ್ಲ‌ ವೈಧಿಕ‌ ಪ‌ರ‌0ಪ‌ರೆ ಉಳಿಬೇಕು.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...