Homeಮುಖಪುಟಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

ಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

- Advertisement -
- Advertisement -

ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸಾಂಕ್ರಾಮಿಕ ವೈರಸ್‌ಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊರೊನಾ ಮೂರನೇ ಅಲೆ ತಡೆಯಲು ಯಜ್ಞ ನಡೆಸುವಂತೆ ಸಲಹೆ ನೀಡಿದ್ದಾರೆ.

ಕೊರೊನಾ ಹಬ್ಬುತ್ತಿರುವ ಈ ಸಮಯದಲ್ಲಿ ಪರಿಸರವನ್ನು ಶುದ್ಧೀಕರಿಸಲು ಮತ್ತು ಮೂರನೇ ತರಂಗವನ್ನು ದೂರವಿಡಲು ಪ್ರತಿಯೊಬ್ಬರೂ ನಾಲ್ಕು ದಿನಗಳ ಕಾಲ ‘ಯಜ್ಞ ಚಿಕಿತ್ಸೆ’ ನಡೆಸುವಂತೆ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿಕೆ ನೀಡಿದ್ದಾರೆ.

ಇಂದೋರ್‌ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪರಿಸರ ಶುದ್ಧೀಕರಣಕ್ಕಾಗಿ, ನಾಲ್ಕು ದಿನಗಳ ಕಾಲ ಯಜ್ಞವನ್ನು ಮಾಡಿ. ಇದು “ಯಜ್ಞ ಚಿಕಿತ್ಸಾ”. ಹಿಂದಿನ ಕಾಲದಲ್ಲಿ, ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದು ಪರಿಸರವನ್ನು ಶುದ್ಧೀಕರಿಸುತ್ತದೆ ಇದರಿಂದ ಕೊರೊನಾ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಭಾರತವು ಪ್ರಸ್ತುತ ವಿನಾಶಕಾರಿ ಎರಡನೇ ಕೋವಿಡ್ ಅಲೆಯನ್ನು ಎದುರಿಸುತ್ತಿದೆ, ಅದು ರಾಷ್ಟ್ರದಾದ್ಯಂತ ವ್ಯಾಪಿಸಿದೆ. ದೇಶದ ಆರೋಗ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನೇ ಅಲುಗಾಡಿಸಿದ್ದು, ಕೊರೊನಾ ವಾರಿಯರ್ಸ್ ಆಗಿರುವ ವೈದ್ಯಕೀಯ ಕಾರ್ಯಕರ್ತರ ಮೇಲೆ ಹೊರೆಯಾಗಿದೆ. ನಾಲ್ಕು ದಿನಗಳ ಕಾಲ ಯಜ್ಞ ಚಿಕಿತ್ಸೆ ನಡೆಸಿದರೆ ಕೊರೊನಾ ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಉಷಾ ಠಾಕೂರ್‌ ಹೇಳಿದ್ದಾರೆ.

“ತಜ್ಞರ ಪ್ರಕಾರ, ಈ ಮೂರನೇ ಅಲೆ ಮಕ್ಕಳಿಗೆ ಮಾರಕವಾಗಿದೆ. ಇದಕ್ಕಾಗಿ ಮಧ್ಯಪ್ರದೇಶ ಸರ್ಕಾರವು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಾಂಕ್ರಾಮಿಕ ರೋಗವನ್ನು ನಾವು ಯಶಸ್ವಿಯಾಗಿ ನಿವಾರಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಹಿಂದೆ, ಉಷಾ ಠಾಕೂರ್ ಇತ್ತೀಚೆಗೆ ಕೊರೊನಾ ನಿರ್ಮೂಲನೆ ಮಾಡಲು ಇಂದೋರ್ ವಿಮಾನ ನಿಲ್ದಾಣದಲ್ಲಿ ಪ್ರತಿಮೆಯ ಮುಂದೆ ಪೂಜೆ, ಹೋಮ ಆಚರಣೆಗಳನ್ನು ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಕೊರೊನಾ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದಾಗ ಮಾಸ್ಕ್ ಕೂಡ ಧರಿಸಲಿಲ್ಲ ಎಂದು ಟೀಕಿಸಲಾಗಿತ್ತು.

ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣುವ ಉಷಾ ಠಾಕೂರ್, ತಾವು ನಿಯಮಿತವಾಗಿ ಹನುಮಾನ್ ಚಾಲಿಸಾವನ್ನು ಪಠಿಸುವುದರಿಂದ ಮತ್ತು ಕಷಾಯ ಕುಡಿಯುವುದರಿಂದ ತನ್ನ ವೈದಿಕ ಜೀವನಶೈಲಿಯಿಂದಾಗಿ ತಮ್ಮ ಮೇಲೆ ಕೊರೊನಾ ಆಕ್ರಮಣ ಮಾಡುವುದಿಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. 1, 2 ನೇ ಅಲೆಗೆ ಯಾಕೆ ಮಾಡಲಿಲ್ಲ…ಈ ಯಾಹಾಗ (ಯಾಗ)
    ಯಗ್ಗಣ (ಯಜ್ಞ) ಗಳೂ ..

  2. ಕೊರೋನಾ ಓಡಿಸ‌ಲಿಕ್ಕೆ ಪ್ರ‌ಧಾನಿಗ‌ಳು ದೀಪ‌ಹ‌ಚ್ಚಿ ತ‌ಟ್ಟೇ ಬಾರಿಸ‌ಲು ಹೇಳಿದ‌ರು. ಈ ಮೆಡ‌ಮ್ ಯ‌ಗ್ನ‌ ಮಾಡಿ ಅ0ತಾ ಹೇಳ್ತಾರೆ. ಮು0ದಿನ‌ವ‌ರು ಬ್ರಾಹ್ಮ‌ಣ‌ರಿಗೆ ಹ‌ಸುಗ‌ಳ‌ನ್ನು ದಾನ‌ಮಾಡಿ ಅ0ತಾ ಹೇಳ‌ಬ‌ಹುದು. ಒಟ್ಟಾರೆ ಜ‌ನ‌ ಸ‌ತ್ರೂ ಪ‌ರ‌ವಾಗಿಲ್ಲ‌ ವೈಧಿಕ‌ ಪ‌ರ‌0ಪ‌ರೆ ಉಳಿಬೇಕು.

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...