Homeಕರೋನಾ ತಲ್ಲಣ18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ.

- Advertisement -
- Advertisement -

ಹಲವು ಅಡೆತಡೆಗಳ ನಡುವೆ ಮೇ 1 ರಿಂದ ಆರಂಭವಾಗಿದ್ದ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮೇ 14 ರಿಂದ ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೂರು ದಿನದ ಹಿಂದೆ ತಾನೇ ಆರೋಗ್ಯ ಸಚಿವ ಡಾ.ಸುಧಾಕರ್‌ರವರು ಟ್ವೀಟ್ ಮಾಡಿ “ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. ಹಲವು ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು” ಎಂದಿದ್ದರು.

ಆದರೆ ಇಂದು ಸರ್ಕಾರ ಲಸಿಕೆಯ ಕೊರತೆಯಿರುವುದರಿಂದ ಮೇ 14 ರಿಂದ ತಾತ್ಕಾಲಿಕವಾಗಿ 18-44 ವರ್ಷ ವಯೋಮಾನದವರಿಗೆ ಲಸಿಕೆ ರದ್ದುಮಾಡುತ್ತಿದ್ದೇವೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ನಮ್ಮ ಆದ್ಯತೆ ಎಂದು ತಿಳಿಸಿದೆ. ಕೋವಿನ್ ಆಪ್‌ನಲ್ಲಿ ನೊಂದಣಿ ಮಾಡಿಸಿಕೊಂಡವರಿಗೂ ಸಹ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದ ಜನರ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವೇ ಲಸಿಕೆಯಿಲ್ಲ ಎಂದು ಕೈಚೆಲ್ಲಿದರೆ ಜನರೇನು ಮಾಡಬೇಕು? ಈಗ ಕೇಂದ್ರ ಸರ್ಕಾರ ಲಸಿಕೆ ಪೂರೈಸುತ್ತಿಲ್ಲ ಎಂದಿದ್ದಾರೆ. ಎರಡು ಕಡೆ ಒಂದೇ ಸರ್ಕಾರವಿದ್ದರೆ ಸ್ವರ್ಗವಾಗುತ್ತೆ ಎಂದಿದ್ದರು. ಆದರೆ ಜನರ ಬಾಳು ಈಗ ನರಕವಾಗಿದೆ. ಇವರ ಭಾಷೆಯಲ್ಲೇ ಹೇಳುವುದಾರೆ ರಾಜ್ಯದ 25 ಜನ BJP ಸಂಸದರಿಗೆ ಕೇಂದ್ರದ ಬಳಿ ಲಸಿಕೆ ಕೇಳಲು ಧಮ್ ಇಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಲಸಿಕೆ ಕೊಡುವ ಯೋಗ್ಯತೆ ಇಲ್ಲದಿದ್ದರೆ ಲಸಿಕಾ ಅಭಿಯಾನ ಘೋಷಣೆ ಮಾಡಿದ್ಯಾಕೆ? ಆರೋಗ್ಯ ಸಚಿವರು ಎಲ್ಲರಿಗೂ ಲಸಿಕೆ ಕೊಡುತ್ತೀವಿ ಎನ್ನುತ್ತಾರೆ. ಮುಖ್ಯಮಂತ್ರಿಗಳು ಲಸಿಕೆಗಾಗಿ ಬೊಬ್ಬೆ ಹೊಡೆಯಬೇಡಿ ಎನ್ನುತ್ತಾರೆ. ಇದೇನು ಜವಬ್ಧಾರಿಯುತ ಸರ್ಕಾರವೋ?ರಣಹೇಡಿ ಸರ್ಕಾರವೋ? ಈ ಸರ್ಕಾರ ರಾಜ್ಯದ ಜನರ ದೌರ್ಭಾಗ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ 18-44 ವರ್ಷದವರಿಗೆ ಲಸಿಕೆ ನಿಲ್ಲಿಸುವುದಾಗಿ ಘೋಷಿಸಿದೆ. ರಾತ್ರಿ ವೇಳೆಗೆ ಬೆಂಗಳೂರಿನಲ್ಲಿ ಕೇವಲ 15,000 ಲಸಿಕೆಗಳು ಮಾತ್ರ ಉಳಿದಿವೆ. 63 ಲಕ್ಷ ಜನರಿಗೆ 2 ನೇ ಡೋಸ್ ಅಗತ್ಯವಿದೆ, ಆದರೆ ಲಸಿಕೆ ಇಲ್ಲ. ಯಾರದರೂ ಈ ಲಸಿಕೆ ಕೊರತೆಯ ಪಟ್ಟಿಯನ್ನು ಸಂಸದ ತೇಜಸ್ವಿ ಸೂರ್ಯ ಕೊಟ್ಟು ಮೋದಿಗೆ ಓದಲು ಹೇಳುವಿರಾ ಎಂದು ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

18-44 ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಾಗಿ ಪಿಎಂ ಪ್ರಕಟಿಸಿದರು. ಸಿಎಂ ಮೇ 1 ರಂದು ಉದ್ಘಾಟನೆ ಮಾಡುತ್ತಾರೆ. ಆದರೆ ಎಲ್ಲಿಯೂ ಲಸಿಕೆ ಸರಬರಾಜು ಇಲ್ಲ. ಮೇ 10 ರಿಂದ ಮತ್ತೆ ಪುನರಾರಂಭ. ಈಗ ಮೇ 14 ರಿಂದ ಅಮಾನತುಗೊಳಿಸಲಾಗಿದೆ. ಇದು ಆಡಳಿತ ಅಥವಾ ತಮಾಷೆಯೊ? ಎಂದು ಶಾಸಕ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಇಲ್ಲ!

18-44 ವಯಸ್ಸಿನವರಿಗೆ ಲಸಿಕೆ ಇಲ್ಲ ಮಾತ್ರವಲ್ಲದೇ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ. ಈ ಕುರಿತು ಗದಗ ಜಿಲ್ಲಾ ಅರೋಗ್ಯ ಅಧಿಕಾರಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನಮ್ಮ ಆದ್ಯತೆಯಾಗಿರುವುದರಿಂದ ಹೊಸಬರಿಗೆ ಮೊದಲ ಡೋಸ್ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದು ಕೂಡ ಲಸಿಕೆ ಇಲ್ಲದೆ ಹಲವು ಆಸ್ಪತ್ರೆಗಳು ಲಸಿಕೆ ನೀಡುವುದನ್ನು ನಿಲ್ಲಿಸಿವೆ. ಕೋವಿನ್ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡರೂ ಲಸಿಕೆ ಸಿಗದವರು ಸಮರ್ಪಕ ಯೋಜನೆ ಇಲ್ಲದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸತತ ಮನವಿಗೆ ಸ್ಪಂದಿಸದ ಮೋದಿ, ಯೋಗಿ!: ಮೋದಿ ಅನುಯಾಯಿ, RSS ಕಾರ್ಯಕರ್ತ ಕೊವಿಡ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...