Homeಕರ್ನಾಟಕಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಆಮ್ಲಜನಕ ಸಿಲಿಂಡರ್‌ಗಳನ್ನು ಸಾಗಿಸುವ ಟ್ರಕ್ ಮುಂಜಾನೆ 2 ಗಂಟೆಯ ಹೊತ್ತಿಗೆ ಚಾಮರಾಜನಗರಕ್ಕೆ ತಲುಪಬೇಕಿತ್ತು. ಆದರೆ ಈ ಟ್ರಕ್ ಮೇ 3 ರಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆ ತಲುಪಿದೆ.

- Advertisement -
- Advertisement -

ಕಳೆದ ವಾರ ಚಾಮರಾಜನಗರದಲ್ಲಿ 24 ಕೋವಿಡ್ ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಮತ್ತು ಆಸ್ಪತ್ರೆ ಮತ್ತು ಜಿಲ್ಲಾಡಳಿತದ ವೈಫಲ್ಯ ಕಾರಣವಾಗಿದೆ ಎಂದು ನ್ಯಾಯಮೂರ್ತಿ ಎ.ಎಸ್ ವೇಣುಗೋಪಾಲ್ ಗೌಡ (ನಿವೃತ್ತ) ನೇತೃತ್ವದ ಸಮಿತಿ ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಮೇ 2 ರಂದು ರಾತ್ರಿ 10.30 ರಿಂದ ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಲಭ್ಯವಿಲ್ಲದ ಕಾರಣ ಮೇ 3 ರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿ ದೃಢಪಡಿಸಿದೆ.

ಮೇ 4 ಮತ್ತು ಮೇ 10ರ ವರೆಗೆ ಆಸ್ಪತ್ರೆಯಲ್ಲಿ 62 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಕನಿಷ್ಠ 36 ಮಂದಿ ಮೇ 2 ರಂದು ಆಮ್ಲಜನಕ ಸಿಗದ ರೋಗಿಗಳಾಗಿದ್ದರು ಎಂದು ಸಮಿತಿ ತಿಳಿಸಿದೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ದುರಂತದ ಸಮಯದಲ್ಲಿ ನಾಯಕತ್ವದ ಗುಣವನ್ನು ಪ್ರದರ್ಶಿಸುವಲ್ಲಿ ಆಸ್ಪತ್ರೆಯ ಅಧಿಕಾರಿಗಳು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ವಿಫಲರಾಗಿದ್ದಾರೆ ಎಂದು ವರದಿ ತಿಳಿಸಿದೆ. “ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಐಎಂಎಸ್) ಡೀನ್ ಮತ್ತು ಮೈಕ್ರೋಬಯಾಲಜಿಸ್ಟ್ ಉಸ್ತುವಾರಿ ಜಿಲ್ಲಾ ಶಸ್ತ್ರಚಿಕಿತ್ಸಕ ರೋಗಿಗಳ ಜೀವಗಳನ್ನು ಉಳಿಸಲು ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಲು ಮಾರ್ಗದರ್ಶನ ಮಾಡುವಲ್ಲಿ ವಿಫಲರಾಗಿದ್ದಾರೆ” ಎಂದು ವರದಿ ತಿಳಿಸಿದೆ.

“ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆ ಮಾಡಲು ಶೋಚನೀಯವಾಗಿ ವಿಫಲರಾಗಿದ್ದಾರೆ. ಇದಕ್ಕೆ ತದ್ವಿರುದ್ಧವಾಗಿ, ಮೈಸೂರಿನ ಜಿಲ್ಲಾಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿಯುಂಟುಮಾಡಿದ್ದಾರೆ ಎಂದು ಯಾವುದೇ ಆಧಾರವಿಲ್ಲದೆ ಆರೋಪಿಸಿದ್ದಾರೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

ಚಾಮರಾಜನಗರ ಸೇರಿದಂತೆ ಇತರ ಯಾವುದೇ ಜಿಲ್ಲೆಗಳ ಆಮ್ಲಜನಕ ಸಿಲಿಂಡರ್‌ಗಳನ್ನು ಮರುಪೂರಣ ಮಾಡುವುದು ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಜವಾಬ್ದಾರಿ. ಮೈಸೂರು ಜಿಲ್ಲಾಧಿಖಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಆಧಾರವಿಲ್ಲ ಎಂದು ಸಮಿತಿ ತಿಳಿಸಿದೆ.

ಆಮ್ಲಜನಕ ಸಿಲಿಂಡರ್‌ಗಳನ್ನು ಸಾಗಿಸುವ ಟ್ರಕ್ ಮುಂಜಾನೆ 2 ಗಂಟೆಯ ಹೊತ್ತಿಗೆ ಚಾಮರಾಜನಗರಕ್ಕೆ ತಲುಪಬೇಕಿತ್ತು. ಆದರೆ ಇನ್ನೂ 30 ಸಿಲಿಂಡರ್‌ಗಳನ್ನು ಲೋಡ್ ಮಾಡಲು ಮರುಪೂರಣ ಏಜೆನ್ಸಿಯಲ್ಲಿ ನಿಲ್ಲಿಸಲಾಗಿತ್ತು. ಈ ಟ್ರಕ್ ಮೇ 3 ರಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆ ತಲುಪಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ನ್ಯಾಯಾಲಯದ ನಿರ್ದೇಶನದ ನಂತರ ಮುಖ್ಯ ಕಾರ್ಯದರ್ಶಿ ಇತ್ತೀಚೆಗೆ ವಶಪಡಿಸಿಕೊಂಡಿದ್ದ ಅಧಿಕೃತ ದಾಖಲೆಗಳನ್ನು ವಿಶ್ಲೇಷಿಸಿದ ನಂತರ ಸಮಿತಿ ತನ್ನ ವರದಿಯನ್ನು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದೆ. ಜೊತೆಗೆ ಮೃತರ ಕುಟುಂಬಗಳಿಗೆ ಪರಿಹಾರವನ್ನು ನೀಡಲು ಶಿಫಾರಸು ಮಾಡಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದರು.


ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...