Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...