Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...