Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...