Homeಕರೋನಾ ತಲ್ಲಣಪತಂಜಲಿ ಬಾಬಾನ ಕೋವಿಡ್ ಕೇಂದ್ರದಲ್ಲಿ ಸೌಲಭ್ಯಗಳೇ ಇಲ್ಲ!: ಪ್ರತ್ಯಕ್ಷ ವರದಿ ತೆರೆದಿಟ್ಟ ನ್ಯೂಸ್‌ ಲಾಂಡ್ರಿ

ಪತಂಜಲಿ ಬಾಬಾನ ಕೋವಿಡ್ ಕೇಂದ್ರದಲ್ಲಿ ಸೌಲಭ್ಯಗಳೇ ಇಲ್ಲ!: ಪ್ರತ್ಯಕ್ಷ ವರದಿ ತೆರೆದಿಟ್ಟ ನ್ಯೂಸ್‌ ಲಾಂಡ್ರಿ

- Advertisement -
- Advertisement -

ಪತಂಜಲಿ ಮತ್ತು ಉತ್ತರಾಖಂಡ ಸರ್ಕಾರದ ಸಹಯೋಗದೊಂದಿಗೆ ಆರಂಭಗೊಂಡ ಕೋವಿಡ್ ಆರೈಕೆ ಕೇಂದ್ರವು ಸಾಕಷ್ಟು ಸಿಬ್ಬಂದಿಗಳನ್ನು ಹೊಂದಿಲ್ಲ ಮತ್ತು ಅದರ ಐಸಿಯು ವಾರ್ಡ್ ಮತ್ತು ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದಿ ನ್ಯೂಸ್ ಲಾಂಡ್ರಿ ಗ್ರೌಂಡ್ ರಿಪೋರ್ಟ್ ಮಾಡಿದೆ.

‘ಇಲ್ಲಿರುವ ಎಲ್ಲಾ 150 ಹಾಸಿಗೆಗಳಲ್ಲಿ ಆಮ್ಲಜನಕದ ವ್ಯವಸ್ಥೆ ಇದೆ’ ಎಂದು ಸ್ವಯಂ-ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮೇ 4 ರಂದು ಎಬಿಪಿ ನ್ಯೂಸ್ ಆಂಕರ್ ರುಬಿಕಾ ಲಿಯಾಕತ್‌ಗೆ ತಿಳಿಸಿದರು. ಅವರು ತಮ್ಮ ಕಂಪನಿಯಾದ ಪತಂಜಲಿ ನಡೆಸುತ್ತಿರುವ ಕೋವಿಡ್ ಆರೈಕೆ ಕೇಂದ್ರದ ಬಗ್ಗೆ ಹರಿದ್ವಾರದಲ್ಲಿ ಪ್ರಚಾರ ಮಾಡುತ್ತಿದ್ದರು. ಉತ್ತರಾಖಂಡ ಸರ್ಕಾರದ ಸಹಯೋಗದಲ್ಲಿ ಈ ಆರೈಕೆ ಕೇಂದ್ರ ಸ್ಥಾಪಿಲಾಗಿದ್ದು, ಇದರ ಕುರಿತು ಒಣ ಮಾತುಗಳು, ಸುಳ್ಳು ಹೇಳಿಕೆಗಳು ಮುನ್ನಲೆಗೆ ಬಂದಿದ್ದು ಈ ಕೇಂದ್ರದಲ್ಲಿ ಕನಿಷ್ಠ ಸೌಲಭ್ಯ ಮತ್ತು ಅಗತ್ಯ ಸಿಬ್ಬಂದಿಯೇ ಇಲ್ಲ ಎಂಬುದನ್ನು ನೈಸ್ ಲಾಂಡ್ರಿ ಸಾಬೀತು ಮಾಡಿದೆ.

“ಯಾರಿಗಾದರೂ ತೀವ್ರ ತೊಂದರೆ ಇದ್ದರೆ ನಮ್ಮ ನೆರವು ಪಡೆಯಿರಿ. ನಮ್ಮಲ್ಲಿ ಐಸಿಯುಗಳಿವೆ. ಸೋಂಕು ತೀವ್ರವಾಗಿದ್ದರೆ, ನಮ್ಮಲ್ಲಿ ವೆಂಟಿಲೇಟರ್‌ಗಳೂ ಇವೆ’ ಎಂದು ಬಾಬಾ ರಾಮದೇವ್ ಮತ್ತು ಈ ಕೇಂದ್ರದ ಸಿಬ್ಬಂದಿ ಹೇಳುತ್ತ ಬಂದಿದ್ದಾರೆ.

ಏನೂ ಇಲ್ಲ ಎಂದ ಪ್ರತ್ಯಕ್ಷ ವರದಿ

ನ್ಯೂಸ್ ಲಾಂಡ್ರಿ ತಂಡ ಹರಿದ್ವಾರ ಕೇಂದ್ರಕ್ಕೆ ಭೇಟಿ ನೀಡಿ ಈ ವರದಿಯನ್ನು ಸಿದ್ಧ ಮಾಡಿದೆ. ಹಿಂದೆ ಕುಂಭಮೇಳ ಯಾತ್ರಾರ್ಥಿಗಳ ಆಸ್ಪತ್ರೆ ಎನ್ನಲಾಗಿದ್ದ ಈ ಅಸ್ಪತ್ರೆಯಲ್ಲಿ ರಾಮದೇವ್ ಹೇಳಿದ ವಿಷಯಗಳು ಸಂಪೂರ್ಣ ಅಸತ್ಯ ಅಥವಾ ಅರೆಸತ್ಯ ಎಂಬುದು ಸಾಬೀತಾಗಿದೆ. ತಪ್ಪುದಾರಿಗೆಳೆಯುವ ಅಥವಾ ಸಂಪೂರ್ಣ ಸುಳ್ಳು ಎಂದು ನ್ಯೂಸ್‌ ಲಾಂಡ್ರಿ ತಂಡ ಕಂಡುಕೊಂಡಿದೆ.. ಮೇ 10 ರ ಹೊತ್ತಿಗೆ 150 ಹಾಸಿಗೆಗಳಲ್ಲಿ 50 ಮಾತ್ರ ಕಾರ್ಯನಿರ್ವಹಿಸುತ್ತಿವೆ ಮತ್ತು ಐಸಿಯು ಹಾಸಿಗೆ ಇಲ್ಲವೇ ಇಲ್ಲ. ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ವೈದ್ಯರು, ವಾರ್ಡ್ ಹುಡುಗರು ಮತ್ತು ಹೌಸ್‌ಕೀಪಿಂಗ್ ಸಿಬ್ಬಂದಿಗಳ ಕೊರತೆಯಿದೆ. ಸೌಲಭ್ಯದ ಸಾಮರ್ಥ್ಯದ ಕೊರತೆ ಎದ್ದು ಕಾಣುತ್ತಿದೆ. ಆ ಕಾರಣಕ್ಕಾಗಿಯೇ ಈ ಕೇಂದ್ರ ಗಂಭಿರ ರೋಗಿಗಳನ್ನು ಬೇರೆಡೆ ಹೋಗಲು ರೆಫರ್ ಮಾಡುತ್ತಿದೆ! ಕೆಲವೊಮ್ಮೆ ಒತ್ತಾಯದಿಂದ ಕಳಿಸುತ್ತಿದೆ!

ಮೊಟ್ಟಮೊದಲಿಗೆ ಇಲ್ಲಿ ಸರಿಯಾದ ನೀರಿನ ವ್ಯವಸ್ಥೇಯೇ ಇಲ್ಲ! ಕೋವಿಡ್ ವಾರ್ಡ್ಗಳಿಗೆ ಛಾವಣಿಗಳಿಲ್ಲ, ಇದು ವ್ಯಾಪಕ ಪ್ರಸರಣಕ್ಕೆ ಅವಕಾಶ ಮಾಡಿ ಕೊಡುತ್ತಿದೆ.
ಆದರೂ, ಹಲವಾರು ರಾಷ್ಟ್ರೀಯ ಚಾನೆಲ್‌ಗಳು, ಇದೊಂದು ಅದ್ಭುತ ಕೋವಿಡ್ ಆರೈಕೆ ಕೇಂದ್ರವೆಂದು ಸುದ್ದಿ ಮಾಡಿ, ರಾಮದೇವ್ ಸಂದರ್ಶನ ಮಾಡಿ ಲಕ್ಷಾಂತರ ವೀಕ್ಷಕರನ್ನು ದಾರಿ ತಪ್ಪಿಸಿದವು. ಈ ಸಂದರ್ಭದಲ್ಲಿ ಏಕಕಾಲದಲ್ಲಿ ಪತಂಜಲಿಯಿಂದ ಹಲವಾರು ಟ್ಯಾಬ್ಲೆಟ್‌ಗಳು, ಕ್ಯಾಪ್ಸುಲ್‌ಗಳು ಮತ್ತು ಪುಡಿಗಳ ಜಾಹೀರಾತು ಪ್ರಕಟಿಸಿದವು! ಗಿಡಮೂಲಿಕೆ ಉತ್ಪನ್ನಗಳಲ್ಲಿ ವ್ಯವಹರಿಸುವ ಈ ಪತಂಜಲಿ ಎಂಬ ಸಂಶಯಾತ್ಮ ಕಂಪನಿ ಇತ್ತೀಚೆಗೆ ಟಿವಿ ಸುದ್ದಿ ವಾಹಿನಿಗಳಲ್ಲಿ ದೊಡ್ಡ ಜಾಹೀರಾತುದಾರರಲ್ಲಿ ಒಂದಾಗಿದೆ!

ಮೇ 3 ರಂದು ಕೋವಿಡ್ ಕೇಂದ್ರವನ್ನು ಉದ್ಘಾಟಿಸಲಾಗಿದ್ದು, ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಹಾಜರಿದ್ದರು. ಟಿವಿ ಸಂದರ್ಶನಗಳಲ್ಲಿ, ರಾಮದೇವ್ ಅವರು, ಈ ಕೇಂದ್ರವು ಕೋವಿಡ್‌ಗೆ ಸಮಗ್ರ ಚಿಕಿತ್ಸೆಯನ್ನು ಒದಗಿಸುತ್ತದೆ. ಅಲೋಪತಿ, ಆಯುರ್ವೇದ ಮತ್ತು ಯೋಗದ ಮಿಶ್ರಣದ ಚಿಕಿತ್ಸೆ ಇಲ್ಲಿ ಲಭ್ಯ ಎಂದಿದ್ದರು.

ಆದರೆ, ರಾಮದೇವ್ ಬಾಬಾ ಹೇಳಿದಂತೆ ಅಲ್ಲಿ ಅಲೋಪತಿ ಮತ್ತು ಆಯುರ್ವೇದ ಎರಡನ್ನೂ ಒಳಗೊಂಡ ವೈಜ್ಞಾನಿಕ ಚಿಕಿತ್ಸೆ ನಡೆಯುತ್ತಲೇ ಇಲ್ಲ. ರೋಗಿಗಳಿಗೆ ಪತಂಜಲಿಯ ಕೊರೊನಿಲ್ ನಂತಹ ಪರೀಕ್ಷಿಸದ ಔಷಧಿಗಳನ್ನು ನೀಡಲಾಗುತ್ತಿದೆ!

ಮರಣಶಯ್ಯೆಯಲ್ಲಿ ಐಸಿಯು!

ಕೋವಿಡ್ ಕೇಂದ್ರವು ಗಂಗಾ ನದಿಯ ಪ್ರಸಿದ್ಧ ಘಾಟ್ ಆಗಿರುವ ಹರಿದ್ವಾರದ ಹರ್ ಕಿ ಪೌರಿಗಿಂತ ಕೆಲವು ಕಿಲೋಮೀಟರ್ ಮುಂದಿದೆ. ಕೇಂದ್ರದ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಎಸ್.ಕೆ. ಸೋನಿ, 150 ಹಾಸಿಗೆಗಳಲ್ಲಿ 50 ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಎಲ್ಲವಕ್ಕೂ ಆಮ್ಲಜನಕ ಪೂರೈಕೆಯಾಗಿದೆ ಮತ್ತು ಸಿಬ್ಬಂದಿ ಕೊರತೆಯಿಂದಾಗಿ ಲಭ್ಯವಿರುವ 10 ವೆಂಟಿಲೇಟರ್‌ಗಳಲ್ಲಿ ಯಾವುದನ್ನೂ ಆನ್ ಮಾಡಲು ಆಗಿಲ್ಲ ಎಂದು ಹೇಳಿದ್ದಾರೆ.

“ನಮಗೆ ಅಪಾರ ಮಾನವಶಕ್ತಿ ಬೇಕು. ನಾವು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದೇವೆ, ವಿಶೇಷವಾಗಿ ಅಲೋಪತಿಯಲ್ಲಿ ತರಬೇತಿ ಪಡೆದವರು ಬೇಕಾಗಿದ್ದಾರೆ” ಎಂದು ಅವರು ವಿವರಿಸಿದರು. “ಆಯುರ್ವೇದ ಕಾಲೇಜುಗಳಿಂದ ವೈದ್ಯರು ತರಬೇತಿ ಪಡೆಯುತ್ತಿದ್ದಾರೆ, ಆದರೆ ಅವರ ಚಿಕಿತ್ಸೆ, ಸಲಹೆಗಳನ್ನು ಅಲೋಪತಿ ಆರೈಕೆಗಾಗಿ ಬಳಸಲಾಗುವುದಿಲ್ಲ’ ಎಂದು ತಿಳಿಸಿದರು.

ರಾಮದೇವ್ ಅವರ ಹೇಳಿಕೆ-ಸಮರ್ಥನೆಗಳು ಸುಳ್ಳು ಸಂಗತಿ ಹೇಳುತ್ತಿವೆ. ಈ ಕೋವಿಡ್ ಕೇಂದ್ರದ ಐಸಿಯು ಹಾಸಿಗೆಗಳು ಕಾರ್ಯನಿರ್ವಹಿಸುತ್ತಿಲ್ಲ. ಮೇ 7 ರಂದು ಅಲ್ಲಿನ ವೈದ್ಯಕೀಯ ಮೇಲ್ವಿಚಾರಣಾ ಅಧಿಕಾರಿ ಡಾ. ಎ.ಕೆ. ಸೋನಿ ಆಡಳಿತಕ್ಕೆ ಬರೆದ ಪತ್ರದಲ್ಲಿ ಇದು ಸ್ಪಷ್ಟವಾಗಿದೆ. ಐಸಿಯು ವಾರ್ಡ್‌ಗೆ ನಿಯೋಜಿಸಲಾಗಿರುವ ಇಬ್ಬರು ಅರಿವಳಿಕೆ ತಜ್ಞರು ಗೈರು ಹಾಜರಾಗಿದ್ದಾರೆ ಎಂದು ಅವರು ದೂರಿದರು. “ಐಸಿಯು ತಂತ್ರಜ್ಞ ಕೂಡ ಲಭ್ಯವಿಲ್ಲ” ಎಂದು ಅವರು ನ್ಯೂಸ್ ಲಾಂಡ್ರಿಗೆ ಹೇಳಿದರು. “ಆದ್ದರಿಂದ, ಐಸಿಯು ವಾರ್ಡ್‌ನ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಇದಕ್ಕಾಗಿಯೇ ಸೂಕ್ತ ತಜ್ಞರು ಮತ್ತು ಸಿಬ್ಬಂದಿ ಲಭ್ಯವಾಗುವವರೆಗೆ ನಾವು ಐಸಿಯುನಲ್ಲಿ ರೋಗಿಗಳನ್ನು ನೇಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ; ಎಂದು ಅವರು ತಿಳಿಸಿದ್ದಾರೆ.

ಪತಂಜಲಿ

ಸರ್ಕಾರಕ್ಕೆ ಬರೆದ ಪತ್ರದಲ್ಲಿ, ಡಾ, ಸೋನಿ ಇತರ ನಾಲ್ಕು ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಯಾವುದೇ ಸಿಬ್ಬಂದಿ ಇಲ್ಲ, ಹೀಗಾಗಿ ಅವು ಅನಾರೋಗ್ಯಕಾರಿಯಾಗಿವೆ. ನೀರು ಸರಬರಾಜು ಕೆಟ್ಟದಾಗಿದೆ. ಹೀಗಾಗಿ ಇಡೀ ಕೇಂದ್ರವೇ ಕೊಳಕಾಗಿದೆ. ಕೋವಿಡ್ ವಾರ್ಡ್‌ಗಳಿಗೆ ಛಾವಣಿಗಳಿಲ್ಲ, ಇದು ವೈರಸ್ ಹರಡುವ ಅಪಾಯವನ್ನು ಹೆಚ್ಚಿಸುತ್ತದೆ. ಎಕ್ಸರೆ ಯಂತ್ರವಿದೆ, ಅದನ್ನು ನಿರ್ವಹಿಸಲು ಯಾವುದೇ ತಂತ್ರಜ್ಞ ಮತ್ತು ರೋಗಶಾಸ್ತ್ರಜ್ಞರು ಇಲ್ಲಿಲ್ಲ’ ಎಂದು ಅವರು ಸತ್ಯ ಹೇಳಿದ್ದಾರೆ ಮತ್ತು ಅದನ್ನು ನ್ಯೂಸ್ ಲಾಂಡ್ರಿ ತಂಡ ಕೂಡ ಕಣ್ಣಾರೆ ಕಂಡಿದೆ.

‘ನನ್ನ ತಾಯಿಗೆ ಪ್ರವೇಶ ನಿರಾಕರಿಸಲಾಯಿತು’

ಹೃಷಿಕೇಶದ ನಿವಾಸಿ ನರೇಂದ್ರ ಪಾಯಲ್ ಅವರು ಮೇ 7 ರಂದು ತಮ್ಮ ತಾಯಿ ಸರಿತಾ (48) ಅವರೊಂದಿಗೆ ಈ ಕೇಂದ್ರಕ್ಕೆ ಆಗಮಿಸಿದರು. ಮೇ 4 ರಂದು ಅವರಿಗೆ ಪಾಸಿಟಿವ್ ದೃಢಪಟ್ಟಿತ್ತು. ಅವರ ಆಮ್ಲಜನಕದ ಮಟ್ಟವು ಶೇ. 35 ಕ್ಕೆ ಇಳಿದಿತ್ತು.

“ಪತಂಜಲಿ ಅವರು ಹರಿದ್ವಾರದಲ್ಲಿ ಕೋವಿಡ್ ಆಸ್ಪತ್ರೆಯನ್ನು ತೆರೆದಿದ್ದಾರೆ ಎಂದು ಸ್ನೇಹಿತರು ಮತ್ತು ಸಂಬಂಧಿಕರು ನಮಗೆ ತಿಳಿಸಿದರು” ಎಂದು ಅವರು ಹೇಳಿದರು. “ಪ್ರಚಾರವೂ ಇತ್ತು. ಆದರೆ ನಾವು ಬಂದಾಗ ನನ್ನ ತಾಯಿಗೆ ಐಸಿಯು ಹಾಸಿಗೆ ಮತ್ತು ವೆಂಟಿಲೇಟರ್ ಇಲ್ಲದ ಕಾರಣ ಪ್ರವೇಶವನ್ನು ನಿರಾಕರಿಸಲಾಯಿತು; ಎಂದು ಅವರು ದೂರಿದ್ದಾರೆ. ನಂತರ ಸರಿತಾರನ್ನು ಡೆಹ್ರಾಡೂನ್‌ನ ಡೂನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತುರೀಗ ಅವರ ಸ್ಥಿತಿ ಗಂಭೀರವಾಗಿದೆ.

“ನಿಮ್ಮಲ್ಲಿ ಹಾಸಿಗೆಗಳು ಮತ್ತು ಆಮ್ಲಜನಕ ಇಲ್ಲದಿದ್ದರೆ, ನಮಗೆ ಹಾಗೆ ಹೇಳಿ. ಸುಳ್ಳು ಪ್ರಚಾರ ಬೇಡ. ಸತ್ಯ ನಮಗೆ ತಿಳಿದಿದ್ದರೆ ನಾವು ಇಲ್ಲಿಗೆ ಬರುತ್ತಿರಲಿಲ್ಲ” ಎಂದು ನರೇಂದ್ರ ಈ ಕೇಂದ್ರದ ಅಧಿಕಾರಿಗಳ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೋವಿಡ್ ರೋಗಿಗಳು ಚಿಕಿತ್ಸೆ ಒಂದು ಅಥವಾ ಎರಡು ನಿಮಿಷಗಳ ವಿಳಂಬವಾದ ಕಾರಣಕ್ಕೇ ಸಾಯುತ್ತಿದ್ದಾರೆ. ಬಾಬಾ ಕೇಂದ್ರ ಇದನ್ನು ಅರ್ಥಮಾಡಿಕೊಳ್ಳಬೇಕು’ ಎಂದಿದ್ದಾರೆ.

ಕೊರೊನಿಲ್ ಎಂಬ ಕಂಟಕ!

ಪತಂಜಲಿ ಕೇಂದ್ರದ ರೋಗಿಗಳಿಗೆ ಅವರ ಚಿಕಿತ್ಸೆಯ ಭಾಗವಾಗಿ ಕೊರೊನಿಲ್ ನೀಡಲಾಗುತ್ತದೆ ಎಂದು ಡಾ.ಸೋನಿ ನ್ಯೂಸ್‌ಲಾಂಡ್ರಿಗೆ ತಿಳಿಸಿದರು. ಆದರೆ ವಿಶ್ವ ಆರೋಗ್ಯ ಸಂಸ್ಥೆ ಅಥವಾ ಭಾರತೀಯ ಔಷಧ ಗುಣಮಟ್ಟ ಪ್ರಾಧಿಕಾರ ಇದಕ್ಕೆ ಮನ್ನಣೆ ನೀಡಿಯೇ ಇಲ್ಲ!
ಕೋವಿಡ್‌ಗೆ ಪರಿಹಾರವಾಗಿ ಒಮ್ಮೆ ಪತಂಜಲಿ ಗಿಡಮೂಲಿಕೆ ಉತ್ಪನ್ನವಾದ ಕೊರೊನಿಲ್ ಅನ್ನು ತಪ್ಪಾಗಿ ಮಾರಾಟ ಮಾಡಲಾಗಿದೆ. ಇದು ರೋಗದ ಚಿಕಿತ್ಸೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಕ್ಲಿನಿಕಲ್ ಮಾರ್ಗಸೂಚಿಗಳ ಭಾಗವಾಗಿಯೇ ಇಲ್ಲ.
ಆಯುಷ್ ಸಚಿವಾಲಯವು ಉತ್ಪನ್ನವನ್ನು ಕೋವಿಡ್‌ಗೆ “ಬೆಂಬಲ ಚಿಕಿತ್ಸೆ” ಎಂದು ಪ್ರಮಾಣೀಕರಿಸಿದ್ದರೂ, ಮದ್ರಾಸ್ ಹೈಕೋರ್ಟ್ “ಲಾಭವನ್ನು ಬೆನ್ನಟ್ಟಿದ” ಕಾರಣಕ್ಕಾಗಿ ಪತಂಜಲಿಗೆ 10 ಲಕ್ಷ ರೂ. ದಂಡ ವಿಧಿಸಿತ್ತು.

* ಮಲ್ಲನಗೌಡರ್ ಪಿ.ಕೆ
(ತನಿಖಾ ಮಾಹಿತಿ: ನ್ಯೂಸ್ ಲಾಂಡ್ರಿ)


ಇದನ್ನೂ ಓದಿ; ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...