Homeಕರ್ನಾಟಕಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಟ್ವಿಟರ್‌ ಖಾತೆಯಲ್ಲಿ ಸಾಲದ ವಿಚಾರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹಲವು ಟ್ವಿಟ್‌ಗಳನ್ನು ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೊರೊನಾ ಹಿನ್ನೆಲೆ ಲಾಕ್‌ಡೌನ್ ವಿಧಿಸಲಾಗಿದ್ದು, ಈ ಸಮಯದಲ್ಲಿ ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜು ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

2008-2013 ರ ವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ  ಶೇ. 94.18 ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಶೇ.78 ರಷ್ಟು ಮಾತ್ರ ಏರಿಕೆಯಾಗಿತ್ತು.  ಹಿಂದಿನಿಂದಲೂ ಪ್ರತಿ ವರ್ಷ 20 ರಿಂದ 30 ಸಾವಿರ ಕೋಟಿ ರೂ ಗಳಷ್ಟು ಸಾಲ ಮಾಡುವುದು  ಮತ್ತು ತೀರಿಸುವುದು ವಾಡಿಕೆ. 2012-13 ರಲ್ಲೂ 21609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 242420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 457899 ಕೋಟಿ ಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21 ರಲ್ಲಿ  69000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 214479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯ ಮಂತ್ರಿಯಾದ ಮೇಲೆ  ಕೇವಲ ಮೂರು ವರ್ಷಗಳಲ್ಲಿ ಸುಮಾರು 190000 ಕೋಟಿ ರೂಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72000 ಕೋಟಿಗೆ ತಲುಪಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೋನ ನಿರ್ವಹಣೆಗೆ ಖರ್ಚು ಮಾಡಿದ್ದು 5400 ಕೋಟಿ ರೂಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು..?” ಎಂದು ಸುದೀರ್ಘ ಪತ್ರದಲ್ಲಿ ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ  ಹೆಚ್ಚಾದ ಜಿಎಸ್‍ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು…? ಏನು ತಿನ್ನಬೇಕು..? ಎಂದು ಪ್ರಶ್ನಿಸಿದ್ದಾರೆ.

“ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು.  ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ. ಆದರಿಂದ ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಸಿದ್ದರಾಮಯ್ಯ  ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...