Homeಕರೋನಾ ತಲ್ಲಣಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

ಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

- Advertisement -
- Advertisement -

ಲಸಿಕೆ ಕೊರತೆಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಂಡುಹಿಡಿಯಲು ಕಡಿಮೆ ಮತ್ತು ಮಧ್ಯಮ-ಆದಾಯದ ಅನೇಕ ದೇಶಗಳು ಪ್ರಯತ್ನಿಸುತ್ತಿವೆ. ಕೆಲವು ಕಡೆಗಳಲ್ಲಿ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಎರಡು ವಿಭಿನ್ನ ಶಾಟ್‌ಗಳನ್ನು ಮಿಶ್ರಣ ಮಾಡುವಂತಹ ತಂತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತದ ಮಟ್ಟಿಗೆ ಇದನ್ನು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಂದು ಪರಿಗಣಿಸಬಹುದು.

ಈಗಾಗಲೇ ದೇಶದ ಬಹು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳ ಅಭಾವ ಇದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೊದಲ ಡೋಸ್ ಒಂದು ಕಂಪನಿ ಲಸಿಕೆ ಪಡೆದವರು ಎರಡನೇ ಡೋಸ್‌ನಲ್ಲಿ ಇನ್ನೊಂದು ಕಂಪನಿ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುವ ಸಾಧ್ಯತೆಗಳಿವೆ. ಆದರೆ ಈ ಪರಿಣಾಮಗಳು ಮಾರಣಾಂತಿಕವೇನೂ ಅಲ್ಲ ಎಂದು ಆಕ್ಸ್‌ಫರ್ಡ್ ವಿವಿಯ ಸಂಶೋಧಕರು ಲ್ಯಾನ್ಸೆಟ್‌ನಲ್ಲಿ ವರದಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಇದರಲ್ಲಿ ಭಾರತದಲ್ಲಿ ವ್ಯಾಪಕವಾಗಿ ಬಳಕೆ ಆಗುವ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಗ್ಗೆ ನಿರ್ದಿಷ್ವಾಗಿ ಏನನ್ನೂ ಹೇಳಿಲ್ಲ.

ಎರಡು ಪ್ರಮುಖ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಬೆರೆಸುವುದು (ಅಂದರೆ ಎರಡು ಭಿನ್ನ ಕಂಪನಿಗಳ ಡೋಸ್‌ಗಳು) ರೋಗಿಗಳಲ್ಲಿ ಆಯಾಸ ಮತ್ತು ತಲೆನೋವಿನಂತಹ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬ ಅಂಶವನ್ನು ಆ ಆರಂಭಿಕ ಅಧ್ಯಯನಗಳಲ್ಲಿ ಕಂಡುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ವಿವರವಾದ ಅಧ್ಯಯನ ಇನ್ನೂ ನಡೆಯಲಿದೆ ಎನ್ನಲಾಗಿದೆ.

ಅಸ್ಟ್ರಾಜೆನೆಕಾ ಶಾಟ್‌ನ ಮೊದಲ ಡೋಸ್ ಪಡೆದ ಜನರು ಎರಡನೇ ಸಂದರ್ಭದಲ್ಲಿ ಫಿಜರ್ ಕಂಪನಿಯ ಲಸಿಕೆ ಪಡೆದಾಗ ಅಲ್ಪಾವಧಿಯ ಅಡ್ಡಪರಿಣಾಮಗಳು ಕಂಡು ಬಂದಿವೆ ಎನ್ನಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿವೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ದಿ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್‌ನಲ್ಲಿ ವರದಿ ಮಾಡಿದ್ದಾರೆ.

ಇಲ್ಲಿನ ವೈದ್ಯರ ಪ್ರಕಾರ, ಒಂದು ಆಸ್ಪತ್ರೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಆಗುತ್ತದೆ. ಹೀಗಾಗಿ ಅದೇ ಆಸ್ಪತ್ರೆಯಲ್ಲಿ ಎರಡನೇ ಲಸಿಕೆ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಎರಡೂ ಕಂಪನಿಗಳ ಲಸಿಕೆಗಳು ಪೂರೈಕೆಯಾಗುತ್ತಿದ್ದು, ಎರಡನೇ ಡೋಸ್ ಪಡೆಯುವಾಗ ಬೇರೆ ಆಸ್ಪತ್ರೆಗೆ ಹೋದಾಗ, ಮೊದಲನೆ ಲಸಿಕೆ ಡೋಸ್ ತೆಗೆದುಕೊಂಡ ರಶೀದಿ ತೋರಿಸುವುದು ಒಳ್ಳೆಯದು ಎಂದು ಸರ್ಕಾರಿ ವೈದ್ಯ ಡಾ. ಸಂತೋಷ್ ತಿಳಿಸಿದರು.

ಭಾರತದಲ್ಲಿ ಲಸಿಕಾ ನೀತಿಯೇ ಅಸ್ಪಷ್ಟವಾಗಿದೆ. ಈ ಬಗ್ಗೆ ಸರ್ಕಾರಗಳು ಜನರಿಗೆ ಹೆಚ್ಚಿನ ಮಾಹಿತಿ ಒದಗಿಸಬೇಕಾಗಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...