Homeಮುಖಪುಟಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

ಎಸ್.ಎಲ್ ಭೈರಪ್ಪನವರು ಬ್ರಾಹ್ಮಣರಿಗೆ ಅಧಿಕಾರ ಬೇಕು ಎಂದು ನೇರವಾಗಿ ಹೇಳುವ ಧೈರ್ಯ ಇಲ್ಲದೇ ಇವೆಲ್ಲಾ ಹೇಳುತ್ತಿದ್ದಾರೆ

- Advertisement -
- Advertisement -

| ಡಾ.ಅನುಸೂಯ ಕಾಂಬಳೆ |

ಸಂವಿಧಾನದಲ್ಲಿ ಧರ್ಮಶಾಸ್ತ್ರವಿಲ್ಲ, ಇನ್ನು ಮುಂದೆ ಹೆಂಡತಿಯಿಂದ ಸಹಿ ಪಡೆದುಕೊಂಡು ಮುಟ್ಟಬೇಕಾಗುತ್ತದೆ ಎಂಬ ಎಸ್.ಎಲ್.ಭೈರಪ್ಪನವರ ಮಾತುಗಳಿಗೆ ಹಲವು ಬರಹಗಾರ್ತಿಯರು ಪ್ರತಿಕ್ರಿಯಿಸಿದ್ದನ್ನು ಹಿಂದೆಯೇ ಪ್ರಕಟಿಸಿದ್ದೆವು. ಅದರ ಮುಂದುವರಿಕೆಯಾಗಿ ಪ್ರಾಧ್ಯಾಪಕಿ, ಕವಯತ್ರಿ ಮತ್ತು ಚಿಂತಕರಾದ ಡಾ.ಅನಸೂಯ ಕಾಂಬಳೆಯವರ ಬರಹ ಇಲ್ಲಿದೆ.

ಪರಂಪರೆಯ ಪ್ರಜ್ಞೆ ಮತ್ತು ರಾಷ್ಟ್ರೀಯತೆ ಎರಡು ಭಿನ್ನವಾದವು. ಭೈರಪ್ಪನವರ ಮಾತಿಗೆ ಪ್ರತಿಕ್ರಿಯಿಸುವುದು ಅಂತ ವಿಶೇಷ ಅನಿಸುವುದಿಲ್ಲ. ಧರ್ಮಶಾಸ್ತ್ರವೇ ರಾಷ್ಟ್ರೀಯ ಗ್ರಂಥವಾಗಬೇಕೆಂದು ಏಕೆ ಹೇಳುತ್ತಿದ್ದಾರೆ ಎನ್ನುವುದು ಸಾಮಾನ್ಯರಿಗೂ ತಿಳಿಯುವ ಸಂಗತಿ. ಅವರು ಹೇಳುವ ಧರ್ಮ ರಾಷ್ಟ್ರವನ್ನು ಪ್ರತಿನಿಧಿಸುವ ಧರ್ಮವಲ್ಲ. ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಅನ್ವಯಿಸುವುದು ಮತ್ತು ಅಧಿಕಾರವನ್ನು ಅವರಿಗೆ ನಿಗದಿಗೊಳಿಸುವರಿಂದ ಹೇಳುತ್ತಿರುವ ರಾಜಕಾರಣದ ಭಾಗವೇ ಆಗಿದೆ ಹೊರತು ಪರಂಪರೆಯ ಪ್ರಶ್ನೆ ಅಲ್ಲ. ಬ್ರಾಹ್ಮಣರಿಗೆ ಅಧಿಕಾರ ಇರಬೇಕು, ಭಾರತದ ಬಹುಸಂಖ್ಯಾತರು ಸೇವಕರು ಆಗಿರಬೇಕು ಎಂದು ಹೇಳಲು ಧೈರ್ಯವಿಲ್ಲದೆ ಪರಂಪರೆ ಹೆಸರಿನ ಸಂಕೇತದ ಮೂಲಕ ಸೂಚಿಸುತ್ತಿದ್ದಾರೆ.
ಭೈರಪ್ಪನವರು ಹೇಳುವ ಧರ್ಮ ಭಾರತೀಯರ ಭಾವೈಕ್ಯತೆಯನ್ನು ಹೊಂದಿಲ್ಲ. ವರ್ಣ, ಜಾತಿ, ಲಿಂಗ ನೆಲೆಯಲ್ಲಿ ಅಧಿಕಾರದ ವಿಭಜನೆ ಮಾಡುತ್ತಾ ಮನುಷ್ಯ ಮನುಷ್ಯರ ನಡುವೆ ಬೇಧ ಸಂಸ್ಕೃತಿಯನ್ನು ಬಿತ್ತುತ್ತದೆ. ಮೇಲು – ಕೀಳು ಎನ್ನುವ ಶ್ರೇಣೀಕರಣದ ಮೂಲಕ ಒಡೆದು ಆಳುವ ನೀತಿಯನ್ನು ಅನುಸರಿಸುತ್ತವೆ. ಇದೇ ಪರಂಪರೆ ಅನ್ನುವುದಾದರೆ ಬೈರಪ್ಪನವರು ಹೇಳುತ್ತಿರುವುದು ಏನನ್ನು? ನಮ್ಮ ಸಂವಿಧಾನ ವಿಶ್ವ ಮಾನವ ತತ್ವಗಳನ್ನು ಹೊಂದಿದೆ. ಅದರ ಪ್ರಸ್ತಾವನೆಯಲ್ಲಿ “ನಾವು” ಅನ್ನುವ ಪದವೇ ಭಾರತೀಯರ ಭವ್ಯ ಪರಂಪರೆ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೇಳುತ್ತಿಲ್ಲವೆ? ನಮ್ಮ ಸಂವಿಧಾನದ ಆತ್ಮವಾದ ಸಮಾನತೆ, ಸ್ವಾತಂತ್ರ, ಭ್ರಾತೃತ್ವ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಮಾನವನಲ್ಲಿ ಇರಬೇಕಾದ ಮೂಲಭೂತ ಗುಣಗಳನ್ನು ಬೇರೆ ಬೇರೆ ದೇಶಗಳಿಂದ ಎರವಲು ತಂದವುಗಳೆಂದು ಹೇಳಲಾದೀತೆ? ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಮಾನವತಾವಾದವು ಭೈರಪ್ಪನವರು ಹೇಳುವ ಸಾಂಸ್ಥಿಕ ಧರ್ಮದಲ್ಲಿ ಇದೆಯೇ? ಮನುಷ್ಯನ ಸ್ವಾವಲಂಬನೆ, ಸ್ವಾಯತ್ತತೆಯನ್ನು ನಾಶಮಾಡುವ ಆತನ ಸಹಜ ಶಕ್ತಿಯನ್ನು ನಾಶ ಮಾಡಿ ನಿಷ್ಕ್ರಿಯಗೊಳಿಸುವ, ಜನರನ್ನು ಸದಾ ಭಯ ಮತ್ತು ಆತಂಕದಲ್ಲಿ ಇಡುವ ಮೌಢ್ಯವನ್ನು ಬಿತ್ತುತ್ತ ಅಧಿಕಾರ ಮತ್ತು ಆದಾಯದ ಮೂಲಗಳಿಂದ ವಂಚಿಸುವ ಭಾರತದ ಬಹುಜನ ಸಮುದಾಯವನ್ನು ಸೇವಕರನ್ನಾಗಿಸುವ ಧರ್ಮಶಾಸ್ತ್ರ ರಾಷ್ಟ್ರೀಯ ಗ್ರಂಥವಾದರೆ ಭಾರತೀಯತೆಯ, ಪ್ರಜಾಪ್ರಭುತ್ವದ ನಾಶವೇ ಆಗುತ್ತದೆ. ಬೈರಪ್ಪನವರ ಧರ್ಮಶಾಸ್ತ್ರ ಗ್ರಂಥವು ದೈವ ಕೇಂದ್ರಿತವಾದುದೇ ಹೊರತು ಮಾನವ ಕೇಂದ್ರಿತ ಅಲ್ಲ. ನಮ್ಮ ಸಂವಿಧಾನವು ಮನುಷ್ಯನ ಮೂಲಕ ನೋಡುವ ಮಾನವತಾವಾದವನ್ನು ಕಟ್ಟಿಕೊಡುವ ಮೂಲಕ ಮನುಷ್ಯನಿಗೆ ಅಪಾರ ಗೌರವ- ಘನತೆಯನ್ನು ತಂದು ಕೊಟ್ಟಿದೆ. ಅದಕ್ಕಾಗಿಯೇ ಭೈರಪ್ಪ ಮತ್ತು ಭೈರಪ್ಪರಂತ ಮೂಲಭೂತವಾದಿಗಳು ಪರಂಪರೆಯ ಹೆಸರಿನಲ್ಲಿ ಅದನ್ನು ವಿರೋಧಿಸುತ್ತಿದ್ದಾರೆ. ಉಗ್ರ ಮಹಿಳಾ ವಿರೋಧಿಯಾದ ಭೈರಪ್ಪನವರು ಮಹಿಳೆಯ ದೇಹದ ಮೇಲೆ ಪುರುಷಾಧಿಕಾರವನ್ನು ಸ್ಥಾಪಿಸಿದ್ದ ಮನುಸ್ಮೃತಿ ಬೆಂಬಲಿಸುತ್ತಿದ್ದಾರೆ. ಸಂವಿಧಾನವು ಮಹಿಳೆಗೆ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ನೀಡುವ ಮೂಲಕ ಅವಳಿಗೆ ಗೌರವದ ಬದುಕು ನೀಡಿದೆ. ತಮ್ಮ ಬರಹ ಮತ್ತು ಮಾತಿನ ಮೂಲಕವೇ ಭೈರಪ್ಪನವರು ಮಹಿಳೆಯರನ್ನು ಅವಮಾನಿಸುವ ಮೂಲಕ ಅವಳ ಹಕ್ಕು ಮತ್ತು ಅಧಿಕಾರವನ್ನು ನಿರಾಕರಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...