Homeಕರ್ನಾಟಕಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ...

ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ- ಕುಮಾರಸ್ವಾಮಿ

"ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ"

- Advertisement -
- Advertisement -

ಕೊರೊನಾ ಪರಿಸ್ಥಿತಿ ನಿರ್ವಹಣೆ ಮಾಡಲಾಗದೇ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಹೇಳಿದ್ದಾರೆ.

“ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ…ಇವೆಲ್ಲಾ ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವ ಈಶ್ವರಪ್ಪ, ಬಿಜೆಪಿ ರಾಷ್ಟರೀಯ ಕಾರ್ಯದರ್ಶಿ ಸಿಟಿ ರವಿ, ಸಚಿವ ಡಿ.ವಿ.ಸದಾನಂದಗೌಡ ಕೊರೊನಾ ನಿರ್ವಹಣೆ ಕುರಿತು ವಿವಾದಿತ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದರು.

“‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ..? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

“ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ” ಎಂದು ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ಕೊರೊನಾ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

“ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪ್ರಾದೇಶಿಕ ಪಕ್ಷಗಳ ಆಡಳಿತವಿರುವ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ” ಎಂದಿದ್ದಾರೆ.

“ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...