Homeಅಂತರಾಷ್ಟ್ರೀಯಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ...

ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ಅನಿಲ್ ಅಂಬಾನಿ, ಅವರ ಪತ್ನಿ ಮತ್ತು ಮಕ್ಕಳ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳಬೇಕೆಂಬ ಮನವಿಯನ್ನು ಸ್ವಿಟ್ಜರ್ಲೆಂಡ್‌ನ ಉನ್ನತ ನ್ಯಾಯಾಲಯ ಅಂಗೀಕರಿಸಿದೆ.

- Advertisement -
- Advertisement -
  • ನೂಪೂರ್ ತಿವಾರಿ

ಕೃಪೆ: ನ್ಯೂಸ್‌ಲಾಂಡ್ರಿ

ರಿಲಯನ್ಸ್ ಗ್ರೂಪ್ ಮುಖ್ಯಸ್ಥ, ಅವರ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳಬೇಕೆಂಬ ಮನವಿಯನ್ನು ಸ್ವಿಟ್ಜರ್ಲೆಂಡ್‌ನ ಉನ್ನತ ನ್ಯಾಯಾಲಯ ಅಂಗೀಕರಿಸಿದೆ.

ಅನಿಲ್ ಅಂಬಾನಿ, ಟೀನಾ ಅಂಬಾನಿ ಮತ್ತು ಅವರ ಇಬ್ಬರು ಮಕ್ಕಳ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಭಾರತೀಯ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲು ಸ್ವಿಸ್ ಫೆಡರಲ್ ನ್ಯಾಯಾಲಯ ಒಪ್ಪಿಕೊಂಡಿದೆ ಎಂದು ಸ್ವಿಸ್ ಪ್ರಕಟಣೆ ಗೊಥಮ್ ಸಿಟಿ ವರದಿ ಮಾಡಿದೆ.

ಭಾರತೀಯ ಹಣಕಾಸು ಸಚಿವಾಲಯದ ವಿದೇಶಿ ತೆರಿಗೆ ಮತ್ತು ಸಂಶೋಧನಾ ವಿಭಾಗದಿಂದ ಪರಸ್ಪರ ಸಹಾಯಕ್ಕಾಗಿ ಕೋರಿಕೆಯನ್ನು ಅನುಮೋದಿಸುವ ನ್ಯಾಯಾಲಯದ ಏಪ್ರಿಲ್ 29ರ ತೀರ್ಪಿನ ಪ್ರತಿ ನ್ಯೂಸ್‌ಲಾಂಡ್ರಿ ಬಳಿಯಿದೆ. ರಿಲಯನ್ಸ್ ಗ್ರೂಪ್ ಮುಖ್ಯಸ್ಥರು (ಅನಿಲ್ ಅಂಬಾನಿ), ಏಪ್ರಿಲ್ 2011ರಿಂದ ಸೆಪ್ಟೆಂಬರ್ 2018ರ ಅವಧಿಯಲ್ಲಿ ವಿದೇಶಿ ಹಣಕಾಸು ವ್ಯವಹಾರಗಳಲ್ಲಿ ತೋರಿದ ಆಸಕ್ತಿಯನ್ನು ಪರೀಕ್ಷಿಸಲು ಅಂಬಾನಿಯ ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳನ್ನು ನೀಡುವಂತೆ ಭಾರತದ ಹಣಕಾಸು ಇಲಾಖೆ ಕೋರಿತ್ತು.

ಈ ವಿನಿಮಯಕ್ಕೆ ಸ್ವಿಟ್ಜರ್ಲೆಂಡ್ ಅನುಮತಿ ನೀಡಬಾರದು ಎಂದು ವಾದಿಸಿ ಪರಸ್ಪರ ಸಹಾಯವನ್ನು ನಿರ್ಬಂಧಿಸಲು ಸಂಬಂಧಪಟ್ಟ ವ್ಯಕ್ತಿಗಳು ಪ್ರಯತ್ನಿಸಿದ್ದಾರೆ ಎಂದು ತೀರ್ಪು ಹೇಳುತ್ತದೆ. ಆದರೆ ಅವರ ಮನವಿಯನ್ನು ವಜಾಗೊಳಿಸಲಾಯಿತು. ಇದು ಭಾರತೀಯ ಅಧಿಕಾರಿಗಳ ಮನವಿಗೆ ಸಿಕ್ಕ ಪುರಸ್ಕಾರವಾಗಿದೆ. ನ್ಯಾಯಾಲಯದ ತೀರ್ಪು ಅಂಬಾನಿ ಕುಟುಂಬವನ್ನು ಸ್ಪಷ್ಟವಾಗಿ ಹೆಸರಿಸುವುದಿಲ್ಲ, ಆದರೆ ಗೋಥಮ್ ಸಿಟಿ (ಸ್ವಿಟ್ಜರ್‌ಲೆಂಡ್‌ನ ಮಾಧ್ಯಮ), ನ್ಯಾಯಾಲಯದ ದಾಖಲೆಗಳಿಂದ ಎ, ಬಿ, ಸಿ ಮತ್ತು ಡಿ ಎಂದು ಉಲ್ಲೇಖಿಸಲ್ಪಟ್ಟ ವ್ಯಕ್ತಿಗಳು ಅನಿಲ್ ಧೀರೂಭಾಯ್ ಅಂಬಾನಿ, ಟೀನಾ ಅನಿಲ್ ಅಂಬಾನಿ, ಜೈ ಅನ್ಮೋಲ್ ಅನಿಲ್ ಅಂಬಾನಿ ಮತ್ತು ಜೈ ಅನ್ಶುಲ್ ಅನಿಲ್ ಅಂಬಾನಿ ಎಂದು ವಿವರಿಸಿದೆ. ಫ್ರೆಡೆರಿಕ್ ಸೆರಾ ಅವರು ನ್ಯಾಯಾಲಯದಲ್ಲಿ ಇವರ ಪರ ವಾದ ಮಾಡಿದ್ದರು.

ನ್ಯಾಯಾಲಯದ ತೀರ್ಪಿನಲ್ಲಿ ಎ, ಬಿ, ಸಿ ಮತ್ತು ಡಿ ಅಂದರೆ, ಅನಿಲ್ ಅಂಬಾನಿ, ಅವರ ಪತ್ನಿ ಮತ್ತು ಇಬ್ಬರು ಪುತ್ರರು ಎಂದು ಗೊಥಮ್ ಸಿಟಿಗೆ ಕಥೆಯನ್ನು ವರದಿ ಮಾಡಿದ ಫ್ರಾಂಕೋಯಿಸ್ ಪಿಲೆಟ್ ಇದನ್ನು ಹೇಗೆ ದೃಢಪಡಿಸುತ್ತಾರೆ? “ನ್ಯಾಯಾಲಯದ ವರದಿಗಾರರಾಗಿ, ಸ್ವಿಸ್ ಸುಪ್ರೀಂಕೋರ್ಟಿನ ಪ್ರತಿಯೊಂದು ತೀರ್ಪಿನಲ್ಲೂ ಪಕ್ಷಗಳ (ವ್ಯಕ್ತಿ ಅಥವಾ ಕಂಪನಿಗಳ) ಹೆಸರನ್ನು ನೋಡಲು ನಮಗೆ ಅವಕಾಶವಿದೆ” ಎಂದು ಅವರು ವಿವರಿಸಿದರು. “ಗುಮಾಸ್ತರ ಕಚೇರಿಗೆ ಖುದ್ದಾಗಿ ಹೋಗುವುದರಿಂದ ಮಾತ್ರ ಇದು ಸಾಧ್ಯ” ಎಂದು ಅವರು ಹೇಳಿದ್ದಾರೆ.
ಸ್ವಿಟ್ಜರ್ಲೆಂಡ್ ಈ ವರ್ಷ ಇಲ್ಲಿಯವರೆಗೆ ಭಾರತದಿಂದ ತೆರಿಗೆ ವಿನಂತಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ ಎಂದು ಪಿಲೆಟ್ ನ್ಯೂಸ್‌ಲಾಂಡ್ರಿಗೆ ತಿಳಿಸಿದರು. ಅವೆಲ್ಲವನ್ನೂ ಫೆಡರಲ್ ಸುಪ್ರೀಂ ಕೋರ್ಟ್ ಅನುಮೋದಿಸಿದೆ ಎಂದೂ ತಿಳಿಸಿದರು.

ಸ್ವಿಸ್ ಬ್ಯಾಂಕ್‌ಗಳ ಗೌಪ್ಯತೆ

ಸ್ವಿಸ್ ಬ್ಯಾಂಕಿಂಗ್ ಗೌಪ್ಯತೆ ಕಾನೂನುಗಳ ಪ್ರಕಾರ, ವಿವಿಧ ದೇಶದ ಖಾಸಗಿ ಬ್ಯಾಂಕುಗಳ ಮೂಲಕ ಶಂಕಿತ ಹಣ ವರ್ಗಾವಣೆಯ ಬಗ್ಗೆ ಸರ್ಕಾರಗಳು ಮಾಹಿತಿ ಪಡೆಯುವುದು ಇಲ್ಲಿವರೆಗೆ ಅಸಾಧ್ಯವಾಗಿತ್ತು. ಆದರೆ ಈ ಪ್ರಕರಣ ಅದನ್ನು ಮುರಿದು ಹಾಕುವ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಸ್ವಿಸ್ ಕಾನೂನಿಗೆ ತನ್ನ ಸರ್ಕಾರಕ್ಕೆ ಆಡಳಿತಾತ್ಮಕ ನೆರವು ನೀಡುವಂತೆ ವಿಶೇಷ ವಿನಂತಿಯ ಅಗತ್ಯವಿರುತ್ತದೆ, ನಂತರ ಮಾಹಿತಿಯನ್ನು ಒದಗಿಸಲು ಸ್ವಿಸ್ ಬ್ಯಾಂಕುಗಳಿಗೆ ಸೂಚನೆ ನೀಡಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುತ್ತದೆ.

ಕಪ್ಪುಹಣ ಇಡಲು ಸುಭದ್ರ ಎಂದು ಸ್ವಿಸ್ ಬ್ಯಾಂಕುಗಳು ಅಪಖ್ಯಾತಿಗೆ ಒಳಗಾಗಿವೆ. ಆದರೆ, ಕಳೆದ ಕೆಲವು ವರ್ಷಗಳಲ್ಲಿ ಸ್ವಿಟ್ಜರ್ಲೆಂಡ್ ಸರ್ಕಾರಕ್ಕೆ ಹಲವು ದೇಶಗಳು ಮನವಿ ಮಾಡಿ, ತಮ್ಮ ದೇಶದ ಉದ್ಯಮಿಗಳು, ರಾಜಕಾರಣಿಗಳ ಬ್ಯಾಂಕ್ ವಿವರ ನೀಡಲು ಒತ್ತಾಯಿಸುತ್ತ ಬಂದಿವೆ. ಕೆಲವೊಮ್ಮೆ, ಸರ್ಕಾರಗಳು ತೆರಿಗೆ ಮೂಲಗಳಿಂದ ಆಯ್ದ ಮಾಹಿತಿಯನ್ನು ಪಡೆದುಕೊಳ್ಳುತ್ತವೆ ಅಥವಾ ಅವರ ವಿವೇಚನೆಯಿಂದ ಕಾರ್ಯನಿರ್ವಹಿಸುತ್ತವೆ. ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು “ಪ್ರಭುತ್ವದ ತೆರಿಗೆ ಭಯೋತ್ಪಾದನೆ” ನಡೆಯುತ್ತದೆ.

ಸ್ವಿಸ್ ಬ್ಯಾಂಕ್ ಈಗ ಅಗತ್ಯವಾದ ಮಾಹಿತಿಯನ್ನು ಹಂಚಿಕೊಂಡರೆ, ಅಂಬಾನಿ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ಸಾಬೀತುಪಡಿಸಬಹುದೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಭಾರತೀಯ ಅಧಿಕಾರಿಗಳು ಪೂರ್ಣ ಚಿತ್ರವನ್ನು ಪಡೆಯಲು ಸಹಾಯ ಮಾಡುತ್ತದೆ. ಆದರೂ, ಅಂತಹ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲು ಭಾರತೀಯ ಅಧಿಕಾರಿಗಳಿಂದ ಪಾರದರ್ಶಕತೆ ಅಗತ್ಯವಿರುತ್ತದೆ. ಈ ಹಿಂದೆ, ಕಪ್ಪು ಹಣದ ತನಿಖೆಗೆ ಸಹಾಯ ಮಾಡಲು ನರೇಂದ್ರ ಮೋದಿ ಸರ್ಕಾರ ಮುಂದಾಗಿಲ್ಲ ಎಂದು ಹಲವರು ವಿಶಲ್ ಬ್ಲೋವರ್ಸ್ ಆರೋಪಿಸಿದ್ದಾರೆ.

‘2015ರಲ್ಲಿ, ಸ್ವಿಸ್ ಪ್ರಕಟಣೆಯ ಪ್ರಕಾರ, ಅನಿಲ್ ಅಂಬಾನಿ ಫ್ರಾನ್ಸ್‌ನಲ್ಲಿನ ತನ್ನ ರಿಲಯನ್ಸ್ ಗ್ರೂಪ್ ಕಂಪೆನಿಗಳಿಗೆ ಸಂಬಂಧಿಸಿದಂತೆ 140 ಮಿಲಿಯನ್ ಯುರೋಗಳಷ್ಟು ತೆರಿಗೆ ಹೊಂದಾಣಿಕೆಯನ್ನು ರದ್ದುಗೊಳಿಸುವಲ್ಲಿ ಯಶಸ್ವಿಯಾಗಿದ್ದರು. “ಲೆ ಮಾಂಡೆ (ಫ್ರಾನ್ಸ್ ಮಾಧ್ಯಮ, ಇತ್ತೀಚೆಗೆ ಕೊರೋನಾ ನಿರ್ವಹಣೆಯ ವಿಫಲತೆಗೆ ಮೋದಿ ಕಾರಣ ಎಂದು ಸಂಪಾದಕೀಯ ಬರೆದಿದ್ದ ಪತ್ರಿಕೆ) ಬಹಿರಂಗಪಡಿಸಿದಂತೆ, ಫ್ರಾನ್ಸ್ ದೇಶದ ಡಸಾಲ್ಟ್ ಕಂಪನಿಯು ಭಾರತದೊಂದಿಗೆ ರಫೇಲ್ ಯುದ್ಧವಿಮಾನಗಳ ಮಾರಾಟದ ಬಗ್ಗೆ ಮಾತುಕತೆ ನಡೆಸುತ್ತಿದ್ದಾಗ ಅದೇ ಸಮಯದಲ್ಲಿ ನಡೆದ ಅನಿಲ್ ಅಂಬಾನಿಯವರ ಈ ‘ವಿದ್ಯಮಾನ’ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಮಾರಾಟವು ಪ್ರಭುತ್ವದ ಅತ್ಯುನ್ನತ ಮಟ್ಟದಲ್ಲಿ ಭ್ರಷ್ಟಾಚಾರದ ಅನುಮಾನದಿಂದ ಕಳಂಕಿತವಾಗಿದೆ. ಅದರಲ್ಲಿ ಅನಿಲ್ ಅಂಬಾನಿ ಮುಖ್ಯ ಫಲಾನುಭವಿಗಳಲ್ಲಿ ಒಬ್ಬರು ಎಂದು ಹೇಳಲಾಗಿದೆ” ಎಂದು ಗೊಥಮ್ ಸಿಟಿ ವರದಿ ಹೇಳುತ್ತದೆ.

ಅಗತ್ಯವಾದ ಅನುಭವ ಮತ್ತು ವಿವರಗಳನ್ನು ಹೊಂದಿಲ್ಲದಿದ್ದರೂ ಸಹ, ಇಂಡೋ-ಫ್ರೆಂಚ್ ರಫೇಲ್ ಫೈಟರ್ ಜೆಟ್ ವ್ಯವಹಾರದಲ್ಲಿ ಅನಿಲ್ ಅಂಬಾನಿಯ ರಿಲಯನ್ಸ್ ಗ್ರೂಪ್ ಅನ್ನು ಡಸಾಲ್ಟ್‌ನ ಕೈಗಾರಿಕಾ ಪಾಲುದಾರನನ್ನಾಗಿ ಮಾಡಲಾಗಿದೆ ಎಂದು ಫ್ರೆಂಚ್ ಸುದ್ದಿ ಪ್ರಕಟಣೆ ಮೀಡಿಯಾಪಾರ್ಟ್ ಬಹಿರಂಗಪಡಿಸಿತ್ತು. ಆಗ 2018ರಲ್ಲಿ ಅಂಬಾನಿ ವಿರುದ್ಧ ಭ್ರಷ್ಟಾಚಾರದ ಅನುಮಾನಗಳು ಎದ್ದವು. ಒಪ್ಪಂದದ ಪ್ರಕಾರ, ರಿಲಯನ್ಸ್ ಡಿಫೆನ್ಸ್‌ಗಾಗಿ ಡಸಾಲ್ಟ್ 30,000 ಕೋಟಿ ರೂ.ಗಳ ವ್ಯವಹಾರವನ್ನು ನೀಡಿತು!

ಫ್ರೆಂಚ್ ಪ್ರಕಟಣೆಯು ಆಗಿನ ಫ್ರೆಂಚ್ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರನ್ನು ಉಲ್ಲೇಖಿಸಿತ್ತು: “ಇದರಲ್ಲಿ ನಾವು ಯಾವುದೇ ಹೇಳಿಕೆಯನ್ನು ಹೊಂದಿಲ್ಲ. ಭಾರತ ಸರ್ಕಾರ ಈ ಸೇವಾ ಗುಂಪನ್ನು (ಸರ್ವಿಸ್ ಗ್ರೂಪ್- ಅನಿಲ್ ಅಂಬಾಮಿಯ ಕಂಪನಿ) ಪ್ರಸ್ತಾಪಿಸಿತು ಮತ್ತು ಡಸಾಲ್ಟ್ ಕಂಪನಿ ಅಂಬಾನಿ ಸಮೂಹದೊಂದಿಗೆ ಮಾತುಕತೆ ನಡೆಸಿತು. ನಮಗೆ ಆಯ್ಕೆ ಇರಲಿಲ್ಲ, ನಮಗೆ ನೀಡಿದ ಪಾಲುದಾರನನ್ನು ನಾವು ಒಪ್ಪಿಕೊಂಡಿದ್ದೇವೆ…..’

2016 ರಲ್ಲಿ ಮೋದಿ ನೇತೃತ್ವದ ಸರ್ಕಾರ, 7.8 ಬಿಲಿಯನ್ ಯೂರೋ ಒಪ್ಪಂದ ಕುರಿತಂತೆ ಆಗಿನ ಫ್ರೆಂಚ್ ಅಧ್ಯಕ್ಷರಾಗಿದ್ದ ಫ್ರಾಂಕೋಯಿಸ್ ಹೊಲಾಂಡ್ ಅವರ ಹೇಳಿಕೆಯು ಭ್ರಷ್ಟಾಚಾರದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು. ಒಪ್ಪಂದದ ಪ್ರಮುಖ ಫಲಾನುಭವಿ ಎಂದು ಅನಿಲ್ ಅಂಬಾನಿಯನ್ನು “ಆಯ್ಕೆ ಮಾಡಲಾಗಿದೆ” ಎಂದು ತೋರುತ್ತದೆ ಎಂಬುದು ಮೇಲ್ನೋಟಕ್ಕೇ ಗೊತ್ತಾಗಿತ್ತು. ಆಗಿನ ಫ್ರೆಂಚ್ ಅಧ್ಯಕ್ಷರ ಪಾಲುದಾರ ನಟ ಜೂಲಿ ಗಯೆತ್‌ಗೆ ರಿಲಯನ್ಸ್ ಗ್ರೂಪ್ ಹಣ ನೀಡಿದೆ ಎಂದು ತಿಳಿದುಬಂದಿತ್ತು.

2008 ರಲ್ಲಿ ಫ್ರಾಂಕೊ-ಇಟಾಲಿಯನ್ ವಿಶಲ್ ಬ್ಲೋವರ್ ಹೆರ್ವೆ ಫಾಲ್ಸಿಯಾನಿ ಸೋರಿಕೆ ಮಾಡಿದ ಎಚ್‌ಎಸ್‌ಬಿಸಿ ಪಟ್ಟಿಯಲ್ಲಿ ಅನಿಲ್ ಅಂಬಾನಿಯ ಹೆಸರನ್ನು ಗುರುತಿಸಲಾಗಿದೆ ಮತ್ತು ನಂತರ ಅದೇ ಡೇಟಾವನ್ನು ಬಳಸಿಕೊಂಡು 2015 ರಲ್ಲಿ ಸ್ವಿಸ್‌ಲೀಕ್ಸ್‌ನಲ್ಲಿ ಇದನ್ನು ಬಹಿರಂಗ ಮಾಡಲಾಗಿದೆ.  ಅನಿಲ್ ಅಂಬಾನಿಯ ಸಹೋದರ ಮುಖೇಶ್ ಅಂಬಾನಿಯನ್ನೂ ಈ ಪಟ್ಟಿಗಳಲ್ಲಿ ಹೆಸರಿಸಲಾಗಿದೆ. ಸ್ವಿಟ್ಜರ್ಲೆಂಡ್, ದಶಕಗಳಿಂದ, ವಿಶ್ವದ ಪ್ರಮುಖ ತೆರಿಗೆ ಆಶ್ರಯ ತಾಣಗಳಲ್ಲಿ ಒಂದಾಗಿದೆ. ಅಲ್ಲಿ ಬಹುರಾಷ್ಟ್ರೀಯ ಸಂಸ್ಥೆಗಳು ಮತ್ತು ಸೂಪರ್ ಶ್ರೀಮಂತರು ದೊಡ್ಡ ಪ್ರಮಾಣದ ಹಣವನ್ನು ಮರೆಮಾಡಬಹುದು. ಅದು ಹಣಕಾಸು ಅಧಿಕಾರಿಗಳಿಂದ ಕಂಡುಹಿಡಿಯುವುದು ಕಷ್ಟ ಅಥವಾ ಅಸಾಧ್ಯವಾಗುತ್ತದೆ.

ಮೋದಿಯವರ ಕಪ್ಪುಹಣದ ಬೇಟೆ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್, ಅನಿಲ್ ಅಂಬಾನಿಗೆ ನೆರವು ಮತ್ತು ಸ್ವಿಸ್ ಬ್ಯಾಂಕ್‌ಗಳ ಮರ್ಮ ಈ ಪ್ರಕರಣದಲ್ಲಿ ಒಂದಕ್ಕೊಂದು ತಳುಕು ಹಾಕಿಕೊಂಡಿದೆ.

(ನೂಪುರ್ ತಿವಾರಿ ಪ್ಯಾರಿಸ್‌ನಲ್ಲಿ ನೆಲೆಸಿರುವ ಸ್ವತಂತ್ರ ಪತ್ರಕರ್ತರು. ಕೃಪೆ: ದಿ ನ್ಯೂಸ್ ಲ್ಯಾಂಡ್ರಿ)

ಕನ್ನಡಕ್ಕೆ: ಪಿ.ಕೆ.ಮಲ್ಲನಗೌಡರ್


ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...