Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...