Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...