Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...