Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...