Homeಕರೋನಾ ತಲ್ಲಣಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಆಪ್ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

- Advertisement -
- Advertisement -

ನಮಗೆ ಅರ್ಜೆಂಟ್ ಬೆಡ್ ಬೇಕಾಗಿದೆ, ಆಕ್ಸಿಜನ್ ಬೇಕಾಗಿದೆ, ರೆಮ್ಡಿಸಿವಿರ್ ಇಂಜೆಕ್ಷನ್ ಬೇಕಾಗಿದೆ ಎಂದೂ… ಹಾಗೆಯೆ ನಿಮ್ಮ ಸಹಾಯದಿಂದ ನಮ್ಮ ಪ್ರೀತಿಪಾತ್ರರು ಬದುಕಿದರು.. ನಿಮ್ಮ ಸಹಾಯವನ್ನು ನಾವೆಂದು ಮರೆಯುವುದಿಲ್ಲ ಎಂದು ಟ್ವಿಟರ್ ಮತ್ತು ಫೇಸ್ಬುಕ್‌ನಲ್ಲಿ ಅತಿ ಹೆಚ್ಚು ಟ್ಯಾಗ್ ಆಗುತ್ತಿರುವ ವ್ಯಕ್ತಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್..

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಬಿ.ವಿ ಶ್ರೀನಿವಾಸ್ ದೆಹಲಿಯಲ್ಲಿ ಒಂದು ದೊಡ್ಡ ಯುವ ತಂಡ ಕಟ್ಟಿಕೊಂಡು, ಕೋವಿಡ್ ಸಂಬಂಧಿತವಾಗಿ ಯಾರಿಗೆ ಯಾವ ಸಹಾಯ ಬೇಕಾದರೂ ಹಗಲು ರಾತ್ರಿಯೆನ್ನದೇ ನೀಡಲು ಮುಂದಾಗಿದ್ದಾರೆ. ಇದುವರೆಗೂ ನೂರಾರು ಜನರ ಪ್ರಾಣ ಉಳಿಸಿದ ಶ್ರೇಯ ಇವರದು.. ಇವರನ್ನು ದೆಹಲಿ ಪೊಲೀಸರು ಇಂದು ಔಷಧಿ ವಿತರಣೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಶ್ನಿಸಿದ್ದಾರೆ. ಅಲ್ಲದೇ ಆಪ್ ಮತ್ತು ಬಿಜೆಪಿ ನಾಯಕರು ತಮ್ಮನ್ನು ಪ್ರಶ್ನಿಸಲಾಯಿತು ಎಂದು ತಿಳಿಸಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳ ಅಕ್ರಮ ವಿತರಣೆಯಲ್ಲಿ ವಿವಿಧ ಪಕ್ಷಗಳ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ದೀಪಕ್‌ ಸಿಂಗ್ ಎಂಬುವವರು ಸಲ್ಲಿಸಲಾಗಿರುವ ಅರ್ಜಿಯ ಮೇರೆಗೆ ತಾವು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅರ್ಜಿಯಲ್ಲಿ ಯಾರೊಬ್ಬರ ಹೆಸರು ಉಲ್ಲೇಖಿಸದಿದ್ದರೂ ಕ್ರೈಮ್ ಬ್ರಾಂಚ್ ಪೊಲೀಸರು ದೆಹಲಿ ಯುತ್ ಕಾಂಗ್ರೆಸ್ ಕಚೇರಿಗೆ ತೆರಳಿ ಶ್ರೀನಿವಾಸ್‌ರವರ ಹೇಳಿಕೆ ಪಡೆದಿದ್ದಾರೆ. ಅದೇ ರೀತಿ ಆಪ್ ಪಕ್ಷದ ಎಎಪಿ ಶಾಸಕ ದಿಲೀಪ್ ಪಾಂಡೆಯವರನ್ನು ಪ್ರಶ್ನಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್, “ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುತ್ತಿಲ್ಲ, ಹಾಗಾಗಿ ಚಿಂತಿಸಬೇಕಾದ ಅಗತ್ಯವಿಲ್ಲ. ಪೊಲೀಸ್ ತನಿಖೆಯಿಂದ ನಮಗೆ ಭಯವಿಲ್ಲ, ನಾವು ನಮ್ಮ ಕೆಲಸವನ್ನು ನಿಲ್ಲಿಸದೇ ಮುಂದುವರೆಸುತ್ತೇವೆ” ಎಂದಿದ್ದಾರೆ.

“ನಾವು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಇಂತಹ ಪಿಐಎಲ್‌ಗಳಿಗೆ ಹೆದರುವುದಿಲ್ಲ. ನಮ್ಮ ಸಣ್ಣ ಪ್ರಯತ್ನಗಳು ಜೀವ ಉಳಿಸಲು ಸಹಾಯ ಮಾಡಿದರೆ, ನಾವು ನಮ್ಮ ಕೆಲಸ ನಿಲ್ಲಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಕುರಿತು “ರಕ್ಷಿಸುವವನು ಕೊಲ್ಲುವವನಿಗಿಂತ ಯಾವಾಗಲೂ ದೊಡ್ಡವನು #IStandWithIYC” ಎಂದು ಟ್ವೀಟ್ ಮಾಡಿದ್ದಾರೆ.

ಯೂತ್‌ ಕಾಂಗ್ರೆಸ್‌ನಿಂದ ಸಹಾಯ ಪಡೆದ ಪ್ರತಿಯೊಬ್ಬರ ಮನೆಗೂ ಗೃಹ ಸಚಿವ ಅಮಿತ್‌ ಶಾ ಪೊಲೀಸರನ್ನು ಕಳಿಸಿ ಪ್ರಶ್ನಿಸುತ್ತಾರೆಯೇ ಎಂದು ಸವಾಲು ಹಾಕುತ್ತೇನೆ. ಅವರನ್ನು ಎದುರಿಸುವ ಧೈರ್ಯ ಈ ಸರ್ಕಾರಕ್ಕಿದೆಯೇ ಎಂದು ಶ್ರೀವತ್ಸ ಪ್ರಶ್ನಿಸಿದ್ದಾರೆ.

ಈ ಸಾಂಕ್ರಾಮಿಕ ಸಮಯದಲ್ಲಿ ಸಹಾಯ ಮಾಡುತ್ತಿರುವ ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್‌ ಅನ್ನು ಟಾರ್ಗೆಟ್ ಮಾಡುವುದನ್ನು ಸಹಿಸುವುದಿಲ್ಲ. ರಾಜಕೀಯ ವಿರೋಧಿಗಳಿಗೆ ಕಿರುಕುಳ ಮತ್ತು ಬೆದರಿಕೆ ಒಡ್ಡುವುದು ಬಿಜೆಪಿಯ ಮೂಲ ಸಿದ್ದಾಂತವಾಗಿದೆ. ಆದರೆ ಇಂತಹ ದಾಳಿಗಳು ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಅವರನ್ನೂ ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ “ಮೋದಿ ಸರ್ಕಾರದ ಅಡಿಯಲ್ಲಿ ಜನರಿಗೆ ಸಹಾಯ ಮಾಡುವುದು ಅಪರಾಧವಾಗಿದೆ. ನನ್ನ ಇಡೀ ಕುಟುಂಬವು ಕೋವಿಡ್ ಸೋಂಕಿಗೆ ಒಳಗಾಗಿದೆ. ಆದರೆ ಕ್ರೈಮ್ ಬ್ರಾಂಚ್ ಪೊಲೀಸರು ನೀವು ಜನರಿಗೆ ಹೇಗೆ ಸಹಾಯ ಮಾಡಿದ್ದೀರಿ? ನಮಗೆ ಉತ್ತರಿಸಿ? ಎಂದು ಕೇಳುತ್ತಿದ್ದಾರೆ. ನೀವು ನನ್ನನ್ನ ಗಲ್ಲಿಗೇರಿಸಿದರೂ ಸರಿಯೇ, ಒಂದಲ್ಲ ಸಾವಿರ ಬಾರಿ ಜನರಿಗೆ ಸಹಾಯ ಮಾಡುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ರೀತಿಯ ವಿಚಾರಣೆಯಿಂದ ನೂರಾರು ಜನ ನೆರವು ಮಾಡುವುದರಿಂದ ಹಿಂದೆ ಸರಿಯಬಹುದು. ಇದು ಜನರಿಗೆ ಬಹಳ ತೊಂದರೆಯಾಗಲಿದೆ. ಕೋರ್ಟ್ ಮತ್ತು ಪೊಲೀಸರು ಈ ಹಿನ್ನೆಲೆಯಲ್ಲಿಯೂ ಯೋಚಿಸಬೇಕು ಮತ್ತು ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡುತ್ತಿರುವವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆದರೆ ದೆಹಲಿ ಸಂಸದ ಗೌತಮ್ ಗಂಭೀರ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಪ್ರತಿಪಕ್ಷಗಳು ಪೊಲೀಸರ ಈ ಸರಿಯಾದ ಪ್ರಕ್ರಿಯೆಯನ್ನು ಅನಗತ್ಯವಾಗಿ ರಾಜಕೀಕರಣ ಮಾಡಬಾರದು. ದೆಹಲಿ ಪೊಲೀಸರು ನಮ್ಮಿಂದ ಸಹ ಉತ್ತರ ಕೇಳಿದ್ದಾರೆ ಮತ್ತು ನಾವು ಎಲ್ಲಾ ವಿವರಗಳನ್ನು ಒದಗಿಸಿದ್ದೇವೆ. ನಾನು ಯಾವಾಗಲೂ ದೆಹಲಿ ಮತ್ತು ಅದರ ಜನರಿಗೆ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುತ್ತಿದ್ದೇನೆ!” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಮುಖಂಡ ಹರೀಶ್ ಖುರಾನಾ ಸಹ ನನ್ನನ್ನು ಪ್ರಶ್ನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. “ಜನರಿಗೆ ಸಹಾಯ ಮಾಡಿದ್ದಕ್ಕಾಗಿ ನನ್ನನ್ನು ಇಂದು ಕ್ರೈಮ್ ಬ್ರಾಂಚ್ ಪ್ರಶ್ನಿಸಿದೆ. ನಾನು ಮಧ್ಯಾಹ್ನ ಹೇಳಿಕೆ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ಕೈಚೆಲ್ಲಿ ಕುಳಿತಾಗ ಕೈಹಿಡಿದು ನಡೆಸಿದ ಮಾನವೀಯ ಮನಸ್ಸುಗಳಿಗೊಂದು ಸಲಾಂ

ಕೋವಿಡ್ ಹೆಚ್ಚಿದಂತೆಲ್ಲಾ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಮತ್ತು ವ್ಯವಸ್ಥೆ ಇದ್ದರೂ ಅದು ಅವ್ಯವಸ್ಥಿತವಾಗಿರುವ ಕಾರಣ ಜನ ಬೆಡ್‌ಗಾಗಿ, ಆಕ್ಸಿಜನ್ ಮತ್ತು ಇಂಜೆಕ್ಷನ್‌ಗಾಗಿ ಸರ್ಕಾರದ ಹೆಲ್ಫ್ ಲೈನ್‌ಗಳನ್ನು ನಂಬಿ ಕೂರುವ ಪರಿಸ್ಥಿತಿ ಇಲ್ಲ. ಆ ಹೆಲ್ಫ್ ಲೈನ್‌ಗಳಿಂದ ಸೂಕ್ತ ಭರವಸೆ ಸಿಗದ ಕಾರಣ ಅವರು ಶ್ರೀನಿವಾಸ್‌ರವರನ್ನು ಸಂಪರ್ಕಿಸುತ್ತಿದ್ದಾರೆ.

ಇತ್ತೀಚಿಗೆ ಭಾರತದಲ್ಲಿನ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್‌ ಕಚೇರಿಗಳು ಸಹ ಶ್ರೀನಿವಾಸ್‌ರವರ ಸಹಾಯ ಕೋರಿದ್ದವು. ಆಗ ಈ ತಂಡ ಕೂಡಲೇ ಅವರಿಗೆ ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಿತ್ತು. ಈ ವಿಡಿಯೋವನ್ನು ಯೂತ್ ಕಾಂಗ್ರೆಸ್ ಟ್ವೀಟ್ ಮಾಡಿದ್ದರಿಂದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕಷ್ಟಕಾಲದಲ್ಲಿ ಶ್ರೀನಿವಾಸ್ ಎಂಬ ಕನ್ನಡಿಗನ ಮಾನವೀಯ ಕೆಲಸವನ್ನು ಹಲವಾರು ಮಾಧ್ಯಮಗಳು ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿವೆ. ದಿ ಕ್ವಿಂಟ್‌ನವರು ನೇರ ಅವರ ಕಛೇರಿಗೆ ತೆರಳಿ ಅವರ ಕೆಲಸ ವಿಧಾನದ ಕುರಿತು ವಿಡಿಯೋವೊಂದನ್ನು ಮಾಡಿದ್ದಾರೆ. ಈಗ ನೀವು ಮಾಡುತ್ತಿರುವ ಎಲ್ಲಾ ಕೆಲಸಗಳನ್ನು ಮಾಡಬೇಕಾದುದು ಸರ್ಕಾರದ ಜವಾಬ್ದಾರಿ ಅಲ್ಲವೇ? ನೀವೇಕೆ ಮಾಡುತ್ತಿದ್ದೀರಿ ಎಂದು ಶ್ರೀನಿವಾಸ್ರವರನ್ನು ಪ್ರಶ್ನಿಸಿದಾಗ “ಇದು ರಾಜಕಾರಣ ಮಾಡುವ ಸಮಯವಲ್ಲ. ನಮ್ಮ ಕೈಯಿಂದ ಎಷ್ಟು ಮಾಡಲು ಸಾಧ್ಯ ಅಷ್ಟನ್ನು ಮಾಡುವ ದುರಂತದ ಸಮಯವಿದು. ನಮ್ಮ ಒಂದು ಸಣ್ಣ ಸಹಾಯ ಹಲವು ಜನರ ಪ್ರಾಣ ಉಳಿಸಬಹುದಾದರೆ ಅದೇ ನಮಗೆ ಮಹತ್ವದ್ದು. ಸಂಕಷ್ಟದಲ್ಲಿರುವ ಜನರಿಗೆ ಹೃದಯಪೂರ್ವಕವಾಗಿ ಸೇವೆ ಮಾಡಬೇಕಾದ ಸಮಯವಿದು” ಎನ್ನುತ್ತಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...