Homeಮುಖಪುಟಅಗತ್ಯ ವಸ್ತುಗಳ ದರ ನಿಗದಿ ಮಾಡಿದ ಕೇರಳ ಸರ್ಕಾರ, ಸರ್ಜಿಕಲ್ ಮಾಸ್ಕ್‌ 3 ರೂ., ಫೇಸ್‌ಶೀಲ್ಡ್‌ಗೆ...

ಅಗತ್ಯ ವಸ್ತುಗಳ ದರ ನಿಗದಿ ಮಾಡಿದ ಕೇರಳ ಸರ್ಕಾರ, ಸರ್ಜಿಕಲ್ ಮಾಸ್ಕ್‌ 3 ರೂ., ಫೇಸ್‌ಶೀಲ್ಡ್‌ಗೆ 21 ರೂ.ದರ

- Advertisement -
- Advertisement -

ಕೊರೊನಾ ಸೋಂಕು ನಿಯಂತ್ರಣ ಮತ್ತು ರಾಜ್ಯದಲ್ಲಿ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಪರಿಹಾರ ಒದಗಿಸುವಲ್ಲಿ ಮಾದರಿಯಾಗಿರುವ ಕೇರಳ ಸರ್ಕಾರ ಈಗ ಅಗತ್ಯ ವಸ್ತುಗಳಾದ ಮಾಸ್ಕ್, ಸ್ಯಾನಿಟೈಜರ್‌, ಫೇಸ್‌ಶೀಲ್ಡ್‌ಗೆ ಸೇರಿದಂತೆ ಹಲವು ವಸ್ತುಗಳಿಗೆ ಗರಿಷ್ಠ ದರ ನಿಗದಿ ಮಾಡಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ಕಾರ, ಕೇರಳ ಅಗತ್ಯ ವಸ್ತುಗಳ ನಿಯಂತ್ರಣ ಕಾಯ್ದೆ- 1986 ಕಾಯ್ದೆ ಜಾರಿಗೆ ತಂದಿದೆ. ಕೊರೊನಾ ಉಲ್ಬಣವಾಗುತ್ತಿರುವ ಈ ಸಮಯದಲ್ಲಿ ಅಗತ್ಯ ವಸ್ತುಗಳು ಜನರ ಕೈಗೆಟುಕುವಂತೆ ಮಾಡಲು ಈ ಕಾಯ್ದೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಸಿಟಿ ರವಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಮತ್ತೆ ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಸಚಿವ!

ಕೇರಳ ಸರ್ಕಾರ ಹೊರಡಿಸಿರುವ ಅಗತ್ಯ ವಸ್ತುಗಳ ಗರಿಷ್ಠ ದರ ಪಟ್ಟಿ ಹೀಗಿದೆ.

ಪಿಪಿಣ ಕಿಟ್- 273 ರೂಪಾಯಿ

ಎನ್‌95 ಮಾಸ್ಕ್- 22 ರೂಪಾಯಿ,

ಟ್ರಿಪಲ್ ಲೇಯರ್ ಮಾಸ್ಕ್- 3 ರೂಪಾಯಿ 90 ಪೈಸೆ,

ಎನ್‌ಆರ್‌ಬಿ ಮಾಸ್ಕ್- 80 ರೂಪಾಯಿ

ಫೇಸ್‌ಶೀಲ್ಡ್ – 21 ರೂಪಾಯಿ

ಡಿಸ್‌ಪೋಸಬಲ್ ಏಪ್ರಾನ್‌- 12 ರೂಪಾಯಿ,

ಸರ್ಜಿಕಲ್ ಗೌನ್- 65 ರೂಪಾಯಿ,

ಗ್ಲೌಸ್- 5 ರೂಪಾಯಿ 75 ಪೈಸೆ

 

ಅರ್ಧ ಲೀಟರ್‌ ಹ್ಯಾಂಡ್ ಸ್ಯಾನಿಟೈಸರ್ 192 ರೂ, 200 ಎಂಎಲ್‌ಗೆ 98 ರೂಪಾಯಿ ಮತ್ತು 100 ಎಂಎಲ್‌ಗೆ 55 ರೂಪಾಯಿ
ಆಕ್ಸಿಜನ್ ಮಾಸ್ಕ್ – 54 ರೂಪಾಯಿ
ಪಲ್ಸ್ ಆಕ್ಸಿಮೀಟರ್ – 1500 ರೂಪಾಯಿ

ದರ ಪಟ್ಟಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜನರಿಗೆ ತಿಳಿಸಿದ್ದಾರೆ. ಜೊತೆಗೆ ಮೇ 23 ರವರೆಗೆ ಲಾಕ್‌ಡೌನ್ ವಿಸ್ತರಿಸಿರುವ ಕೇರಳದಲ್ಲಿ ಜೂನ್ ತಿಂಗಳಲ್ಲೂ ದಿನಸಿ ಕಿಟ್ ವಿತರಣೆ ಮುಂದುವರೆಯಲಿದೆ ಎಂದಿದ್ದಾರೆ.

“ಲಾಕ್‌ಡೌನ್ ಅನ್ನು ಮೇ 23 ರವರೆಗೆ ವಿಸ್ತರಿಸಲಾಗಿದೆ .ತಿರುವನಂತಪುರಂ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ವಿಧಿಸಲಾಗಿದೆ. ಜೂನ್‌ನಲ್ಲಿಯೂ ಉಚಿತ ದಿನಸಿ ಕಿಟ್‌ಗಳನ್ನೂ ವಿತರಿಸಲಾಗುತ್ತದೆ.  823.23 ಕೋಟಿ ಹಣವನ್ನು ಮೇ ತಿಂಗಳಲ್ಲಿ ವೆಲ್‌ಫೇರ್‌ ಪಿಂಚಣಿಗಳಾಗಿ ವಿತರಿಸಲಾಗುವುದು. ವೆಲ್‌ಫೇರ್‌ ಬೋರ್ಡ್ ಸದಸ್ಯರಿಗೆ 1,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ತೌಕ್ತೆ ಚಂಡಮಾರುತ ಭೀತಿ: ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ NDRF ತಂಡ ನಿಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...