Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನದ ವತಿಯಿಂದ ರಾಜ್ಯದಾದ್ಯಂತ ಮನೆ ಮುಂದೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ವಾರದ ಹಿಂದೆ 400 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರು ಮತ್ತು ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದರು. ಸಣ್ಣ ಸಂಖ್ಯೆಯ ಬೆಡ್‌ಗಳನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಉಳಿದ ಯಾವ ಕೆಲಸಗಳನ್ನು ಮಾಡಿಲ್ಲ ಮತ್ತು ಕನಿಷ್ಟ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಸರ್ಕಾರದ ಸಂವೇದನಾಶೂನ್ಯ ಧೋರಣೆಯನ್ನು ಖಂಡಿಸಿ, ಜನರ ಜೀವ ಮತ್ತು ಜೀವನ ಉಳಿಸುವ ದಿಟ್ಟ ಕ್ರಮಗಳಿಗೆ ಮುಂದಾಗಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಊರುಗಳಲ್ಲೂ ಆಕ್ಸಿಜನ್ ಬೆಡ್ ಹೆಚ್ಚಿಸಿ, ಕೂಡಲೇ ಎಲ್ಲರಿಗೂ ಉಚಿತ ಲಸಿಕೆ ನೀಡಿರಿ, ಬಡ ಕುಟುಂಬಗಳಿಗೆ ಸಮಗ್ರ ಪಡಿತರ ವಿತರಿಸಿ, ಕೆಲಸವಿಲ್ಲದ ಕುಟುಂಬಗಳಿಗೆ ಕೋವಿಡ್ ನೆರವು ಧನ ನೀಡಿ, ಮಡಿದವರ ಕುಟುಂಬಕ್ಕೆ ಪರಿಹಾರ ಕೊಡಿ ಎಂಬುದು ನಮ್ಮ ಹಕ್ಕೊತ್ತಾಯಗಳಾಗಿವೆ ಎಂದು ಜನಾಗ್ರಹ ಆಂದೋಲನದ ವಕ್ತಾರರಾದ ಹೋರಾಟಗಾರ ಕೆ.ಎಲ್ ಅಶೋಕ್ ತಿಳಿಸಿದ್ದಾರೆ.

“ಸರ್ಕಾರದ ಮೇಲೆ ಒತ್ತಡ ತರುವ ಭಾಗವಾಗಿ ಇಂದು ರಾಜ್ಯದ ಬಹುತೇಕ ಜಿಲ್ಲಾ, ತಾಲ್ಲೂಕುಗಳಲ್ಲಿ ಜನರು ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಸರ್ಕಾರ ಈಗಲೂ ನಮ್ಮ ಪಂಚ ಹಕ್ಕೊತ್ತಾಯಗಳನ್ನು ಈಡೇರಿಸಲು ಮುಂದಾಗದಿದ್ದರೆ ಗಂಭೀರ ಸ್ವರೂಪದ ಹೋರಾಟಕ್ಕೆ ಮುಂದಾಗುವುದು ಅನಿವಾರ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಜನಾಗ್ರಹ ಆಂದೋಲನ ತಿಳಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ಮುಖಂಡರಾದ ಮಾವಳ್ಳಿ ಶಂಕರ್, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಗೌರಿ ಮುಂತಾದವರು ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಫೋಟೊ ಗ್ಯಾಲರಿ ಇಲ್ಲಿದೆ.

ದಾವಣಗೆರೆಯಲ್ಲಿ ಮಹಿಳೆಯರ ಕೂಗು..
ಕೆ.ಆರ್ ನಗರದಲ್ಲಿ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ
ವಿಜಯಪುರದಲ್ಲಿ ಯುವಜನರ ಆಗ್ರಹ
ಶಿವಮೊಗ್ಗದಲ್ಲಿ ಸರ್ಕಾರದ ಮೇಲೆ ಒತ್ತಡ
ಚನ್ನಗಿರಿ ಕಾರ್ಮಿಕರಿಂದ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಾಗರೀಕರ ಒತ್ತಾಯ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿಗಳಿಂದ ಸರ್ಕಾರಕ್ಕೆ ಆಗ್ರಹ
ಬಿ.ಟಿ ಲಲಿತಾ ನಾಯಕ್‌ರವರ ಮನೆ ಮುಂದೆ ಪ್ರತಿಭಟನೆ
ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ಪ್ರತಿಭಟನೆ
ಬೆಣ್ಣಿಹಳ್ಳಿ, ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ
ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅನ್ನಭಾಗ್ಯ ಪಡಿತರ ಜಾರಿ ಮಾಡುವ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

(ವರದಿಯನ್ನು ಅಪ್ಡೇಟ್‌ ಮಾಡಲಾಗುತ್ತದೆ.)


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...