Homeಕರ್ನಾಟಕಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

’ಹೆಣ್ಣು ಮಕ್ಕಳಿಗೆ ನ್ಯಾಯ ನೀಡುವ ಬದಲು ಇಬ್ಬರ ಕುಟುಂಬಕ್ಕೆ ಗ್ರಾಮದಲ್ಲಿ ಪಂಚಾಯಿತಿ ನಡೆಸಿ, ಬೆದರಿಕೆ ಹಾಕಿದ್ದಾರೆ"

- Advertisement -
- Advertisement -

ದೇಶವೇ ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವಾಗಲೂ ದಲಿತರ ಮೇಲಿನ ದೌರ್ಜನ್ಯ ಮಾತ್ರ ಕಡಿಮೆಯಾಗಿಲ್ಲ. ವಿಜಯಪುರದ ಬಸವನಬಾಗೇವಾಡಿಯಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಬಾವಿಗೆ ಎಸೆದು ಕೊಲೆ ಮಾಡಿರುವ ದುರಂತ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದ 14 ಮತ್ತು 15 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರು ಕಾಣೆಯಾಗಿದ್ದರು. ಕಾಣೆಯಾದ ಎರಡು ದಿನಗಳ ನಂತರ ಇಬ್ಬರ ಮೃತ ದೇಹಗಳು ಕೈ ಕಟ್ಟಿದ ಸ್ಥಿತಿಯಲ್ಲಿ ಬಾವಿಯೊಂದರಲ್ಲಿ ಪತ್ತೆಯಾಗಿವೆ.

ಅದೇ ಊರಿನ ಯುವಕ ಹಬ್ಬು ಮೈಹಿಬೂಬಸಾಬ ಗುಳಬಾಳ ಎಂಬುವವನು ಕಳೆದ 6 ತಿಂಗಳಿನಿಂದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಹಿಂಸಿಸುತ್ತಿದ್ದ. ಆತನೆ ತನ್ನ ತಂಗಿ ಮತ್ತು ಆಕೆಯ ಸ್ನೇಹಿತೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಮೃತಳ ಸಹೋದರ ದೂರು ನೀಡಿದ್ದಾರೆ. ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಬಸವನಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಈ ಗ್ರಾಮದ ಬಾಲಕಿಯರು ಮೇ 12 ರ ಮಧ್ಯಾಹ್ನ ಕಾಣೆಯಾಗಿದ್ದರು. ಸ್ನೇಹಿತೆಯ ಮನೆಯಲ್ಲಿ ಇರಬಹುದು ಎಂದು ಎರಡು ಕುಟುಂಬದವರು ಸುಮ್ಮನಿದ್ದರು. ಆದರೆ ಶುಕ್ರವಾರ ಬಾವಿಯೊಂದರಲ್ಲಿ ಇಬ್ಬರ ಕೈಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.

ದುರಂತದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಂಭವ ಯುವಸೇನೆ ಸಂಸ್ಥಾಪಕ ರಮೇಶ್ ಚಕ್ರವರ್ತಿ, “ಘಟನೆ ಕುರಿತು ಫೋಕ್ಸೋ ಕಾಯ್ದೆ ಅಡಿಯಲ್ಲಿ 8 ಜನರ ಮೇಲೆ ಪ್ರಕರಣ ದಾಖಲಾಗಿದೆ. ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ ಜಾಂಭವ ಯುವ ಸೇನಾ ವತಿಯಿಂದ ಪರಿಹಾರ ಮತ್ತು ಸಾಂತ್ವನ ನೀಡಲಾಗಿದೆ. ಕೇಸಿನ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದೇವೆ. ಗೃಹ ಸಚಿವ ಬಸವರಾಜ ಬೊಮ್ಮಯಿ ಅವರ ಬಳಿಯೂ ಮಾತುಕತೆ ನಡೆದಿದೆ. ಸಂಘಟನೆ ಕಡೆಯಿಂದ ಎಲ್ಲಾ ರೀತಿಯ ಸಹಾಯ ಮಾಡಲಾಗುತ್ತಿದೆ. ಇಬ್ಬರು ಮಕ್ಕಳಿಗೆ ನ್ಯಾಯ ದೊರಕುವವರೆಗೆ ನಾವು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನೂ ಬಾಲಕಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ತನಿಖೆ ನಡೆಸಿ, 5 ದಿನಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗದ ಸದಸ್ಯ ಎಚ್.ವೆಂಕಟೇಶ ದೊಡ್ಡೇರಿ ವಿಜಯಪುರ ಜಿಲ್ಲಾಧಿಕಾರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬಿಜಾಪುರ: ಬಸವನಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ ಮಾಡಿ, ಕೈ ಕಟ್ಟಿ ಬಾವಿಗೆ ಎಸೆದು ಕೊಲೆ

“ಮಾದಿಗ ಸಮುದಾಯದ ಇಬ್ಬರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೈಗಳನ್ನು ಕಟ್ಟಿ 20-25 ಅಡಿ ಆಳದ ಬಾವಿಗೆ ಎಸೆದಿದ್ದಾರೆ. ಆದರೆ, ಹೆಣ್ಣು ಮಕ್ಕಳಿಗೆ ನ್ಯಾಯ ನೀಡುವ ಬದಲು ಇಬ್ಬರ ಕುಟುಂಬಕ್ಕೆ ಗ್ರಾಮದಲ್ಲಿ ಪಂಚಾಯಿತಿ ನಡೆಸಿ, ಬೆದರಿಕೆ ಹಾಕಿದ್ದಾರೆ. ಇವರ ಸಾವಿಗೆ ನ್ಯಾಯ ದೊರಕಬೇಕು. ತನಿಖೆಯನ್ನು ಸಿಐಡಿಗೆ ಒಪ್ಪಿಸಬೇಕು. ತನಿಖೆ ಸರಿಯಾಗಿ ನಡೆಯದಿದ್ದರೇ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಪ್ರತಿಭಟನೆ ನಡೆಸಲಾಗುತ್ತದೆ” ಎಂದು  ಜಾಂಭವ ಯುವಸೇನೆ ವಿಜಯಪುರ ಜಿಲ್ಲಾಧ್ಯಕ್ಷ ಮಕ್ಕಪ್ಪ ಬಾಗೇವಾಡಿ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...