Homeಕರ್ನಾಟಕರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

- Advertisement -
- Advertisement -

ಕೊರೊನಾ ಎರಡನೇ ಅಲೆಯಲ್ಲಿ ದೇಶವೇ ಲಸಿಕೆಗಾಗಿ ಆಸ್ಪತ್ರೆಗಳು, ಕೊರೊನಾ ಲಸಿಕಾ ಕೇಂದ್ರಗಳ ಮುಂದೆ ಸಾಲು ನಿಲ್ಲುತ್ತಿದ್ದರೂ ಒಕ್ಕೂಟ ಸರ್ಕಾರ ದೇಶದಲ್ಲಿ ಕೊರೊನಾ ಲಸಿಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಹೇಳುತ್ತಲೇ ಇದೆ. ಕೇಂದ್ರಗಳ ಮುಂದೆ ವ್ಯಾಕ್ಸಿನ್ ನೋ ಸ್ಟಾಕ್ ಬೋರ್ಡ್‌ಗಳು ಕಾಣಿಸುತ್ತಿವೆ. ಇದು ಕರ್ನಾಟಕದಲ್ಲೂ ಆರಂಭವಾಗಿದೆ.

ರಾಜ್ಯದಲ್ಲಿ ಲಸಿಕೆ ಇಲ್ಲ ಎಂಬ ಬೋರ್ಡ್‌ಗಳು ಕಾಣಿಸಲು ಆರಂಭವಾಗಿವೆ. 45 ವರ್ಷಕ್ಕೆ ಮೇಲ್ಪಟ್ಟವರಿಗೆ ಇನ್ನೂ ಎರಡನೇ ಡೋಸ್ ಕೂಡ ನೀಡಲು ಸಾಧ್ಯವಾಗಿಲ್ಲ. 18 ವರ್ಷಕ್ಕೆ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಲಸಿಕಾ ಅಭಿಯಾನ ಆರಂಭವಾಗಿದ್ದರೂ ಇನ್ನೂ ದೊರಕುತ್ತಿಲ್ಲ.

2 ನೇ ಡೋಸ್ ಕೋವಾಕ್ಸಿನ್ ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದೇವೆ ಎಂದು ಬೆಂಗಳೂರಿನ ಸ್ಥಳೀಯರು ಆರೋಪಿಸುತ್ತಿದ್ದರು. ಇದಕ್ಕೆ ಸಾಕ್ಷಿ ಎಂಬಂತೆ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ ಮುಂದೆ ಲಸಿಕೆ ಸ್ಟಾಕ್ ಇಲ್ಲ ಎಂಬ ಬೋರ್ಡ್ ಹಾಕಲಾಗಿದೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? ಎಂದು ಪ್ರಶ್ನಿಸಿ ಪೋಸ್ಟರ್‌, 17 FIR, 15 ಮಂದಿ ಬಂಧನ!

“ನಾನು, ನನ್ನ ತಾಯಿಯ ಕೊರೊನಾ 2 ನೇ ಡೋಸ್ ಪಡೆಯಲು ಬಂದಿದ್ದೇವೆ, ನಾನು ನಿನ್ನೆ ಕೂಡ ಬಂದಿದ್ದೇ, ಕೊವಾಕ್ಸಿನ್ ಲಭ್ಯವಿಲ್ಲ ಎಂದು ಹೇಳಿ ವಾಪಸ್ ಕಳುಹಿಸಿದ್ದರು. ಇಂದು ಕೂಡ ಲಸಿಕೆ ಇಲ್ಲ ಎಂದು ಹೇಳುತ್ತಿದ್ದಾರೆ” ಎಂದು ಲಸಿಕೆ ತೆಗೆದುಕೊಳ್ಳಲು ಬಂದಿದ್ದವರು ಹೇಳಿದ್ದಾರೆ.

“ಲಸಿಕಾ ಕೇಂದ್ರಗಳಲ್ಲಿ ಕೊವಾಕ್ಸಿನ್ ಸ್ಟಾಕ್ ಇಲ್ಲ. ವೆಬ್‌ಸೈಟ್‌ನಲ್ಲಿ ಸುಮಾರು 150 ಲಸಿಕೆಗಳು ಇದೆ ಎಂದು ತೋರಿಸುತ್ತದೆ. ಆದರೆ ಸರಿಯಾದ ಮಾಹಿತಿ ಇಲ್ಲದೇ ಜನ ಪರದಾಡುವಂತಾಗಿದೆ. ವೆಬ್‌ಸೈಟ್‌ನಲ್ಲಿ ಆದರು ಸರಿಯಾದ ಮಾಹಿತಿ ನೀಡಿದರೆ ಕನಿಷ್ಠ ಎಲ್ಲರಿಗೂ ಅದು ತಿಳಿಯುತ್ತದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿಯಂತೆ ಒಟ್ಟು 100 ಕೋಟಿ ರೂಪಾಯಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...