Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...