Homeಮುಖಪುಟವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕೋವಿಡ್ ನಿರ್ವಹಣೆಯ ಕುರಿತು ಮೋದಿ ಸರ್ಕಾರಕ್ಕೆ ಕಾಲ ಕಾಲಕ್ಕೆ ಮುನ್ನೆಚ್ಚರಿಕೆ ನೀಡುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರದ ವೈಫಲ್ಯಗಳನ್ನು ಸಹ ಅಷ್ಟೇ ಕಟುವಾಗಿ ಟೀಕಿಸುತ್ತಿದ್ದಾರೆ. ಅದಕ್ಕೆ ಹೊಸ ಸೇರ್ಪಡೆಯಾಗಿ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳು ಮತ್ತು ಪ್ರಧಾನ ಮಂತ್ರಿ ಇಬ್ಬರೂ ತಮ್ಮ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಮೊದಲ ಅಲೆ ಕಾಣಿಸಿಕೊಂಡಾಗ ಸಾವಿರಾರು ಕೋಟಿ ರೂ ಪಿಎಂ ಕೇರ್ಸ್‌ಗೆ ದೇಣಿಗೆಯಾಗಿ ಬಂದಿತ್ತು. ಅದರಲ್ಲಿ ನೂರಾರು ವೆಂಟಿಲೇಟರ್‌ಗಳನ್ನು ಖರೀದಿಸಿ ರಾಜ್ಯಗಳ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿತ್ತು. ಅವುಗಳಲ್ಲಿ ಬಹುತೇಕ ತಾಂತ್ರಿಕ ಕಾರಣದಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿಯಾಗಿತ್ತು. ಈ ಕುರಿತು ಆಡಿಟ್ ಮತ್ತು ತನಿಖೆ ನಡೆಸುವಂತೆ ಮೋದಿ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಪ್ರಧಾನಿಗೂ ಪಿಎಂ ಕೇರ್ಸ್‌ನಿಂದ ಖರೀದಿಸಲ್ಪಟ್ಟ ವೆಂಟಿಲೇಟರ್‌ಗಳಿಗೂ ಹಲವಾರು ಸಾಮ್ಯತೆಗಳಿವೆ. ಎರಡಕ್ಕೂ ಅತಿಯಾದ ಸುಳ್ಳು ಪ್ರಚಾರ ನೀಡಲಾಯಿತು, ಈ ಎರಡೂ ತಮ್ಮ ಕೆಲಸ ಮಾಡುವಲ್ಲಿ ವಿಫಲವಾಗಿವೆ ಮತ್ತು ಅಗತ್ಯವಿದ್ದಾಗ ಈ ಎರಡನ್ನು ಹುಡುಕುವುದು ಕಷ್ಟ” ಎಂದು ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಬಹಳಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಜ್ಞರ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿದ್ದು, ಲಸಿಕೆ ನೀಡುವಲ್ಲಿ ವಿಫಲರಾಗಿದ್ದು, ಕುಂಭಮೇಳ ಮತ್ತು ಚುಣಾವಣೆಗಳಲ್ಲಿ ನಿರತರಾಗಿದ್ದು ಸೇರಿದಂತೆ ರಾಜ್ಯಗಳಿಗೆ ಅಗತ್ಯವಾಗಿದ್ದ ಆಕ್ಸಿಜನ್, ಔಷಧಿಗಳನ್ನು ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ದೆಹಲಿಯಲ್ಲಿ “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ” ಎಂದು ನೂರಾರು ಪೋಸ್ಟರ್‌ಗಳು ಬ್ಯಾನರ್‌ಗಳು ಕಾಣಿಸಿಕೊಂಡಿದ್ದವು. ಇದರಿಂದ ಕೆಂಡಾಮಂಡಲವಾದ ಕೇಂದ್ರ ಸರ್ಕಾರ 25 ಎಫ್‌ಐಆರ್‌ಗಳನ್ನು ಹಾಕಿ ಹಲವಾರು ಜನರನ್ನು ಬಂಧಿಸಿದೆ. ಅದರಲ್ಲಿ ದಿನಗೂಲಿ ನೌಕರರು, ಆಟೋ ಚಾಲಕರು ಸೇರಿದ್ದಾರೆ. ಅವರಿಗೆ ಬ್ಯಾನರ್‌ನಲ್ಲಿ ಏನಿದೆ ಎಂಬುದು ಸಹ ಗೊತ್ತಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಸಹ ನಿನ್ನೆ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಬ್ಯಾನರ್ ಹಾಕಿದ್ದು ತಪ್ಪೆಂದು ಬಂಧಿಸುವುದಾದರೆ ನನ್ನನ್ನೂ ಬಂಧಿಸಿ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಅನೇಕ ವಿಪಕ್ಷಗಳು “ಮೋದಿಯವರೆ ನಮ್ಮ ಮಕ್ಕಳ ಲಸಿಕೆಯನ್ನು ಏಕೆ ರಫ್ತು ಮಾಡಿದ್ದೀರಿ? ನಮ್ಮನ್ನೂ ಬಂಧಿಸಿ” ಎಂಬ ಪ್ರಚಾರಾಂದೋಲನ ನಡೆಸಿದ್ದರು.


ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...