Homeಅಂತರಾಷ್ಟ್ರೀಯಪ್ರತಿಭಟನೆಯ ಹಕ್ಕಿನ ಬಗ್ಗೆ ‘ಮಿಸ್‌ ಯುನಿವರ್ಸ್’ ವೇದಿಕೆಯಲ್ಲಿ ಮಾತನಾಡಿದ ಭಾರತವನ್ನು ಪ್ರತಿನಿಧಿಸಿದ ಸ್ಪರ್ಧಿ!

ಪ್ರತಿಭಟನೆಯ ಹಕ್ಕಿನ ಬಗ್ಗೆ ‘ಮಿಸ್‌ ಯುನಿವರ್ಸ್’ ವೇದಿಕೆಯಲ್ಲಿ ಮಾತನಾಡಿದ ಭಾರತವನ್ನು ಪ್ರತಿನಿಧಿಸಿದ ಸ್ಪರ್ಧಿ!

- Advertisement -
- Advertisement -

69 ನೇ ‘ಮಿಸ್ ಯೂನಿವರ್ಸ್’ ಸ್ಪರ್ಧೆಯು ಅಮೆರಿಕದ ಫ್ಲೋರಿಡಾದಲ್ಲಿ ಸೋಮವಾರ ನಡೆದಿದ್ದು, ಅಂತಿಮ ಸುತ್ತಿನ ಆಯ್ಕೆಯಲ್ಲಿ 26 ವರ್ಷದ ಮೆಕ್ಸಿಕೊದ ಆಂಡ್ರಿಯಾ ಮೆಜಾ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಬ್ರೆಜಿಲ್‌ನ ಜೂಲಿಯಾ ಗಾಮಾ ಎರಡನೆ ಸ್ಥಾನಕ್ಕೆ ಆಯ್ಕೆಯಾಗಿದ್ದು, ಪೆರುವಿನ ಜಾನಿಕ್ ಮಾಸೆಟಾ ಮೂರನೆ ಸ್ಥಾನಕ್ಕೆ ಹಾಗೂ ಭಾರತವನ್ನು ಪ್ರತಿನಿಧಿಸಿದ್ದ 22 ವರ್ಷದ ಆಡ್ಲೈನ್‌ ಕ್ಯಾಸ್ಟೆಲಿನೊ ನಾಲ್ಕನೆ ಸ್ಥಾನವನ್ನು ಅಲಂಕರಿಸಿದರು.

ಭಾರತವನ್ನು ಪ್ರತಿನಿಧಿಸಿದ್ದ ಆಡ್ಲೈನ್‌ ಕ್ಯಾಸ್ಟೆಲಿನೊ ಅವರಿಗೆ ಅಂತಿಮ ಪ್ರಶ್ನೋತ್ತರ ಸುತ್ತಿನಲ್ಲಿ, “ದೇಶಗಳು ತಮ್ಮ ಆರ್ಥಿಕತೆಯ ಮೇಲೆ ಒತ್ತಡದ ಹೊರತಾಗಿಯೂ ಕೊರೊನಾ ಕಾರಣಕ್ಕಾಗಿ ಲಾಕ್‌ಡೌನ್‌ ಮಾಡಬೇಕೆ ಅಥವಾ ಅವರು ತಮ್ಮ ಗಡಿಗಳನ್ನು ತೆರೆಯಬೇಕೆ” ಎಂದು ಪ್ರಶ್ನಿಸಲಾಯಿತು.

ಇದನ್ನೂ ಓದಿ: ಅಂಬೇಡ್ಕರ್: ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರ

ಇದಕ್ಕೆ ಉತ್ತರಿಸಿದ ಆಡ್ಲೈನ್ ​​ಕ್ಯಾಸ್ಟೆಲಿನೊ, “ಗುಡ್ ಈವ್ನಿಂಗ್ ಯುನಿವರ್ಸ್. ನಾನು ಭಾರತದವಳಾಗಿದ್ದು ಭಾರತವು ಇದೀಗ ಅನುಭವಿಸುತ್ತಿರುವುದಕ್ಕೆ ಸಾಕ್ಷಿಯಾಗಿದ್ದೇನೆ. ಪ್ರೀತಿಪಾತ್ರರ ಆರೋಗ್ಯಕ್ಕಿಂತ ಏನೂ ಮುಖ್ಯವಲ್ಲ ಎಂದು ಅರಿತುಕೊಂಡಿದ್ದೇನೆ. ಆರ್ಥಿಕತೆ ಮತ್ತು ಆರೋಗ್ಯದ ನಡುವಿನ ಸಮತೋಲನವನ್ನು ಕಾಪಾಡಬೇಕು. ಸರ್ಕಾರವು ಜನರೊಂದಿಗೆ ನಿಂತು ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ಇದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಇದರ ನಂತರ ನಡೆದ ‘ಅಂತಿಮ ಹೇಳಿಕೆ’ (ಫೈನಲ್ ಸ್ಟೇಟ್‌ಮೆಂಟ್) ನಲ್ಲಿ ಆಡ್ಲೈನ್‌ ಕ್ಯಾಸ್ಟೆಲಿನೊ ಅವರಿಗೆ, ‘ಅಭಿವ್ಯಕ್ತಿ ಸ್ವಾತಂತ್ಯ್ರ ಮತ್ತು ಪ್ರತಿಭಟಿಸುವ ಹಕ್ಕು’ ಇದರ ಬಗ್ಗೆ ಮಾತನಾಡುವಂತೆ ಕೇಳಲಾಯಿತು.

ಈ ಬಗ್ಗೆ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ನಾವು ಅನೇಕ ಪ್ರತಿಭಟನೆಗಳನ್ನು ನೋಡಿದ್ದೇವೆ. ವಿಶೇಷವಾಗಿ ಮಹಿಳೆಯರು ವರ್ಷದುದ್ದಕ್ಕೂ ಸಮಾನ ಹಕ್ಕುಗಳೊಂದಿಗೆ ನಡೆಸಿದ ಪ್ರತಿಭಟನೆಗಳನ್ನು ನಾನು ಗಮನಸೆಳೆಯಲು ಬಯಸುತ್ತೇನೆ. ಇಂದಿನವರೆಗೂ ಪ್ರತಿಭಟನೆಯಲ್ಲಿ ನಮಗೆ ಮಹಿಳೆಯರ ಕೊರತೆಯಿದೆ. ಅಸಮಾನತೆಯ ವಿರುದ್ದ ಧ್ವನಿ ಎತ್ತಲು ನಮಗೆ ಪ್ರತಿಭಟನೆ ಸಹಾಯ ಮಾಡುತ್ತದೆ. ಇದು ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರು ತಮ್ಮ ಧ್ವನಿಯನ್ನು ಎತ್ತಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿಭಟನೆ ಬಹಳ ಮುಖ್ಯ…” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....