Homeಮುಖಪುಟಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? - ಕಾಂಗ್ರೆಸ್ ಅಭಿಯಾನ

ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

- Advertisement -
- Advertisement -

ಕೊರೊನಾ ವಿರುದ್ಧದ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ, ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? ಎಂಬ ಪೋಸ್ಟರ್‌ ಅಂಟಿಸಿದವರ ಬಂಧನ ವಿಚಾರಕ್ಕೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಈ ಪೋಸ್ಟರ್‌ಗಳ ಪ್ರಕರಣದಲ್ಲಿ ದೆಹಲಿ ಪೊಲೀಸರು 25ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ನಾಯಕರು ಈ ಬಂಧನಗಳ ವಿರುದ್ಧ ಕಾಂಗ್ರೆಸ್ ಅಭಿಯಾನ ಶುರು ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರೊಫೈಲ್ ಪೋಟೋಗಳನ್ನು ಬದಲಿಸಿ, ಇದೇ ಗೋಡೆಬರಹವನ್ನು ಹಾಕಿದ್ದಾರೆ.

ತಮ್ಮ ಪ್ರೊಫೈಲ್ ಫೋಟೋ ಬದಲಿಸಿಕೊಂಡು, ಭಿತ್ತಿಪತ್ರ ಅಂಟಿಸಿದ್ದಕ್ಕಾಗಿ ಸಾರ್ವಜನಿಕರನ್ನು ಬಂಧಿಸಿರುವ ಸರ್ಕಾರದ ವಿರುದ್ದ ಕಿಡಿಕಾರಿರುವ  ರಾಹುಲ್‌ಗಾಂಧಿ ಮತ್ತು ಇತರ ಕಾಂಗ್ರೆಸ್‌ ನಾಯಕರು “ನನ್ನನ್ನೂ ಬಂಧಿಸಿ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ಟೀಕಿಸಿ ಪೋಸ್ಟರ್‌: ‘ನನ್ನನ್ನೂ ಬಂಧಿಸಿ’ ಎಂದ ರಾಹುಲ್‌ಗಾಂಧಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಪ್ರೊಫೈಲ್ ಪೋಟೋ ಬದಲಿಸಿ, ಈ ಅಭಿಯಾನಕ್ಕೆ ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

“ನಾವು ಆಮ್ಲಜನಕವನ್ನು ಕೇಳುತ್ತೇವೆ, ನೀವು ವ್ಯವಹರಿಸುತ್ತಿರಿ..ನಾವು ಲಸಿಕೆ ಕೇಳುತ್ತೇವೆ. ನೀವು ಅದನ್ನು ವ್ಯಾಪಾರ ಮಾಡುತ್ತೀರಿ…ನಂತರ ನಾವು ಪ್ರಶ್ನೆಗಳನ್ನು ಕೇಳುತ್ತೇವೆ…ನೀವು ನಮ್ಮನ್ನು ಬಂಧಿಸುತ್ತೀರ ಎಂದು ಕಾಂಗ್ರೆಸ್ ಟ್ವಿಟ್ ಮಾಡಿದೆ.

ಇತ್ತ ಪೋಸ್ಟರ್‌ಗಳನ್ನು ಅಂಟಿಸಿದ್ದು ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಎಂದು ಆಪ್ ಹೇಳಿದೆ. ಜೊತೆಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ’ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ?’ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಕಾರ್ಯಕರ್ತರ ಕೆಲಸಕ್ಕೆ ಅಮಾಯಕರು, ಬಡವರನ್ನು ಹಿಂಸಿಸಬೇಡಿ. ಈ ಪೋಸ್ಟರ್‌ಗಳನ್ನು ದೆಹಲಿಯಷ್ಟೇ ಅಲ್ಲ ದೇಶಾದ್ಯಂತ ಅಂಟಿಸುತ್ತೇವೆ ಎಂದು ಆಪ್ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...