Homeಕರ್ನಾಟಕಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್‌ಗಳಾಗಿ ಸ್ಮಶಾನ ಕಾರ್ಮಿಕರು ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಕ್ಷಣದ ಅಗತ್ಯತೆಗಳು ಮತ್ತು ದೀರ್ಘಕಾಲಿಕ ಸಮಸ್ಯೆಗಳನ್ನು ಬಗೆ ಹರಿಸಿ ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸಾವುಗಳು ಹೆಚ್ಚಾಗಿರುವ ಈ ಸಂದರ್ಭದಲ್ಲಿ ಹಗಲು- ರಾತ್ರಿ ಚಿತಾಗಾರಗಳು ಮತ್ತು ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾದಿಂದ ಮೃತರಾದವರನ್ನು ಕುಟುಂಬ ಸದಸ್ಯರೇ ದೂರವಿಡುತ್ತಿರುವ ಈ ಸಮಯದಲ್ಲಿ ಚಿತಾಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.

ಸಂಕಷ್ಟದಲ್ಲಿ ಸರ್ಕಾರಕ್ಕೆ ನೆರವಾಗಿರುವ ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ನಟ, ಹೋರಾಟಗಾರ ಚೇತನ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ನಟ ಚೇತನ್ ಬರೆದಿರುವ ಪತ್ರದ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ…

ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು

– ವೈದ್ಯಕೀಯ ವಿಮೆ

– ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ

– ಆದ್ಯತೆಯ ವ್ಯಾಕ್ಸಿನೇಷನ್

– ಈಗಾಗಲೇ ಒದಗಿಸಿರುವ ಪಿಪಿಇ ಕಿಟ್‌ಗಳ ಜೊತೆಗೆ ಕೈಗವಸುಗಳು ಮತ್ತು ಮಾಸ್ಕ್‌ಗಳು

– ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು

– ಕೆಲಸದ ಹೊರೆ ಹೆಚ್ಚಿಗೆಯಾದ ಕಾರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು

– 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು.

– ಇಎಸ್‌ಐ ಮತ್ತು ಪಿಎಸ್‌ಗೆ ಅವಕಾಶ ಕಲ್ಪಿಸಿಕೊಡಬೇಕು.

– ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು.

– ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್‌ಗಳಿಗೆ ಸೀಮಿತಗೊಳಿಸಬೇಕು.

– ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು.

– ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು.

– ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು.

ನಮ್ಮ ಸ್ಮಶಾನ ಕಾರ್ಮಿಕರ ಮತ್ತು ಸಾರ್ವಿಜನಿಕರ ಹಿತದೃಷ್ಟಿಯಿಂದ ನಮ್ಮ ಕರ್ನಾಟಕ ಸರ್ಕಾರ ಈ ನೀತಿಗಳನ್ನು ತಕ್ಷಣವೇ ಜಾರಿಗೆ ತರುತ್ತದೆ ಎಂದು ನಾವು ಭಾವಿಸುತ್ತೇವೆ.

ಎಂದು ನಟ ಚೇತನ್ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...