Homeಕರ್ನಾಟಕ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬ್ಲಾಕ್‌ ಫಂಗಸ್‌‌ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ  ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್‌ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

“ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ  5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

“ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ? ಏಕೆ ಹರಡುತ್ತಿದೆ? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

“ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಚಿಕಿತ್ಸೆ ನೀಡಲು ಬೇಕಾದ ತಯಾರಿಯನ್ನು ಇನ್ನೂ ಮಾಡಿಕೊಂಡಂತೆ ಕಾಣುತ್ತಿಲ್ಲ. ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ ಸರ್ಕಾರ ತಡಮಾಡದೆ ಸೂಕ್ತ ಅಧಿ ಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು  ಆರಂಭಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಬಿ.ವಿ ಶ್ರೀನಿವಾಸ್‌ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...