Homeಮುಖಪುಟಸೋನು ಸೂದ್ ಹೆಸರಲ್ಲಿ ದೇಣಿಗೆ ಎತ್ತುತ್ತಿರುವ ದುಷ್ಕರ್ಮಿಗಳು: ದೂರು ನೀಡುವಂತೆ ನಟನ ಮನವಿ

ಸೋನು ಸೂದ್ ಹೆಸರಲ್ಲಿ ದೇಣಿಗೆ ಎತ್ತುತ್ತಿರುವ ದುಷ್ಕರ್ಮಿಗಳು: ದೂರು ನೀಡುವಂತೆ ನಟನ ಮನವಿ

- Advertisement -
- Advertisement -

ಸೋನು ಸೂದ್.. ಈ ಹೆಸರು ಕಳೆದೊಂದು ವರ್ಷದಿಂದ ಭಾರತದಲ್ಲಿ ಲಕ್ಷಾಂತರ ಜನರ ಪಾಲಿಗೆ ದೇವರಿಗೆ ಸಮ. ಕಳೆದ ವರ್ಷ ನರೇಂದ್ರ ಮೋದಿ ಹೇರಿದ ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಕೊಂಡ ಸಾವಿರಾರು ಜನರನ್ನು ಅವರ ಊರುಗಳಿಗೆ ಸುರಕ್ಷಿತವಾಗಿ ತಲುಪಿಸಿದವರು ಸೋನು ಸೂದ್. ಅಲ್ಲಿಂದ ಇಂದಿನವರೆಗೂ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನೂರಾರು ರೀತಿಯಲ್ಲಿ ಈ ನಟ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕೋವಿಡ್ ಎರಡನೇ ಅಲೆ ಸಾವಿರಾರು ಜನರ ಸಾವುನೋವುಗಳಿಗೆ ಕಾರಣವಾಗುತ್ತಿರುವ ಸಂದರ್ಭದಲ್ಲಿ ಔಷಧಿ ಆಕ್ಸಿಜನ್ ಒದಗಿಸಲು ಸೋನು ಸೂದ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಂತಹ ದುರಂತದ ಸಮಯದಲ್ಲಿಯೂ ಕೆಲವು ದುಷ್ಟರು ಸೋನು ಸೂದ್ ಹೆಸರು ಬಳಸಿಕೊಂಡು ದೇಣಿಗೆ ಎತ್ತಿ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಸೂದ್ ಫೌಂಡೇಶನ್ ಡೋನೆಟ್ ಹೆಸರಿನಲ್ಲಿ ‘ಕೊರೊನಾ ಮಹಾಮಾರಿಯ ವಿರುದ್ಧ ಹೋರಾಡಲು ಒಬ್ಬರು ಮತ್ತೊಬ್ಬರಿಗೆ ಸಹಾಯ ಮಾಡಬೇಕಾದ ಅಗತ್ಯವಿದೆ. ಒಂದು ರೂ ನಿಂದ ಹಿಡಿದು ನಿಮಗೆ ಎಷ್ಟು ಕೊಡಲು ಸಾಧ್ಯ ಅಷ್ಟನ್ನು ದೇಣಿಗೆ ನೀಡಬೇಕೆಂದು ಸೋನು ಸೂದ್ ಫೌಂಡೇಶನ ಟೀಮ್ ನಿಮ್ಮಲ್ಲಿ ಮನವಿ ಮಾಡುತ್ತದೆ’ ಪೋಸ್ಟರ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದಕ್ಕೆ ಸೋನು ಸೂದ್ ಫೋಟೊ ಸಹ ಹಾಕಲಾಗಿದ್ದು ಒಂದು ನಕಲಿ ಫೋನ್ ಪೇ ನಂಬರ್, ಒಂದು ನಕಲಿ ಹೆಲ್ಪ್ ನಂಬರ್ ಅನ್ನು ನೀಡಲಾಗಿದೆ.

ಈ ಕುರಿತು ಸ್ವತಃ ಸೋನು ಸೂದ್ ಫೇಸ್‌ಬುಕ್ ಮತ್ತು ಟ್ವಿಟರ್ ಮೂಲಕ ಇದು ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. “ಈ ರೀತಿಯ ಪೋಸ್ಟರ್ ನಾವು ಮಾಡಿಲ್ಲ ಮತ್ತು ಈ ರೀತಿ ಫೋನ್ ಪೇ ನಂಬರ್ ಮೂಲಕ ನಾವು ದೇಣಿಗೆ ಸಂಗ್ರಹಿಸುತ್ತಿಲ್ಲ. ಈ ಕುರಿತು ಜಾಗರೂಕರಾಗಿರಿ ಮತ್ತು ಯಾರಾದರೂ ನಿಮ್ಮನ್ನು ಈ ಪೋಸ್ಟರ್ ಬಳಸಿ ಹಣ ಕೇಳಿದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ” ಎಂದು ಅವರು ಮನವಿ ಮಾಡಿದ್ದಾರೆ.

ಸೋನು ಸೂದ್ ತಮ್ಮ ಫೌಂಡೇಶನ್ ಮೂಲಕ ಇಂದಿಗೂ ಕೋವಿಡ್ ಔಷಧಿಗಳು ಮತ್ತು ಆಕ್ಸಿಜನ್ ಕಾನ್ಸಟ್ರೇಟರ್‌ಗಳನ್ನು ಒದಗಿಸುವ ಮೂಲಕ ಸಾವಿರಾರು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಈ ಮಾನವೀಯ ಕಾರ್ಯಗಳಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಮೆಚ್ಚಗೆಯ ಮಹಾಪೂರವೇ ಹರಿದುಬರುತ್ತಿದೆ.


ಇದನ್ನೂ ಓದಿ:ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...