Homeಮುಖಪುಟ‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

‘ಹೊಸ ಶಿಕ್ಷಣ ನೀತಿ’ಯ ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ

- Advertisement -
- Advertisement -

ರಾಜ್ಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಆನ್‌ಲೈನ್‌‌ ಸಭೆಯನ್ನು ತಮಿಳುನಾಡು ಸರ್ಕಾರ ಸೋಮವಾರ ಬಹಿಷ್ಕರಿಸಿದೆ. ಕೇಂದ್ರ ಸಚಿವರು ರಾಜ್ಯದ ಸಚಿವರ ಬದಲು ಅಧಿಕಾರಿಗಳೊಂದಿಗೆ ನೇರವಾಗಿ ಸಂವಹನ ನಡೆಸುತ್ತಿರುವುದನ್ನು ಪ್ರತಿಭಟಿಸಿ ತಮಿಳುನಾಡು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದಿಂದ ತಮ್ಮ ಇಲಾಖೆಗೆ ತಿಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪಯ್ಯಮೊಳಿ ಮಾಧ್ಯಮಗಳಿಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದ ಅಧಿಕಾರಿಗಳ ಮಟ್ಟದಲ್ಲಿ ಸಭೆ ಮಾಡುವ ಬದಲು ರಾಜ್ಯ ಸಚಿವರೊಂದಿಗೆ ಚರ್ಚೆ ನಡೆಸಿದರೆ ಉತ್ತಮ ಎಂಬ ಅಂಶವನ್ನು ಕೇಂದ್ರಕ್ಕೆ ಒತ್ತಿಹೇಳಿದ್ದಾರೆ. ಆದರೆ ಅವರ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ‘ನಾರದ ಪ್ರಕರಣ’: ಬಂಗಾಳ ಸಚಿವ ಫಿರ್ಹಾದ್ ಹಕೀಮ್‌ ಸಿಬಿಐ ವಶಕ್ಕೆ

“ಸಚಿವರ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಬೇಕೆಂಬ ನಮ್ಮ ವಿನಂತಿಯ ಹೊರತಾಗಿಯೂ, ಕೇಂದ್ರವು ಅಧಿಕಾರಿಗಳೊಂದಿಗೆ ಮಾತ್ರ ಚರ್ಚೆ ನಡೆಸುವ ಯೋಜನೆಯನ್ನು ಹಾಕಿಕೊಂಡಿದೆ. ಇದನ್ನು ವಿರೋಧಿಸಿ, ನಾವು ಈ ಸಭೆಯನ್ನು ಬಹಿಷ್ಕರಿಸಿದ್ದೇವೆ. ಇದು ನಮ್ಮ ತತ್ವಗಳಿಗೆ ವಿರುದ್ದವಾಗಿರುವುದರಿಂದ ನಾವು ಇದನ್ನು ವಿರೋಧಿಸುತ್ತಿದ್ದೇವೆಯೆ ಹೊರತು, ಕೇಂದ್ರ ಸರ್ಕಾರಕ್ಕೆ ವಿರುದ್ದವಾಗಿ ನಿಲ್ಲಬೇಕು ಎಂಬುವುದು ನಮ್ಮ ಉದ್ದೇಶವಲ್ಲ”ಎಂದು ಸಚಿವರು ಹೇಳಿದ್ದಾರೆ.

ಮೂರು ಭಾಷಾ ನೀತಿ, 3, 5, ಮತ್ತು 8 ನೆ ತರಗತಿಗೆ ಪಬ್ಲಿಕ್ ಪರೀಕ್ಷೆ ಸೇರಿದಂತೆ, ಹೊಸ ಶಿಕ್ಷಣ ನೀತಿ-2020 ಯಲ್ಲಿ ಹಲವು ಸಮಸ್ಯೆಗಳಿವೆ ಎಂದು ಸಚಿವರು ಹೇಳಿದ್ದಾರೆ. ಡಿಎಂಕೆ ಈಗಾಗಲೇ ಹೊಸ ಶಿಕ್ಷಣ ನೀತಿ-2020 ರ ಹಲವು ಅಂಶಗಳನ್ನು ವಿರೋಧಿಸಿದೆ. ಪಕ್ಷ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಕೇಂದ್ರ ಪರಿಗಣಿಸಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ಕೊರೊನಾ ಅವಧಿಯಲ್ಲಿ ಆನ್‌ಲೈನ್ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನುಷ್ಠಾನ ಮತ್ತು ಹನ್ನೆರಡನೇ ತರಗತಿಯ ಪರೀಕ್ಷೆಗಳು ಪ್ರಸ್ತುತ ಸನ್ನಿವೇಶದಲ್ಲಿ ಕಾರ್ಯಸಾಧ್ಯವಾಗಿದೆಯೇ ಎಂಬುದು ಕೇಂದ್ರ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗುತ್ತಿರುವ ಪ್ರಮುಖ ವಿಷಯಗಳು.

ಕೇಂದ್ರ ಸಚಿವರು ಮಂಗಳವಾರ ಕೇಂದ್ರ ವಿಶ್ವವಿದ್ಯಾಲಯಗಳ ಉಪಕುಲಪತಿಗಳೊಂದಿಗೆ ಸಂವಹನ ನಡೆಸಲು ನಿರ್ಧರಿಸಿದ್ದು, ಈ ವಾರದ ಕೊನೆಯಲ್ಲಿ ಐಐಟಿ ಮತ್ತು ಐಐಎಂಗಳ ನಿರ್ದೇಶಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಸ್ಮಶಾನ ಕಾರ್ಮಿಕರ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಈ ಕ್ರಮ ಸ್ವಾಗತಾರ್ಹ. ರಾಜ್ಯ ಸರ್ಕಾರಗಳನ್ನು ಕಡೆಗಣಿಸಿ, ರಾಜ್ಯ ಸರ್ಕಾರಗಳ ಅಧಿಕಾರಿಗಳೊಡನೆ ನೇರ ಸಂಪರ್ಕ ಸಾಧಿಸಿ, ತನ್ನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ಒಕ್ಕೂಟ ಸರ್ಕಾರದ ಈ ಕ್ರಮ, ಹಾಲಿ ಅಸ್ತಿತ್ವದಲ್ಲಿ ಇರುವ ನಮ್ಮ ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯೇತರ ಎಲ್ಲ ರಾಜ್ಯ ಸರ್ಕಾರಗಳೂ, ತಮಿಳುನಾಡಿನ ಈ ಕ್ರಮವನ್ನು ಅನುಸರಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...