Homeಮುಖಪುಟಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ಮೋದಿ ಜನರಿಗೆ ಚಪ್ಪಾಳೆ ತಟ್ಟಲು ಮತ್ತು ಗಂಟೆ ಬಾರಿಸಲು ಕರೆ ನೀಡಿದ್ದನ್ನು ಶಾಸಕ ರಾಕೇಶ್ ರಾಥೋಡ್ ಟೀಕಿಸಿದ್ದರು

- Advertisement -
- Advertisement -

ಶಾಸಕರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನವಿಲ್ಲ. ನಾವು ಮಾಧ್ಯಮಗಳಿಗೆ ಹೆಚ್ಚಿನ ಹೇಳಿಕೆ ನೀಡಿದರೇ, ಮಾತನಾಡಿದರೇ ನಮ್ಮ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಬಹುದು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ತಮ್ಮದೇ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಲಖನೌದಿಂದ 80 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಿಜೆಪಿ ಶಾಸಕ ರಾಕೇಶ್ ರಾಥೋಡ್ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ನಮ್ಮಂತಹ ಶಾಸಕರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನವಿಲ್ಲ, ನಾವು ಮಾಧ್ಯಮಗಳಿಗೆ ನೀಡುವ ಹೆಚ್ಚಿನ ಹೇಳಿಕೆಗಳು, ನಮ್ಮ ಮಾತುಗಳೂ ‘ದೇಶದ್ರೋಹ ಆರೋಪಕ್ಕೆ ಕಾರಣವಾಗಬಹುದು’ ಎಂದಿದ್ದಾರೆ.

ಸೀತಾಪುರದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರವನ್ನು ಮತ್ತೆ ಕಾರ್ಯಗತಗೊಳಿಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಾಸಕ ರಾಕೇಶ್ ರಾಥೋಡ್, “ನಾನು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇನೆ, ಆದರೆ ಶಾಸಕರಿಗೆ ಯಾವ ಸ್ಥಾನಮಾನವಿದೆ?. ನಾನು ಹೆಚ್ಚು ಮಾತನಾಡಿದರೆ, ನನ್ನ ವಿರುದ್ಧ ದೇಶದ್ರೋಹ ಆರೋಪ ಹೊರಿಸಬಹುದು” ಎಂದು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ತಮ್ಮದೆ ಪಕ್ಷದ ಸರ್ಕಾರ ಆಡಳಿತ ನಡೆಸುತ್ತಿರುವಾಗ ಶಾಸಕರಾಗಿ ತಮ್ಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, “ಇಲ್ಲಿ ಶಾಸಕರು ತಮ್ಮ ಮನಸ್ಸನ್ನು ಬಿಚ್ಚಿ ಮಾತನಾಡಬಲ್ಲರು ಎಂದು ನಿಮಗೆ ಅನ್ನಿಸುತ್ತಿದೆಯೇ? ನಾನು ಈ ಕುರಿತು ಹಿಂದೆಯೂ ಪ್ರಶ್ನೆ ಮಾಡಿದ್ದೇನೆಂದು ನಿಮಗೆ ತಿಳಿದಿಲ್ಲವೇ” ಎಂದಿದ್ದಾರೆ.

ಮೊದಲ ಬಾರಿಗೆ ಶಾಸಕರಾಗಿರುವ ರಾಕೇಶ್ ರಾಥೋಡ್ 2017 ರ ವಿಧಾನಸಭಾ ಚುನಾವಣೆಗೆ ಮೊದಲು ಬಿಜೆಪಿಗೆ ಸೇರಿದ್ದರು. ಮಾಯಾವತಿಯವರ ಬಹುಜನ ಸಮಾಜ ಪಕ್ಷದೊಂದಿಗೆ ನಂಟು ಹೊಂದಿದ್ದ ಇವರು,  ಈ ಹಿಂದೆ ಸ್ವತಂತ್ರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಕಳೆದ ವರ್ಷ, ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ಮೋದಿ ಜನರಿಗೆ ಚಪ್ಪಾಳೆ ತಟ್ಟಲು ಮತ್ತು ಗಂಟೆ ಬಾರಿಸಲು ಕರೆ ನೀಡಿದ್ದನ್ನು ಟೀಕಿಸಿದ್ದರು. ಮೋದಿಯವರನ್ನು ಟೀಕಿಸಿದ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಜೆಪಿ ಈ ಕುರಿತು ಸ್ಪಷ್ಟನೆ ನೀಡುವಂತೆ ರಾಕೇಶ್ ರಾಥೋಡ್ ಅವರನ್ನು ಕೇಳಿತ್ತು.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳು ಅಧಿಕವಾಗುತ್ತಿದ್ದರೂ ಕೂಡ ಸರಿಯಾದ ಮಾಹಿತಿಯನ್ನು ರಾಜ್ಯ ಸರ್ಕಾರ ಮುಚ್ಚಿಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಜೊತೆಗೆ ಆಕ್ಸಿಜನ್ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೆ ಇಟ್ಟವರಿಗೆ ಬೆದರಿಕೆ ಒಡ್ಡಲಾಗಿತ್ತು.


ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...