Homeಮುಖಪುಟಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ಮೋದಿ ಜನರಿಗೆ ಚಪ್ಪಾಳೆ ತಟ್ಟಲು ಮತ್ತು ಗಂಟೆ ಬಾರಿಸಲು ಕರೆ ನೀಡಿದ್ದನ್ನು ಶಾಸಕ ರಾಕೇಶ್ ರಾಥೋಡ್ ಟೀಕಿಸಿದ್ದರು

- Advertisement -
- Advertisement -

ಶಾಸಕರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನವಿಲ್ಲ. ನಾವು ಮಾಧ್ಯಮಗಳಿಗೆ ಹೆಚ್ಚಿನ ಹೇಳಿಕೆ ನೀಡಿದರೇ, ಮಾತನಾಡಿದರೇ ನಮ್ಮ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಬಹುದು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ತಮ್ಮದೇ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಲಖನೌದಿಂದ 80 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಿಜೆಪಿ ಶಾಸಕ ರಾಕೇಶ್ ರಾಥೋಡ್ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ನಮ್ಮಂತಹ ಶಾಸಕರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನವಿಲ್ಲ, ನಾವು ಮಾಧ್ಯಮಗಳಿಗೆ ನೀಡುವ ಹೆಚ್ಚಿನ ಹೇಳಿಕೆಗಳು, ನಮ್ಮ ಮಾತುಗಳೂ ‘ದೇಶದ್ರೋಹ ಆರೋಪಕ್ಕೆ ಕಾರಣವಾಗಬಹುದು’ ಎಂದಿದ್ದಾರೆ.

ಸೀತಾಪುರದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರವನ್ನು ಮತ್ತೆ ಕಾರ್ಯಗತಗೊಳಿಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಾಸಕ ರಾಕೇಶ್ ರಾಥೋಡ್, “ನಾನು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇನೆ, ಆದರೆ ಶಾಸಕರಿಗೆ ಯಾವ ಸ್ಥಾನಮಾನವಿದೆ?. ನಾನು ಹೆಚ್ಚು ಮಾತನಾಡಿದರೆ, ನನ್ನ ವಿರುದ್ಧ ದೇಶದ್ರೋಹ ಆರೋಪ ಹೊರಿಸಬಹುದು” ಎಂದು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ತಮ್ಮದೆ ಪಕ್ಷದ ಸರ್ಕಾರ ಆಡಳಿತ ನಡೆಸುತ್ತಿರುವಾಗ ಶಾಸಕರಾಗಿ ತಮ್ಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, “ಇಲ್ಲಿ ಶಾಸಕರು ತಮ್ಮ ಮನಸ್ಸನ್ನು ಬಿಚ್ಚಿ ಮಾತನಾಡಬಲ್ಲರು ಎಂದು ನಿಮಗೆ ಅನ್ನಿಸುತ್ತಿದೆಯೇ? ನಾನು ಈ ಕುರಿತು ಹಿಂದೆಯೂ ಪ್ರಶ್ನೆ ಮಾಡಿದ್ದೇನೆಂದು ನಿಮಗೆ ತಿಳಿದಿಲ್ಲವೇ” ಎಂದಿದ್ದಾರೆ.

ಮೊದಲ ಬಾರಿಗೆ ಶಾಸಕರಾಗಿರುವ ರಾಕೇಶ್ ರಾಥೋಡ್ 2017 ರ ವಿಧಾನಸಭಾ ಚುನಾವಣೆಗೆ ಮೊದಲು ಬಿಜೆಪಿಗೆ ಸೇರಿದ್ದರು. ಮಾಯಾವತಿಯವರ ಬಹುಜನ ಸಮಾಜ ಪಕ್ಷದೊಂದಿಗೆ ನಂಟು ಹೊಂದಿದ್ದ ಇವರು,  ಈ ಹಿಂದೆ ಸ್ವತಂತ್ರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಕಳೆದ ವರ್ಷ, ಕೊರೊನಾ ವೈರಸ್ ಸಾಂಕ್ರಾಮಿಕದ ಆರಂಭದಲ್ಲಿ ಪ್ರಧಾನಿ ಮೋದಿ ಜನರಿಗೆ ಚಪ್ಪಾಳೆ ತಟ್ಟಲು ಮತ್ತು ಗಂಟೆ ಬಾರಿಸಲು ಕರೆ ನೀಡಿದ್ದನ್ನು ಟೀಕಿಸಿದ್ದರು. ಮೋದಿಯವರನ್ನು ಟೀಕಿಸಿದ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಜೆಪಿ ಈ ಕುರಿತು ಸ್ಪಷ್ಟನೆ ನೀಡುವಂತೆ ರಾಕೇಶ್ ರಾಥೋಡ್ ಅವರನ್ನು ಕೇಳಿತ್ತು.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳು ಅಧಿಕವಾಗುತ್ತಿದ್ದರೂ ಕೂಡ ಸರಿಯಾದ ಮಾಹಿತಿಯನ್ನು ರಾಜ್ಯ ಸರ್ಕಾರ ಮುಚ್ಚಿಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಜೊತೆಗೆ ಆಕ್ಸಿಜನ್ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೆ ಇಟ್ಟವರಿಗೆ ಬೆದರಿಕೆ ಒಡ್ಡಲಾಗಿತ್ತು.


ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...