Homeಕರೋನಾ ತಲ್ಲಣಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

- Advertisement -
- Advertisement -

ಮರದ ಕೆಳಗೆ ಹಾಸಿಗೆಯ ಮೇಲೆ ಮಲಗಿರುವ ಕೊರೊನಾ ಸೋಂಕಿತ ರೋಗಿಗಳು, ಮರದ ಕೊಂಬೆಯಿಂದ ನೇತಾಡುವ ಗ್ಲೂಕೋಸ್ ಬಾಟಲ್‌ಗಳು, ಸುತ್ತಲೂ ಮೇಯುತ್ತಿರುವ ಹಸುಗಳು, ನೆಲದ ಮೇಲೆ ಅಲ್ಲಲ್ಲಿ ಬಿದ್ದಿರುವ ಸಿರಂಜ್‌ಗಳು ಮತ್ತು ಖಾಲಿ ಔಷಧಿ ಬಾಟಲ್‌ಗಳು…ಇಂತಹ ಒಂದು ದೃಶ್ಯಕ್ಕೆ ಸಾಕ್ಷಿಯಾಗಿರುವುದು ಉತ್ತರ ಪ್ರದೇಶದ ಹಳ್ಳಿ.

ಕೊರೊನಾ ತೀವ್ರವಾಗಿ ಆವರಿಸಿರುವ ಉತ್ತರ ಪ್ರದೇಶದಲ್ಲಿ ಹಳ್ಳಿಗಳ ಸ್ಥಿತಿ ನಿಜಕ್ಕೂ ದಾರುಣವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ 90 ನಿಮಿಷಗಳ ಪ್ರಯಾಣದ ದೂರವಿರುವ ಮೇವ್ಲಾ ಗೋಪಾಲ್‌ಗಢದಲ್ಲಿ ವೈದ್ಯರು ಮತ್ತು ಆರೋಗ್ಯ ಸೌಲಭ್ಯ ಯಾವುದೂ ಇಲ್ಲ.

ಈ ಹಳ್ಳಿಗೆ ಹತ್ತಿರದಲ್ಲಿ ಸರ್ಕಾರಿ ಆಸ್ಪತ್ರೆ ಇದೆ ಆದರೆ ಅದರಲ್ಲಿ ಕೊರೊನಾ ಸೋಂಕಿತರಿಗೆ ಹಾಸಿಗೆಗಳು ಲಭ್ಯವಿಲ್ಲ ಎನ್ನಲಾಗಿದೆ. ಇತ್ತ ಹಳ್ಳಿಯ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವಷ್ಟು ತಾವು ಆರ್ಥಿಕವಾಗಿ ಗಟ್ಟಿಯಾಗಿಲ್ಲ ಎಂದು ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಸರ್ಕಾರಿ ವೈದ್ಯರು ಇಲ್ಲ, ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಆಗದ ಇಲ್ಲಿನ ಜನರಿಗೆ ಹಳ್ಳಿಯ ವೈದ್ಯರೇ ತೆರೆದ ಚಿಕಿತ್ಸಾಲಯವನ್ನು (open-air clinic) ಸ್ಥಾಪಿಸಿದ್ದಾರೆ. ಅಲ್ಲಿ ಈ ವೈದ್ಯರು ಕೊರೊನಾ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಗ್ಲೂಕೋಸ್ ಮತ್ತು ಇತರ ಚಿಕಿತ್ಸೆಗಳನ್ನು ನೀಡುತ್ತಾರೆ.

ಔಷಧೀಯ ಗುಣಗಳಿಗೆ ಹೆಸರುವಾಸಿಯಾದ ಬೇವಿನ ಮರದ ಕೆಳಗೆ ಮಲಗಿರುವುದು ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಗ್ರಾಮಸ್ಥರು ನಂಬುತ್ತಾರೆ. ಈ ನಂಬಿಕೆಗೆ ಅಥವಾ ಇತರ ಕೆಲವು ಪರಿಹಾರಗಳಿಗೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

In Village's New Hospital, Glucose Drips Hanging from Neem Trees for COVID  Patients Below - The Wire Science

ಇದನ್ನೂ ಓದಿ: ‘ಭಾರತದಲ್ಲಿ ಕೊರೊನಾ ಇಳಿಮುಖ’- ಅಂಕಿ ಅಂಶ ವಿಶ್ವಾಸಾರ್ಹವಲ್ಲವೆಂದ WHO ವಿಜ್ಞಾನಿ

ಕೆಲವು ದಿನಗಳ ಹಿಂದೆ ಜ್ವರದಿಂದ ತಮ್ಮ 74 ವರ್ಷದ ತಂದೆಯನ್ನು ಕಳೆದುಕೊಂಡಿರುವ ಗ್ರಾಮಸ್ಥ ಸಂಜಯ್ ಸಿಂಗ್, ತನ್ನ ತಂದೆಗೆ ಕೊರೊನಾ ಟೆಸ್ಟ್ ಮಾಡಲಿಲ್ಲ. ಜ್ವರ ಬಂದು ಎರಡು ದಿನಗಳಲ್ಲಿ ನಿಧನರಾದರು. ಜನರು ಸಾಯುತ್ತಿದ್ದಾರೆ. ಆದರೆ, ನಮ್ಮನ್ನು ನೋಡಿಕೊಳ್ಳಲು ಇಲ್ಲಿ ಯಾರೂ ಇಲ್ಲ” ಎಂದು ಹೇಳಿದ್ದಾರೆ.

“ಸತ್ಯವೇನೆಂದರೇ, ಹಳ್ಳಿಯಲ್ಲಿ ಯಾವುದೇ ಕೊರೊನಾ ಪರೀಕ್ಷೆ ನಡೆದಿಲ್ಲ. ನಾವು ಟೆಸ್ಟ್ ಮಾಡಿಸಲು ಪ್ರಯತ್ನಿಸಿದ್ದೇವೆ. ಆದರೆ ಅಧಿಕಾರಿಗಳು ಸಾಕಷ್ಟು ಸಿಬ್ಬಂದಿ ಇಲ್ಲ ಎಂದು ನಮಗೆ ತಿಳಿಸಿದ್ದಾರೆ” ಎಂದು ಗ್ರಾಮದ ಮಾಜಿ ಮುಖ್ಯಸ್ಥ 48 ವರ್ಷದ ಯೋಗೇಶ್ ತಲನ್ ಮಾಹಿತಿ ನೀಡಿದ್ದಾರೆ.

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂಬ ಟೀಕೆಗಳನ್ನು ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಮಾಡಿದ ಭಾಷಣದಲ್ಲಿ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುತ್ತಿದೆ ಮತ್ತು ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...