Homeಕರ್ನಾಟಕದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ದೌರ್ಜನ್ಯ ಎಸಗಿದ ಸಬ್ ಇನ್ಸ್‌ಪೆಕ್ಟರ್‌ರವರನ್ನು ಕೇವಲ ವರ್ಗಾವಣೆ ಮಾಡಿ ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸರು ಕಣ್ಣೊರೆಸುವ ತಂತ್ರ ಮಾಡಿ ಕೈತೊಳೆದು ಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -
- Advertisement -

ಗೋಣೀಬೀಡು ಠಾಣೆ ಪಿಎಸ್‌ಐ ತನ್ನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮೂಡಿಗೆರೆ ಬಳಿಯ ಕಿರಗುಂದದ ದಲಿತ ಯುವಕ ಕೆ.ಎಲ್.ಪುನೀತ್ ಆರೋಪಿಸಿದ್ದಾರೆ. ಈ ಕುರಿತು ಪಿಎಸ್‌ಐ ಮೇಲೆ ಕ್ರಮ ಕೈಗೊಳ್ಳುವಂತೆ ಹಿರಿಯ ಪೋಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ನಮ್ಮ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆಯೋರ್ವರ ಜೊತೆ ನನಗೆ ಅಕ್ರಮ ಸಂಬಂಧವಿದೆ ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು. ಆದರೆ ನಾನು ತಪ್ಪು ಮಾಡಿಲ್ಲವೆಂದು ಹೇಳಿದ್ದರಿಂದ ನನ್ನ ಮೇಲೆ ಈ ಕ್ರೂರ ಹಲ್ಲೆ ನಡೆಸಲಾಯಿತು ಎಂದು ಪುನೀತ್ ಹೇಳಿದ್ದಾರೆ.

ಮೇ10ರಂದು ಗ್ರಾಮದ ಕೆಲವರು ಬಂದು ನನ್ನ ಮೇಲೆ ಹಲ್ಲೆ ನಡೆಸಲು ಮುಂದಾದಾಗ ನಾನು ಸಹಾಯಕ್ಕಾಗಿ ಪೋಲೀಸ್ ಹೆಲ್ಪ್‌ಲೈನ್ 112ಕ್ಕೆ ಕರೆ ಮಾಡಿದ್ದೆ. ನಂತರ ಸ್ಥಳಕ್ಕೆ ಬಂದ ಗೋಣೀಬೀಡು ಪಿಎಸ್‌ಐ ಅರ್ಜುನ್ ಅವರು ತನ್ನ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ್ದಲ್ಲದೇ ಪೋಲೀಸ್ ಠಾಣೆಯಲ್ಲಿ ನನ್ನ ಬಟ್ಟೆ ಬಿಚ್ಚಿಸಿ ಕೈಕಾಲು ಕಟ್ಟಿ ಮೇಲಕ್ಕೆ ತೂಗುಹಾಕಿ ಪಾದ ಹಾಗೂ ಮೈಕೈಗೆ ತೀವ್ರ ಹಲ್ಲೆ ನಡೆಸಿದ್ದಾರೆ. ಮೂತ್ರ ಕುಡಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆಮಾಡಿದ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ ಹಾಗೂ ಎಸ್‌ಪಿ ಎಂ.ಹೆಚ್.ಅಕ್ಷಯ್ ಅವರಿಗೆ ದೂರು ನೀಡಿದ್ದೇನೆ ಎಂದು ಕೆ.ಎಲ್.ಪುನೀತ್ ತಿಳಿಸಿದ್ದಾರೆ.

ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು ಈ ಬಗ್ಗೆ ಪರೀಶಿಲನೆ ನಡೆಸಲು ಡಿವೈಎಸ್‌ಪಿಗೆ ಸೂಚಿಸಲಾಗಿದೆ ಎಂದು ಎಸ್‌ಪಿ ಅಕ್ಷಯ್ ಎಂ ಹಕಾಯ್ ಮಾಹಿತಿ ನೀಡಿದ್ದಾರೆ.

ಘಟನೆಯನ್ನು ಜಿಲ್ಲಾ ದಲಿತರ ಸಂಘರ್ಷ ಸಮಿತಿ ಮುಖಂಡ ರತನ್ ಊರುಬಗೆ ಖಂಡಿಸಿದ್ದು ಪಿಎಸ್‌ಐ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಈ ಹಿಂದೆಯೇ ಹಲವು ದೂರುಗಳಿರುವ ಪಿಎಸ್‌ಐ ಅನ್ನು ವರ್ಗಾವಣೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸೂಚಿಸಿದ್ದೇನೆ ಎಂದು ಹೇಳಿದ್ದರು. ಅದರಂತೆ ಪಿಎಸ್‌ಐ ಅರ್ಜುನ್‌ರವರನ್ನು ವರ್ಗಾವಣೆ ಮಾಡಲಾಗಿದೆ.

ದೌರ್ಜನ್ಯ ಎಸಗಿದ ಸಬ್ ಇನ್ಸ್‌ಪೆಕ್ಟರ್‌ರವರನ್ನು ಕೇವಲ ವರ್ಗಾವಣೆ ಮಾಡಿ ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸರು ಕ್ರಮ ಜರುಗಿಸಿದಂತೆ ಕಣ್ಣೊರೆಸುವ ತಂತ್ರ ಮಾಡಿ ಕೈತೊಳೆದು ಕೊಂಡಿದ್ದಾರೆ. ಇದು ಸರಿಯಲ್ಲ, ಯುವಕನೊಂದಿಗೆ ಅನಾಗರಿಕವಾಗಿ ನಡೆದುಕೊಂಡು ಅತ್ಯಂತ ಹೇಯ ಕೃತ್ಯ ಎಸಗಿರುವ ಪಿಎಸ್‌ಐ ಅನ್ನು ತಕ್ಷಣ ಅಮಾನತ್ತು ಮಾಡಿ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೇಳಿಬಂದಿದೆ.

“ಮೂಡಿಗೆರೆಯ ಪೋಲೀಸ್ ಇನ್ಸ್ಪೆಕ್ಟರ್ ಮಾಡಿದ್ದರೆನ್ನಲಾದ ಈ ಕೃತ್ಯ ಅತ್ಯಂತ ಹೇಯಕರ ಮತ್ತು ವಿಕೃತ. ಇಂತಹ ಅಮಾನವೀಯವಾದ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಲೇಬೇಕು. ಇದು ಉಳಿದ ಅಧಿಕಾರಿಗಳಿಗೆ ಪಾಠವಾಗಬೇಕು. ನಾಗರೀಕರನ್ನು ಜಾತೀಯ ಹಿನ್ನೆಲೆಯಲ್ಲಿ ನೋಡುವುದು, ನಿಂದುಸುವುದು ಮತ್ತು ಆ ಕಾರಣದಿಂದ ಸರಕಾರದ ಕಚೇರಿಯಲ್ಲೇ ಹಿಂಸಾತ್ಮಕ ದೌರ್ಜನ್ಯ ಎಸಗುವುದು ಗುರುತರ ಅಪರಾಧ” ಎಂದು ಸಂಕಥನ ಸಂಪಾದಕರಾದ ರಾಜೇಂದ್ರ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...