Homeಅಂತರಾಷ್ಟ್ರೀಯಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ...

- Advertisement -
- Advertisement -

ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಲವರು ಶಾಂತಿಗಾಗಿ ಪ್ರಾರ್ಥಿಸುತ್ತಿರುವಾಗಲೇ ಕೆಲವರು ಐ ಸ್ಟ್ಯಾಂಡ್ ವಿತ್ ಇಸ್ರೇಲ್ ಎಂದು ಹಿಂಸಾಚಾರವನ್ನು ಬೆಂಬಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಇಸ್ರೇಲ್ ನ ಅತೀ ಹೆಚ್ಚು ಪ್ರಸರಣಾ ಸಂಖ್ಯೆ ಹೊಂದಿರುವ HAARETZ (ಭೂಮಿ) ಪತ್ರಿಕೆ ಅತ್ಯುತ್ತಮ ಸಂಪಾಕೀಯ ಪ್ರಕಟಿಸಿದೆ. HAARETZ ನ ಪ್ರಧಾನ ಸಂಪಾದಕ ಅಲುಫ್ ಬೆನ್ ಬರೆದ ಸಂಪಾದಕೀಯವನ್ನು ಕನ್ನಡದ ಜನಪರ ಪತ್ರಕರ್ತ ನವೀನ್ ಸೂರಿಂಜೆ ಅನುವಾದಿಸಿದ್ದಾರೆ. ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

ಕಳೆದ ಹಲವು ದಿನಗಳಿಂದ ಇಸ್ರೇಲ್‌ನಲ್ಲಿ ಅರಬ್ಬರು ಮತ್ತು ಯಹೂದಿಗಳ ನಡುವಿನ ನೋವಿನ ಘರ್ಷಣೆಯ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಹೊರತುಪಡಿಸಿ ಸಮಾಜದ ಗಣ್ಯರೂ ಸೇರಿದಂತೆ ಸಾವಿರಾರು ಅರಬ್ ಮತ್ತು ಯಹೂದಿ ನಾಗರಿಕರು ಇಸ್ರೇಲಿ ನಗರಗಳಲ್ಲಿ, ಹಳ್ಳಿಗಳಲ್ಲಿ ನಡೆಸಿದ ಜಂಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅರಬರು, ಯಹೂದಿಗಳು ಎಂಬ ಯಾವ ವ್ಯತ್ಯಾಸವು ಇಸ್ರೇಲಿನ ಸಾಮಾನ್ಯ ಜನರ ಮಧ್ಯೆ ಇಲ್ಲ. ಮುಸ್ಲೀಮರು ಮತ್ತು ಯಹೂದಿಗಳು ಜೊತೆಗೂಡಿ ನಡೆಸುತ್ತಿರುವ ಹತ್ತಾರು ಕಾರ್ಯಕ್ರಮಗಳ ವಿಶೇಷತೆಯೆಂದರೆ ಅವು “ಫಿರಂಗಿಗಳು ಘರ್ಜಿಸುತ್ತಿರುವಾಗಲೂ” ನಡೆಯುತ್ತಿವೆ ಎಂಬುದೇ ಆಗಿದೆ. ಗಲಭೆಗಳು ಮತ್ತು ಆಕ್ರಮಣಗಳು ಇಸ್ರೇಲ್ ದೇಶದ ಸಾಮಾನ್ಯ ಯಹೂದಿ-ಅರಬ್ ಸಮುದಾಯಗಳಲ್ಲಿ ಯಾವ ವ್ಯತ್ಯಾಸವನ್ನು ಮಾಡಕೂಡದು. ಇದೊಂದೇ ನಮ್ಮ ಮುಂದಿರುವ ಅತೀ ದೊಡ್ಡ ಭರವಸೆಯಾಗಿದೆ. ಈ ಹಿಂದೆಯೂ ಇದೇ ರೀತಿ ಮುಸ್ಲಿಂ ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು ನಡೆದಿತ್ತು. ಆ ಕಾರ್ಯಕ್ರಮಗಳು ಗಲಭೆಗಳ ನಂತರ ನಡೆದಿದ್ದರೆ ಈ ಬಾರಿ ಸಂಘರ್ಷಗಳು ಜಾರಿಯಲ್ಲಿರುವಂತೆಯೇ ಮುಸ್ಲಿಂ ಮತ್ತು ಯಹೂದಿ ಸೌಹಾರ್ದ ಕಾರ್ಯಕ್ರಮಗಳೂ ಜಾರಿಯಲ್ಲಿದೆ.

ಹಾಗಾಗಿ, ಈ ಭಯಾನಕ ಘಟನಗಳು, ಸಾವು ನೋವುಗಳು, ಹತಾಶೆಯಿಂದ ಅಘಾತಕ್ಕೊಳಗಾಗಿರುವ ಇಸ್ರೇಲ್‌ನಲ್ಲಿ ಎಲ್ಲವೂ ಕಳೆದು ಹೋಗಿಲ್ಲ ಎಂಬ ಆಶಾಭಾವ ಮೂಡುತ್ತಿದೆ. ಸಂಘರ್ಷದ ಮಧ್ಯೆಯೇ ಹಲವು ಸಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಮುಸ್ಲಿಂ ಮತ್ತು ಯಹೂದಿಗಳ ಸಹ ಜೀವನ ನಡೆಸಲು ಬೇಕಾಗುವ ವಾತಾವರಣ ನಿರ್ಮಿಸುತ್ತಿರುವುದು ಸಮಾನತೆ ಮತ್ತು ಪರಸ್ಪರ ಗೌರವ ಹುಟ್ಟಿಸುವ ಮೊದಲ ಬೀಜಗಳೆಂದು ನಾವು ನೋಡಬಹುದು. ದೇಶದಲ್ಲಿ ಎಲ್ಲವೂ ಸರಿಯಿದ್ದಾಗ ಸೌಹಾರ್ದತೆಯಿಂದ ವಾಸಿಸುವುದು ದೊಡ್ಡ ವಿಚಾರವಲ್ಲ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗಲೇ ಜನರ ಸೌಹಾರ್ದ ಮನಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ದೇಶದ ಅಭಿವೃದ್ದಿಗೆ ಎಲ್ಲಾ ಸಮುದಾಯಗಳ ಕೊಡುಗೆಯಿದೆ. ಅರಬರು/ಮುಸ್ಲಿಮರು/ಯಹೂದಿಗಳು ಸೇರಿದಂತೆ ಸಮುದಾಯಗಳ ಅಭಿವೃದ್ದಿಯ ಕೊಡುಗೆಯಿಂದ ಇಸ್ರೇಲ್ ಗಟ್ಟಿಗೊಂಡಿದೆ. ಕೆಲ ಮಾನವ ಹಕ್ಕು ನಾಗರಿಕ ಸಂಘಟನೆಗಳು ಸೌಹಾರ್ದತೆಗಾಗಿ ಕೆಲಸ ಮಾಡಿದೆ. ಸಮ ಸಮಾಜಕ್ಕಾಗಿ ಕೆಲಸ ಮಾಡುವ ಅಂತಹ ಸಂಘಟನೆಗಳ ಕೆಲಸ ಫಲಿತಾಂಶ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇಷ್ಟೊಂದು ಸಂಘರ್ಷಗಳ ಮಧ್ಯೆಯೂ ನಮಗೂ ಅದಕ್ಕೂ ಯಾವ ಸಂಬಂಧವಿಲ್ಲ ಎಂಬಂತೆ ಸೌಹಾರ್ದಯುತವಾಗಿ ಬದುಕುವ ಇಸ್ರೇಲಿನ ಹಲವು ಪ್ರದೇಶಗಳು ಇದಕ್ಕೆ ನಿದರ್ಶನವಾಗಿದೆ. ಯಾರು ಏನೇ ಪ್ರಯತ್ನಪಟ್ಟರೂ ನಾವುಗಳು ಹಂಚಿಕೊಂಡು ಬದುಕುವುದನ್ನು ತಪ್ಪಿಸಲಾಗದು.

ಕೆಲವೇ ಕೆಲವು ತಿಂಗಳುಗಳ ಹಿಂದೆ ಹೊರಳಿ ನೋಡಿ, ದೇಶಾದ್ಯಂತದ ಅರಬ್-ಯಹೂದಿ ವೈದ್ಯಕೀಯ ತಂಡಗಳು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡಿದ್ದವು. ವೈರಸ್ ವಿರುದ್ಧ ಜನಸಮುದಾಯದ ಮಧ್ಯೆ ಸೌಹಾರ್ದಯುತವಾಗಿ ಕೆಲಸ ಮಾಡಿದ್ದನ್ನು ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈಗ ಅದೇ ತಂಡಗಳು ಹಿಂಸಾಚಾರದ ವಿರುದ್ಧ ಮತ್ತು ಪರಸ್ಪರ ಸೌಹಾರ್ಧಕ್ಕಾಗಿ ಕರೆ ನೀಡುತ್ತಿದ್ದಾರೆ.

ಕೆಲವು ರಾಜಕಾರಣಿಗಳು, ಸಮುದಾಯದ ಮುಖಂಡರು ಮತ್ತು ಮಾಧ್ಯಮಗಳು ಜನರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿವೆ. ಇಂತಹ ಕಂದಕಗಳನ್ನು ಸೃಷ್ಟಿಸುವವರ ಮಧ್ಯೆ ಮಾನವ ಹಕ್ಕುಗಳ ಪರವಾಗಿನ ಕೆಲ ಅರಬ್ ಮತ್ತು ಯಹೂದಿ ರಾಜಕೀಯ ಮುಖಂಡರು ಸಮುದಾಯಗಳ ಮಧ್ಯೆ ಸಂವಾದವನ್ನು ನಡೆಸುತ್ತಿದ್ದಾರೆ. ಇದು ಮನುಷ್ಯರ ಮಧ್ಯೆ ಇರುವ ಜ್ವಾಲೆಗಳನ್ನು ತಣಿಸುತ್ತಿದೆ.

ಇಸ್ರೇಲಿನಲ್ಲಿ ಸಮುದಾಯಗಳ ಮಧ್ಯೆ ಇರುವ ಆಳವಾದ ಭಿನ್ನಾಭಿಪ್ರಾಯಗಳನ್ನು ಅಲ್ಲಗಳೆಯುವಂತಿಲ್ಲ. ಜೆರುಸಲೆಮ್, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿನ ಘಟನೆಗಳು ಅರಬ್ ಮತ್ತು ಯಹೂದಿ ಸಮುದಾಯಗಳ ಮಧ್ಯೆ ಇರುವ ಸಂಘರ್ಷವನ್ನೇ ಸೂಚಿಸುತ್ತದೆ. ಇದ್ಯಾವುದಕ್ಕೂ ಯುದ್ದ, ಗಲಭೆಗಳು ಪರಿಹಾರವಲ್ಲ. ಪರಸ್ಪರ ಮಾತುಕತೆಗಳೇ ಈ ಸಂಘರ್ಷಕ್ಕೆ ಇರುವ ಪರಿಹಾರ. ಪರಸ್ಪರ ಸೌಹಾರ್ಧ ಸಂಬಂಧಗಳೇ ಈಗಿರುವ ಇಸ್ರೇಲಿನ ದುಗುಡಯುಕ್ತ ವಾತಾವರಣಕ್ಕೆ ಏಕೈಕ ಪರಿಹಾರವಾಗಿದೆ.

ಇಸ್ರೇಲಿನಲ್ಲಿ ಅರಬ್ಬರು ಮತ್ತು ಯಹೂದಿಗಳು ಒಂದೇ ನಗರಗಳಲ್ಲಿ ಅಕ್ಕಪಕ್ಕದಲ್ಲೇ ವಾಸಿಸುತ್ತಾರೆ. ವಿಶೇಷವಾಗಿ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಸೈಟುಗಳನ್ನು ಹಂಚಿಕೊಳ್ಳುವುದರಲ್ಲಿ ಈವರೆಗೂ ತಾರತಮ್ಯ ಮಾಡಿಲ್ಲ. ಆದರೆ ಕಳೆದ ಕೆಲ ದಿನಗಳು ಎರಡೂ ಜನಸಮುದಾಯಗಳು ಭಯ ಮತ್ತು ಅಪನಂಬಿಕೆಯ ವಾತಾವರಣದಲ್ಲಿ ಬದುಕುತ್ತಿದೆ. ಇದು ಎಷ್ಟು ಅಪಾಯಕಾರಿ ಮತ್ತು ಜನರನ್ನು ಮಾನಸಿಕತೆಯ ಮೇಲೆ ಹೊಡೆತ ಬೀರುತ್ತೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಅದಕ್ಕಾಗಿಯೇ ನೆರೆಹೊರೆಯವರನ್ನು, ಬೇರೆ ಬೇರೆ ಸಮುದಾಯಗಳನ್ನು ಒಂದುಗೂಡಿಸುವ ಕಾರ್ಯಚಟುವಟಿಕೆಗಳು ಇಸ್ರೇಲಿನ ಸಧ್ಯದ ಅವಶ್ಯಕತೆಯಾಗಿದೆ.

ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ. ಏಕೆಂದರೆ ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಈ ನೆಲ ಮೂಲವೇ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ‌.

******

ಅಲುಫ್ ಬೆನ್

ಅಲುಫ್ ಬೆನ್ ಇಸ್ರೇಲ್ ನ ಖ್ಯಾತ ಪತ್ರಕರ್ತರು. ಆ ದೇಶದ ನಂಬರ್ 1 ಪತ್ರಿಕೆಯ ಪ್ರಧಾನ ಸಂಪಾದಕರಾಗಿರುವ ಅಲುಫ್ ಬೆನ್ ಚಿಕ್ಕಪ್ಪ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯ ವೇಳೆ ಮೃತರಾಗಿದ್ದಾರೆ. ಹಲವು ಪ್ರತಿಷ್ಟಿತ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿರುವ ಅಲುಫ್ ಬೆನ್ ಇಸ್ರೇಲ್ ನ ಎಲ್ಲಾ ಗಲಭೆ, ಯುದ್ದಗಳನ್ನು ಖುದ್ದು ವರದಿ ಮಾಡಿದ್ದಾರೆ. ಮಾನವ ಹಕ್ಕುಗಳು, ಸಮಾನತೆಯ ಪ್ರತಿಪಾದಕರಾಗಿರುವ ಅಲುಫ್ ಬೆನ್ ಬರಹಗಳ ಜಗತ್ತಿನ ಎಲ್ಲಾ ಕಡೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾರೆ. ಅವರ ಸಂಪಾದಕೀಯವನ್ನು ಅವರ ಆಶಯಕ್ಕೆ ಕುಂದು ಬಾರದ ರೀತಿಯಲ್ಲಿ ಅನುವಾದ ಮಾಡಲಾಗಿದೆ.

ಅನುವಾದ – ನವೀನ್ ಸೂರಿಂಜೆ (ಪತ್ರಕರ್ತರು)


ಇದನ್ನೂ ಓದಿ: ಇಸ್ರೇಲ್ ವಿರುದ್ಧ ಹಮಾಸ್ ದಾಳಿಗೆ ವಿರೋಧ: ಪ್ಯಾಲೆಸ್ಟೈನ್ ಬೆಂಬಲಿಸಿದ ಭಾರತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...